Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...