Homeಮುಖಪುಟಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

- Advertisement -
- Advertisement -

ಅನೈತಿಕ ಸರ್ಕಾರದಲ್ಲಿ ಸಂವಿಧಾನಾತ್ಮಕವಾಗಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಯಾವುದೋ ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಬೇಕು ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಿವಿಮಾತು ಹೇಳಿದ್ದಾರೆ.

ಹಿಂದೆ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ಇರಲಿಲ್ಲ. ಆದರೆ ಈಗ ಯಾರಾದರೂ ಮುಟ್ಟಿದರೆ ವಾಪಸ್ ಒಂದಕ್ಕೆ ಎರಡು ತೆಗೆದುಬಿಡುತ್ತೇವೆ, ಅಷ್ಟರಮಟ್ಟಿಗೆ ಬಿಜೆಪಿ ಬೆಳೆದಿದೆ ಎಂದು ನಿನ್ನೆ ಸಚಿವ ಈಶ್ವರಪ್ಪನವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, “ಈಗ ಬಿಜೆಪಿ ಬೃಹತ್ ಆಗಿ ಬೆಳೆದಿದೆ. ಹಿಂದೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಕೇವಲ ಶಾಂತವಾಗಿರಿ ಎನ್ನುತ್ತಿದ್ದಾರೆ. ಆದರೆ ಈಗ ಒಂದಕ್ಕೆ ಎರಡು ತೆಗೆದುಬಿಡಿ ಎನ್ನುವಷ್ಟರ ಮಟ್ಟಿಗೆ ಬೆಳೆದಿದ್ದೇವೆ” ಎಂದು ಹೇಳಿದ್ದರು.

ಇದಕ್ಕೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹೆಚ್.ಸಿ.ಮಹದೇವಪ್ಪನವರು, “ನಿಮ್ಮ ಪಕ್ಷದ ಅಜ್ಞಾನಿಗಳೆಲ್ಲಾ ಸೇರಿಕೊಂಡು ಜನ ಸಾಮಾನ್ಯರ ಬದುಕಲ್ಲಿ ಉಂಟು ಮಾಡಿರುವ ಸಂಕಷ್ಟಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷದ ಬಳಿ ಸರಿಯಾದ ಆಡಳಿತಾತ್ಮಕ ಸಲಹೆಗಳನ್ನು ಪಡೆಯಿರಿ. ಕಾರಣ ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಹೀಗೆ ರೌಡಿಗಳಂತೆ ಮಾತನಾಡುವುದು ಮತ್ತು ದ್ವೇಷ ಹಬ್ಬಿಸಿ ಸಮಾಜವನ್ನು ಹಾಳು ಮಾಡುವುದು ಬಿಟ್ಟರೆ ಮತ್ತೇನೂ ಬರುವುದಿಲ್ಲ ಎಂಬುದು ನಮಗೆ ಗೊತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

ವಾಸ್ತವವಾಗಿ ಹೇಳುವುದಾದರೆ ಕರೋನಾ ಸಂದರ್ಭದಲ್ಲಿ ನಿಮ್ಮಂತಹ ಅವಿವೇಕಿಗಳ ಆಡಳಿತ ವೈಫಲ್ಯದಿಂದಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಈ ರಾಜ್ಯದ ಎಲ್ಲಾ ಪಕ್ಷಕ್ಕೆ ಸೇರಿದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದು, ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ್ತು ಜಾತ್ಯಾತೀತವಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹಿಂದೂಗಳ ರಕ್ಷಣೆ ಎಂದು ಗಂಟಲು ಹರಿದುಕೊಳ್ಳುತ್ತಿದ್ದ ನಿಮಗೆ ಅವರ ರಕ್ಷಣೆ ಇರಲಿ ಒಂದು ಆಕ್ಸಿಜನ್ ಬೆಡ್ ಹೊಂದಿಸಲು ಆಗಲಿಲ್ಲ ನಿಮ್ಮ ಯೋಗ್ಯತೆಗೆ. ನನ್ನ ಪ್ರಕಾರ ಆಡಳಿತಾತ್ಮಕವಾಗಿ ಅಂದೇ ನಿಮ್ಮ ಸರ್ಕಾರ ಸತ್ತು ಹೋಗಿದೆ ಎಂದು ಮಹಾದೇವಪ್ಪ ಕಿಡಿಕಾರಿದ್ದಾರೆ.

ಜನರ ದೈನಂದಿನ ಬದುಕಿನ ಕಷ್ಟಗಳ ಮುಂದೆ ನಿಮ್ಮ ಈ ದ್ವೇಷ ಹರಡುವ ಮಾತುಗಳಿಗೆ, “ಒಂದು ಕೊಟ್ಟರೆ, ಎರಡು ಕೊಡುತ್ತೇವೆ,” ಎಂಬ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಏಕೆಂದರೆ ಜನ ಸಾಮಾನ್ಯರು ಮತ್ತು ಪಕ್ಷದ ಕಾರ್ಯಕರ್ತರು ನೀವು ಹೇಳಿದಂತೆ ಹೊಡಿ ಬಡಿ ಜಗಳ ಮತ್ತು ಹಿಂಸಾಚಾರವನ್ನು ಎಂದಿಗೂ ಇಷ್ಟಪಡುವುದಿಲ್ಲ. ಇದೆಲ್ಲಾ ನಿಮ್ಮಂತಹ ಹುಳಿತೇಗಿನ ಮಂದಿಯ ಸೊಕ್ಕಿನ ಪ್ರಲಾಪವಷ್ಟೇ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಜನ ಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ನೀಡುವುದಷ್ಟೇ ನಿಮಗೆ ಉಳಿದಿರುವ ಅನಿವಾರ್ಯ ಆಯ್ಕೆಯಾಗಿದೆ ಎಂಬುದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ನೆಟ್ಟಗೆ ಕಾರ್ಯ ನಿರ್ವಹಿಸಿ, ಇಲ್ಲವೇ ರಾಜೀನಾಮೆ ಕೊಟ್ಟು ಹೊರಡಿ ಎಂದು ಅವರು ಹೇಳಿದ್ದಾರೆ.

ಸದಾ ಅಸಂವಿಧಾನಿಕವಾಗಿ ಮಾತನಾಡುವ ಮತ್ತು ಸಾರ್ವಜನಿಕ ಜೀವನದಲ್ಲಿ ಇರಲು ಲಾಯಕ್ಕಿಲ್ಲದ ಇಂತಹವರ ರಾಜೀನಾಮೆಯನ್ನು ಪಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಈ ಮೂಲಕ ಆಗ್ರಹಿಸುತ್ತೇನೆ ಎಂದು ಮಹಾದೇವಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: SSLC Result | ಎಸ್‌ಎಸ್‌ಎಲ್‌ಸಿ ರಿಸಲ್ಟ್‌‌ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...