Homeಚಳವಳಿರೈತ ಹೋರಾಟ: ಮುಂದಿನ 6 ತಿಂಗಳಿಗಾಗಿ ಪಡಿತರ ಸಂಗ್ರಹಿಸುತ್ತಿರುವ ರೈತ ಮಹಿಳೆಯರು

ರೈತ ಹೋರಾಟ: ಮುಂದಿನ 6 ತಿಂಗಳಿಗಾಗಿ ಪಡಿತರ ಸಂಗ್ರಹಿಸುತ್ತಿರುವ ರೈತ ಮಹಿಳೆಯರು

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಪ್ರತಿಭಟನೆಗೆ ಎಂಟು ತಿಂಗಳು ತುಂಬಿದೆ. ಈ ನಡುವೆ ಪಂಜಾಬ್ ಮತ್ತು ಹರಿಯಾಣದಲ್ಲಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಆರಂಭವಾಗಿ 11 ತಿಂಗಳುಗಳು ತುಂಬುತ್ತಿವೆ. ದೆಹಲಿಯ ಇನ್ನು ದೀರ್ಘಾಕಾಲಿನ ಪ್ರತಿಭಟನೆಗೆ ರೈತರು ಸಿದ್ಧರಾಗುತ್ತಿದ್ದು, ಅದಕ್ಕೆ ಬೇಕಾದ ಪಡಿತರ ಸಂಗ್ರಹಣೆಗೆ ಮುಂದಾಗುತ್ತಿದ್ದಾರೆ.

ಭಾರತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹಣ್) ಸಂಘಟನೆ ಸದಸ್ಯರು ಆಗಸ್ಟ್ 15 ರಂದು ಕರಾಳ ಕೃಷಿ ಕಾನೂನುಗಳನ್ನು ವಿರೋಧಿಸಿ, ಪಂಜಾಬ್‌ನ ಮೊಗಾ, ಬಟಿಂಡಾ ಮತ್ತು ಸಂಗ್ರೂರ್ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ಇದರ ಜೊತೆಗೆ ಪ್ರತಿಭಟನೆಗಾಗಿ ಮುಂದಿನ ಆರು ತಿಂಗಳವರೆಗೆ ಸಾಕಾಗುವ ಒಣ ಪಡಿತರ ಸಂಗ್ರಹಿಸುವಲ್ಲಿ ಮಹಿಳಾ ರೈತರು ನಿರತರಾಗಿದ್ದಾರೆ.

40 ರಿಂದ 70 ವರ್ಷದೊಳಗಿನ 100 ಕ್ಕೂ ಹೆಚ್ಚು ಮಹಿಳೆಯರು ತಮ್ಮ ತಲೆಯ ಮೇಲೆ ಹಳದಿ ದುಪಟ್ಟಾಗಳನ್ನು ಹೊದ್ದುಕೊಂಡು, ಚೀಲಗಳನ್ನು ಹಿಡಿದು ಮನೆ ಮನೆಗೆ ತೆರಳಿ ದ್ವಿದಳ ಧಾನ್ಯಗಳು, ಸಕ್ಕರೆ, ಹಿಟ್ಟು, ಅಡುಗೆ ಎಣ್ಣೆ, ಅಕ್ಕಿ, ಈರುಳ್ಳಿ ಮತ್ತು ಇತರ ಅಗತ್ಯ ವಸ್ತುಗಳನ್ನು ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಕಿಸಾನ್ ಸಂಸತ್: ರೈತರಿಗೆ ಬೆಂಬಲ ನೀಡಿ ವಿಪಕ್ಷ ನಾಯಕರ ಜಂಟಿ ಪ್ರತಿಭಟನೆ

ಆಹಾರ ಧಾನ್ಯಗಳನ್ನು ಸಂಗ್ರಹಿಸುವ ಮಹಿಳೆಯರ ಜೊತೆಗೆ ಪುರುಷ ರೈತರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಅವರು ಸಂಗ್ರಹಿಸಿದ ಪಡಿತರ ತುಂಬಿಕೊಲ್ಳುವುದು, ಅವರನ್ನು ಸ್ಥಳದಿಂದ ಸ್ಥಳಕ್ಕೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ.

ಒಣ ಪಡಿತರ ಸಂಗ್ರಹಣೆ ಜೊತೆ ಜೊತೆಗೆ ರೈತ ವಿರೋಧಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ಹಳ್ಳಿಗಳಲ್ಲಿ ಇತರ ಜನರನ್ನು ಪ್ರೇರೇಪಿಸುತ್ತಿದ್ದಾರೆ.

“ನಾವು ಮೊದಲು ಕೂಡ ಆಹಾರ ಧಾನ್ಯ ಸಂಗ್ರಹಣೆ ಮಾಡಿದ್ದೇವೆ. ಪ್ರತಿಭಟನಾ ಸ್ಥಳಗಳಲ್ಲಿ ಸಂಗ್ರಹಿಸಿದ ಪಡಿತರವನ್ನು ಬಳಸಲಾಗುವುದು. ಪ್ರಧಾನಿ ಮೋದಿ ಕರಾಳ ಕರಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಆಂದೋಲನ ಮುಂದುವರಿಯುತ್ತದೆ” ಎಂದು 62 ವರ್ಷದ BKU ಉಗ್ರಾಣದ ಘರಾಚೋನ್ ಗ್ರಾಮ ಘಟಕದ ಮುಖ್ಯಸ್ಥೆ ರಣಜಿತ್ ಕೌರ್ ತಿಳಿಸಿದ್ದಾರೆ.

ದೆಹಲಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಸಂಸತ್ ನಡೆದ ಎಲ್ಲಾ ದಿನಗಳಲ್ಲೂ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಿಸಾನ್ ಸಂಸತ್ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...