Homeಮುಖಪುಟಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

- Advertisement -
- Advertisement -

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು” ಎಂದು ಹೇಳಿದ್ದಾರೆ.

“ಸಾಂವಿಧಾನಿಕ ಘೋಷಣೆಗಳು ಮತ್ತು ಖಾತರಿಗಳ ಹೊರತಾಗಿಯೂ, ಪೋಲಿಸ್ ಠಾಣೆಗಳಲ್ಲಿ ಪರಿಣಾಮಕಾರಿ ಕಾನೂನು ಪ್ರಾತಿನಿಧ್ಯದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಬಂಧಿತ ವ್ಯಕ್ತಿಗಳಿಗೆ ದೊಡ್ಡ ಹಾನಿಯಾಗಿದೆ. ಅತಿ ಬೇಗನೆ ತೆಗೆದುಕೊಳ್ಳುವ ನಿರ್ಧಾರಗಳು ನಂತರ ಆರೋಪಿಯು ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ನಿರ್ಧರಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಜೆಐ ಹೇಳಿದ್ದಾರೆ. ಆದರೂ ಅವರು ಯಾವುದೇ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲಿಲ್ಲ.

ಪೋಲಿಸರ ಅತಿರೇಕಗಳನ್ನು ನಿಯಂತ್ರಣದಲ್ಲಿಡಲು ನಮ್ಮ ಮುಂದಿರುವ ಮಾರ್ಗವೆಂದರೆ, “ಕಾನೂನು ನೆರವು ಮತ್ತು ಉಚಿತ ಕಾನೂನು ನೆರವು ಸೇವೆಗಳ ಲಭ್ಯತೆಯ ಸಾಂವಿಧಾನಿಕ ಹಕ್ಕಿನ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡುವುದು” ಎಂದು ಅವರು ಸೂಚಿಸಿದರು.

ಕಾನೂನು ಸೇವೆಗಳ ಆ್ಯಪ್ ಬಿಡುಗಡೆ ಅವರು, “ಪ್ರತಿ ಪೊಲೀಸ್ ಠಾಣೆ ಅಥವಾ ಕಾರಾಗೃಹದಲ್ಲಿ ಪ್ರದರ್ಶನ ಫಲಕಗಳು ಮತ್ತು ಬೋರ್ಡ್‌ಗಳನ್ನು ಅಳವಡಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರವು ಕೂಡ ದೇಶಾದ್ಯಂತ ಪೊಲೀಸ್ ಅಧಿಕಾರಿಗಳನ್ನು ಸಂವೇದನಾಶೀಲರನ್ನಾಗಿ ಮಾಡುವ ಕಾರ್ಯಗಾರಗಳನ್ನು ಸಕ್ರಿಯವಾಗಿ ನಡೆಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪರವಾಗಿ ಆರಂಭಿಸಿದ, ಆರೋಪಿಗಳ ಪರ ಕಾನೂನು ಸೇವೆಗಳ ಸುದೀರ್ಘ ಸಂಪ್ರದಾಯವನ್ನು ಭಾರತ ಹೊಂದಿದೆ. “ಒಂದು ಸಂಸ್ಥೆಯಾಗಿ ನ್ಯಾಯಾಂಗವು ನಾಗರಿಕರ ನಂಬಿಕೆಯನ್ನು ಗಳಿಸಲು ಬಯಸಿದರೆ, ನಾವು ಅವರಿಗಾಗಿ ಅಸ್ತಿತ್ವದಲ್ಲಿದ್ದೇವೆ ಎಂದು ಪ್ರತಿಯೊಬ್ಬರಿಗೂ ಭರವಸೆ ಮೂಡಿಸಬೇಕು. ದೀರ್ಘಕಾಲದಿಂದ, ದುರ್ಬಲ ಜನಸಮುದಾಯಗಳು ನ್ಯಾಯ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಕಾನೂನಿನ ನಿಯಮದಿಂದ ಆಳಲ್ಪಡುವ ಸಮಾಜವಾಗಿ ಉಳಿಯಲು ಬಯಸಿದರೆ, ಹೆಚ್ಚಿನ ಸವಲತ್ತು ಮತ್ತು ಅತ್ಯಂತ ದುರ್ಬಲರ ನಡುವೆ ನ್ಯಾಯದ ಲಭ್ಯತೆಯ ಅಂತರವನ್ನು ಕಡಿಮೆ ಮಾಡುವುದು ಅತ್ಯಗತ್ಯ. ಮುಂಬರುವ ಎಲ್ಲಾ ಸಮಯದಲ್ಲೂ, ನಮ್ಮ ರಾಷ್ಟ್ರದಲ್ಲಿ ಚಾಲ್ತಿಯಲ್ಲಿರುವ ಸಾಮಾಜಿಕ-ಆರ್ಥಿಕ ವೈವಿಧ್ಯತೆಯ ಅಸಮಾನತೆಯು ಹಕ್ಕುಗಳ ನಿರಾಕರಣೆಗೆ ಎಂದಿಗೂ ಕಾರಣವಾಗಿರುವುದಿಲ್ಲ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು “ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದರು.


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದ ಮುಖ್ಯ ನ್ಯಾಯಾಧೀಶರಾದ( CJI) ಇವರು ಈ ರೀತಿಯಿಂದ ವ್ಯಕ್ತಪಡಿಸಿದ್ದು ವಿಪರ್ಯಾಸವಾದರೂ ಸತ್ಯ ಇನ್ನಾದರೂ ಈ ರೀತಿ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು
    ಭಾರತ ದೇಶದ ಸಂವಿಧಾನದ ಉದ್ದೇಶವಾದ ಸರ್ವೇ ಜನ ಸುಖಿನೋ ಭವಂತು ಉದ್ದೇಶಕ್ಕಾಗಿ ರಚಿಸಿದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಗೌರವ ಕೊಡುವಂತೆ ಆಗಬೇಕೆಂದು ಕೇಳಿಕೊಳ್ಳುತ್ತೇನೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...