Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...