Homeಮುಖಪುಟಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

- Advertisement -
- Advertisement -

ಅನೈತಿಕ ಸರ್ಕಾರದಲ್ಲಿ ಸಂವಿಧಾನಾತ್ಮಕವಾಗಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಯಾವುದೋ ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಬೇಕು ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಿವಿಮಾತು ಹೇಳಿದ್ದಾರೆ.

ಹಿಂದೆ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ಇರಲಿಲ್ಲ. ಆದರೆ ಈಗ ಯಾರಾದರೂ ಮುಟ್ಟಿದರೆ ವಾಪಸ್ ಒಂದಕ್ಕೆ ಎರಡು ತೆಗೆದುಬಿಡುತ್ತೇವೆ, ಅಷ್ಟರಮಟ್ಟಿಗೆ ಬಿಜೆಪಿ ಬೆಳೆದಿದೆ ಎಂದು ನಿನ್ನೆ ಸಚಿವ ಈಶ್ವರಪ್ಪನವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, “ಈಗ ಬಿಜೆಪಿ ಬೃಹತ್ ಆಗಿ ಬೆಳೆದಿದೆ. ಹಿಂದೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಕೇವಲ ಶಾಂತವಾಗಿರಿ ಎನ್ನುತ್ತಿದ್ದಾರೆ. ಆದರೆ ಈಗ ಒಂದಕ್ಕೆ ಎರಡು ತೆಗೆದುಬಿಡಿ ಎನ್ನುವಷ್ಟರ ಮಟ್ಟಿಗೆ ಬೆಳೆದಿದ್ದೇವೆ” ಎಂದು ಹೇಳಿದ್ದರು.

ಇದಕ್ಕೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹೆಚ್.ಸಿ.ಮಹದೇವಪ್ಪನವರು, “ನಿಮ್ಮ ಪಕ್ಷದ ಅಜ್ಞಾನಿಗಳೆಲ್ಲಾ ಸೇರಿಕೊಂಡು ಜನ ಸಾಮಾನ್ಯರ ಬದುಕಲ್ಲಿ ಉಂಟು ಮಾಡಿರುವ ಸಂಕಷ್ಟಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷದ ಬಳಿ ಸರಿಯಾದ ಆಡಳಿತಾತ್ಮಕ ಸಲಹೆಗಳನ್ನು ಪಡೆಯಿರಿ. ಕಾರಣ ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಹೀಗೆ ರೌಡಿಗಳಂತೆ ಮಾತನಾಡುವುದು ಮತ್ತು ದ್ವೇಷ ಹಬ್ಬಿಸಿ ಸಮಾಜವನ್ನು ಹಾಳು ಮಾಡುವುದು ಬಿಟ್ಟರೆ ಮತ್ತೇನೂ ಬರುವುದಿಲ್ಲ ಎಂಬುದು ನಮಗೆ ಗೊತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

ವಾಸ್ತವವಾಗಿ ಹೇಳುವುದಾದರೆ ಕರೋನಾ ಸಂದರ್ಭದಲ್ಲಿ ನಿಮ್ಮಂತಹ ಅವಿವೇಕಿಗಳ ಆಡಳಿತ ವೈಫಲ್ಯದಿಂದಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಈ ರಾಜ್ಯದ ಎಲ್ಲಾ ಪಕ್ಷಕ್ಕೆ ಸೇರಿದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದು, ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ್ತು ಜಾತ್ಯಾತೀತವಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹಿಂದೂಗಳ ರಕ್ಷಣೆ ಎಂದು ಗಂಟಲು ಹರಿದುಕೊಳ್ಳುತ್ತಿದ್ದ ನಿಮಗೆ ಅವರ ರಕ್ಷಣೆ ಇರಲಿ ಒಂದು ಆಕ್ಸಿಜನ್ ಬೆಡ್ ಹೊಂದಿಸಲು ಆಗಲಿಲ್ಲ ನಿಮ್ಮ ಯೋಗ್ಯತೆಗೆ. ನನ್ನ ಪ್ರಕಾರ ಆಡಳಿತಾತ್ಮಕವಾಗಿ ಅಂದೇ ನಿಮ್ಮ ಸರ್ಕಾರ ಸತ್ತು ಹೋಗಿದೆ ಎಂದು ಮಹಾದೇವಪ್ಪ ಕಿಡಿಕಾರಿದ್ದಾರೆ.

ಜನರ ದೈನಂದಿನ ಬದುಕಿನ ಕಷ್ಟಗಳ ಮುಂದೆ ನಿಮ್ಮ ಈ ದ್ವೇಷ ಹರಡುವ ಮಾತುಗಳಿಗೆ, “ಒಂದು ಕೊಟ್ಟರೆ, ಎರಡು ಕೊಡುತ್ತೇವೆ,” ಎಂಬ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಏಕೆಂದರೆ ಜನ ಸಾಮಾನ್ಯರು ಮತ್ತು ಪಕ್ಷದ ಕಾರ್ಯಕರ್ತರು ನೀವು ಹೇಳಿದಂತೆ ಹೊಡಿ ಬಡಿ ಜಗಳ ಮತ್ತು ಹಿಂಸಾಚಾರವನ್ನು ಎಂದಿಗೂ ಇಷ್ಟಪಡುವುದಿಲ್ಲ. ಇದೆಲ್ಲಾ ನಿಮ್ಮಂತಹ ಹುಳಿತೇಗಿನ ಮಂದಿಯ ಸೊಕ್ಕಿನ ಪ್ರಲಾಪವಷ್ಟೇ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಜನ ಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ನೀಡುವುದಷ್ಟೇ ನಿಮಗೆ ಉಳಿದಿರುವ ಅನಿವಾರ್ಯ ಆಯ್ಕೆಯಾಗಿದೆ ಎಂಬುದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ನೆಟ್ಟಗೆ ಕಾರ್ಯ ನಿರ್ವಹಿಸಿ, ಇಲ್ಲವೇ ರಾಜೀನಾಮೆ ಕೊಟ್ಟು ಹೊರಡಿ ಎಂದು ಅವರು ಹೇಳಿದ್ದಾರೆ.

ಸದಾ ಅಸಂವಿಧಾನಿಕವಾಗಿ ಮಾತನಾಡುವ ಮತ್ತು ಸಾರ್ವಜನಿಕ ಜೀವನದಲ್ಲಿ ಇರಲು ಲಾಯಕ್ಕಿಲ್ಲದ ಇಂತಹವರ ರಾಜೀನಾಮೆಯನ್ನು ಪಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಈ ಮೂಲಕ ಆಗ್ರಹಿಸುತ್ತೇನೆ ಎಂದು ಮಹಾದೇವಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: SSLC Result | ಎಸ್‌ಎಸ್‌ಎಲ್‌ಸಿ ರಿಸಲ್ಟ್‌‌ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...