Homeಮುಖಪುಟಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

- Advertisement -
- Advertisement -

ಅನೈತಿಕ ಸರ್ಕಾರದಲ್ಲಿ ಸಂವಿಧಾನಾತ್ಮಕವಾಗಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಯಾವುದೋ ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಬೇಕು ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಿವಿಮಾತು ಹೇಳಿದ್ದಾರೆ.

ಹಿಂದೆ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ಇರಲಿಲ್ಲ. ಆದರೆ ಈಗ ಯಾರಾದರೂ ಮುಟ್ಟಿದರೆ ವಾಪಸ್ ಒಂದಕ್ಕೆ ಎರಡು ತೆಗೆದುಬಿಡುತ್ತೇವೆ, ಅಷ್ಟರಮಟ್ಟಿಗೆ ಬಿಜೆಪಿ ಬೆಳೆದಿದೆ ಎಂದು ನಿನ್ನೆ ಸಚಿವ ಈಶ್ವರಪ್ಪನವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, “ಈಗ ಬಿಜೆಪಿ ಬೃಹತ್ ಆಗಿ ಬೆಳೆದಿದೆ. ಹಿಂದೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಕೇವಲ ಶಾಂತವಾಗಿರಿ ಎನ್ನುತ್ತಿದ್ದಾರೆ. ಆದರೆ ಈಗ ಒಂದಕ್ಕೆ ಎರಡು ತೆಗೆದುಬಿಡಿ ಎನ್ನುವಷ್ಟರ ಮಟ್ಟಿಗೆ ಬೆಳೆದಿದ್ದೇವೆ” ಎಂದು ಹೇಳಿದ್ದರು.

ಇದಕ್ಕೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹೆಚ್.ಸಿ.ಮಹದೇವಪ್ಪನವರು, “ನಿಮ್ಮ ಪಕ್ಷದ ಅಜ್ಞಾನಿಗಳೆಲ್ಲಾ ಸೇರಿಕೊಂಡು ಜನ ಸಾಮಾನ್ಯರ ಬದುಕಲ್ಲಿ ಉಂಟು ಮಾಡಿರುವ ಸಂಕಷ್ಟಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷದ ಬಳಿ ಸರಿಯಾದ ಆಡಳಿತಾತ್ಮಕ ಸಲಹೆಗಳನ್ನು ಪಡೆಯಿರಿ. ಕಾರಣ ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಹೀಗೆ ರೌಡಿಗಳಂತೆ ಮಾತನಾಡುವುದು ಮತ್ತು ದ್ವೇಷ ಹಬ್ಬಿಸಿ ಸಮಾಜವನ್ನು ಹಾಳು ಮಾಡುವುದು ಬಿಟ್ಟರೆ ಮತ್ತೇನೂ ಬರುವುದಿಲ್ಲ ಎಂಬುದು ನಮಗೆ ಗೊತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

ವಾಸ್ತವವಾಗಿ ಹೇಳುವುದಾದರೆ ಕರೋನಾ ಸಂದರ್ಭದಲ್ಲಿ ನಿಮ್ಮಂತಹ ಅವಿವೇಕಿಗಳ ಆಡಳಿತ ವೈಫಲ್ಯದಿಂದಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಈ ರಾಜ್ಯದ ಎಲ್ಲಾ ಪಕ್ಷಕ್ಕೆ ಸೇರಿದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದು, ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ್ತು ಜಾತ್ಯಾತೀತವಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹಿಂದೂಗಳ ರಕ್ಷಣೆ ಎಂದು ಗಂಟಲು ಹರಿದುಕೊಳ್ಳುತ್ತಿದ್ದ ನಿಮಗೆ ಅವರ ರಕ್ಷಣೆ ಇರಲಿ ಒಂದು ಆಕ್ಸಿಜನ್ ಬೆಡ್ ಹೊಂದಿಸಲು ಆಗಲಿಲ್ಲ ನಿಮ್ಮ ಯೋಗ್ಯತೆಗೆ. ನನ್ನ ಪ್ರಕಾರ ಆಡಳಿತಾತ್ಮಕವಾಗಿ ಅಂದೇ ನಿಮ್ಮ ಸರ್ಕಾರ ಸತ್ತು ಹೋಗಿದೆ ಎಂದು ಮಹಾದೇವಪ್ಪ ಕಿಡಿಕಾರಿದ್ದಾರೆ.

ಜನರ ದೈನಂದಿನ ಬದುಕಿನ ಕಷ್ಟಗಳ ಮುಂದೆ ನಿಮ್ಮ ಈ ದ್ವೇಷ ಹರಡುವ ಮಾತುಗಳಿಗೆ, “ಒಂದು ಕೊಟ್ಟರೆ, ಎರಡು ಕೊಡುತ್ತೇವೆ,” ಎಂಬ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಏಕೆಂದರೆ ಜನ ಸಾಮಾನ್ಯರು ಮತ್ತು ಪಕ್ಷದ ಕಾರ್ಯಕರ್ತರು ನೀವು ಹೇಳಿದಂತೆ ಹೊಡಿ ಬಡಿ ಜಗಳ ಮತ್ತು ಹಿಂಸಾಚಾರವನ್ನು ಎಂದಿಗೂ ಇಷ್ಟಪಡುವುದಿಲ್ಲ. ಇದೆಲ್ಲಾ ನಿಮ್ಮಂತಹ ಹುಳಿತೇಗಿನ ಮಂದಿಯ ಸೊಕ್ಕಿನ ಪ್ರಲಾಪವಷ್ಟೇ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಜನ ಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ನೀಡುವುದಷ್ಟೇ ನಿಮಗೆ ಉಳಿದಿರುವ ಅನಿವಾರ್ಯ ಆಯ್ಕೆಯಾಗಿದೆ ಎಂಬುದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ನೆಟ್ಟಗೆ ಕಾರ್ಯ ನಿರ್ವಹಿಸಿ, ಇಲ್ಲವೇ ರಾಜೀನಾಮೆ ಕೊಟ್ಟು ಹೊರಡಿ ಎಂದು ಅವರು ಹೇಳಿದ್ದಾರೆ.

ಸದಾ ಅಸಂವಿಧಾನಿಕವಾಗಿ ಮಾತನಾಡುವ ಮತ್ತು ಸಾರ್ವಜನಿಕ ಜೀವನದಲ್ಲಿ ಇರಲು ಲಾಯಕ್ಕಿಲ್ಲದ ಇಂತಹವರ ರಾಜೀನಾಮೆಯನ್ನು ಪಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಈ ಮೂಲಕ ಆಗ್ರಹಿಸುತ್ತೇನೆ ಎಂದು ಮಹಾದೇವಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: SSLC Result | ಎಸ್‌ಎಸ್‌ಎಲ್‌ಸಿ ರಿಸಲ್ಟ್‌‌ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...