Homeಮುಖಪುಟಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

ಒಲಿಂಪಿಕ್ಸ್‌ನಲ್ಲಿ ರೈತರ ಮಕ್ಕಳ ಕಮಾಲ್, ಸಂತಸ ಹಂಚಿಕೊಂಡ ಪ್ರತಿಭಟನಾ ನಿರತ ರೈತರು

- Advertisement -
- Advertisement -

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಳು ಪದಕ ಗಳಿಸಿ ಸಾಧನೆ ಮಾಡಿರುವ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಹಲವರು ರೈತರ ಮಕ್ಕಳು ಎಂಬುದು ಗಮನಾರ್ಹ. ತಮ್ಮ ಮಕ್ಕಳ ಸಾಧನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲೇ ಘೋಷಣೆಗಳನ್ನು ಕೂಗಿ ಸಂತಸ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #FarmersShineInOlympics ಹ್ಯಾಶ್‌ಟ್ಯಾಗ್ ಬಳಸಿ ಒಲಿಂಪಿಕ್ ವಿಜೇತರನ್ನು ಅಭಿನಂದಿಸಲಾಗುತ್ತಿದೆ. ನೀರಜ್‌ ಛೋಪ್ರಾ, ಬಜರಂಗ್‌ ಪೂನಿಯಾ, ರವಿಕುಮಾರ್, ಅಂಶು ಮಲ್ಲಿಕ್, ಶ್ರೀಜೇಶ್ ಸೇರಿದಂತೆ ಹಲವು ಕ್ರೀಡಾ ತಾರೆಗಳು ರೈತರ ಮಕ್ಕಳು.

ರೈತರ ಮಗ 24 ವರ್ಷದ ಹರಿಯಾಣದ ನೀರಜ್‌ ಛೋಪ್ರಾ ಜಾವೆಲಿನ್‌ ಎಸೆತದಲ್ಲಿ ಸಾಧನೆಗೈದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅಥ್ಲೀಟ್‌ ವಿಭಾಗದಲ್ಲಿ 100 ವರ್ಷಗಳ ಬಳಿಕ ಭಾರತೀಯ ಕ್ರೀಡಾಪಟುವೊಬ್ಬ ಮಾಡಿದ ಸಾಧನೆ ಇದು ಎಂದು ಬಣ್ಣಿಸಲಾಗಿದೆ.

ಹರಿಯಾಣದ ಸೋನಿಪತ್‌ ಜಿಲ್ಲೆಯ ನಹ್ರಿ ಗ್ರಾಮದ ಕುಸ್ತಿಪಟು ರವಿಕುಮಾರ್ ಬೆಳ್ಳಿಯ ಪದಕವನ್ನು ಗೆದ್ದು ತಂದಿದ್ದಾರೆ. ಅದೇ ರಾಜ್ಯದ ಬಜರಂಗ್‌ ಪೂನಿಯಾ ಶನಿವಾರ 64 ಕೆ ಜಿ ವಿಭಾಗದ ಕುಸ್ತಿಯಲ್ಲಿ ಕಜಕಿಸ್ತಾನದ ದೌಲತ್‌ ನಿಯಾಜ್‌ಬೆಕೋವ್ ಅವರನ್ನು 8-0 ಅಂತರದಲ್ಲಿ ಸೋಲಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ನೀರಜ್‌ ತಂದೆ ರೈತ. ತಾಯಿ ಗೃಹಿಣಿ, ಕೂಡು ಕುಟುಂಬ. ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗಿಗಳಿಲ್ಲದ ಕುಟುಂಬ.  ತಾನು ಕ್ರೀಡೆಯಲ್ಲಿ ಸಾಧನೆ ಮಾಡಿ ಸೇನೆಗೆ ಸೇರಿದ್ದು ತನ್ನ ಅಭ್ಯಾಸಕ್ಕೆ ಮತ್ತು ಕುಟುಂಬಕ್ಕೆ ಅಗತ್ಯವಾದ ಸಂಪಾದನೆ ಸಾಧ್ಯವಾಯಿತು ಎಂದು ನೀರಜ್‌ ಹೇಳಿಕೊಂಡಿದ್ದರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಹಾಕಿಯಲ್ಲಿ ಸಾಧನೆ ಮಾಡಿದ ಗೋಲ್‌ ಕೀಪರ್‌ ಶ್ರೀಜೇಶ್ ಕೂಡ ರೈತರ ಮಗನಾಗಿದ್ದು, ಮಗನ ಕನಸಿಗೆ ನೀರೆರೆಯಲು ತಂದೆ ತಮ್ಮ ಹಸುವನ್ನು ಮಾರಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಹರಿಯಾಣದ ಜಝ್ಜರ್‌ನ ಕುಸ್ತಿಪಟು ಬಜರಂಗ್‌ ಪೂನಿಯಾ ರೈತ ಕುಟುಂಬದಿಂದ ಬಂದವರು. ಕಳೆದ ಡಿಸೆಂಬರ್‌ನಲ್ಲಿ ದೆಹಲಿ ಗಡಿಗಳಲ್ಲಿ ರೈತರ ಹೋರಾಟ ತೀವ್ರಗೊಂಡಾಗ ಹಲವು ಕ್ರೀಡಾಪಟುಗಳು ಬೆಂಬಲ ಸೂಚಿಸಿದ್ದರು. ಆಗ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿ ಖೇಲ್‌ರತ್ನವನ್ನು ಹಿಂದಿರುಗಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಕೂಡ ತಮ್ಮ ಬೆಂಬಲವನ್ನು ಸೂಚಿಸಿದ್ದರು.

“ಭಾರತ ಒಂದು ಕೃಷಿ ಪ್ರದಾನ ದೇಶ, ದೇಶದ ಆರ್ಥಿಕತೆಯು ಕೂಡ ಕೃಷಿಯ ಮೇಲೆ ಅವಲಂಬಿತವಾಗಿದೆ. ಸರ್ಕಾರದ ಧೋರಣೆಯಿಂದಾಗಿ ರೈತರು ಬೀದಿಗೆ ಬರುವಂತಾಗಿದೆ. ನಾವು ರೈತರ ಮಕ್ಕಳು. ದೇಶದ ಪ್ರತಿಯೊಬ್ಬ ಪ್ರಜೆಯೂ ರೈತ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಒಲಿಂಪಿಕ್ ವಿಜೇತರ ಚಿತ್ರಗಳನ್ನು ಹಾಕಿ, ರೈತರ ಮಕ್ಕಳ ಸಾಧನೆ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...