Homeಸಿನಿಮಾಕ್ರೀಡೆನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್...

ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನೀರಜ್ ಚೋಪ್ರಾಗೆ ಕಾಶಿನಾಥ್ ನಾಯ್ಕ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶಿನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ಭಾರತ 120 ವರ್ಷಗಳ ನಂತರ ಒಲಿಂಪಿಕ್ಸ್ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕವೊಂದಕ್ಕೆ ಕೊರಳೊಡ್ಡಿತು. ಚಿನ್ನದ ತೋಳಿನ ಹುಡುಗ ನೀರಜ್ ಚೋಪ್ರಾ 87.65 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದರು. ಇಡೀ ದೇಶವೇ ಈ ಸಂಭ್ರಮಕ್ಕೆ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ಚೋಪ್ರಾಗೆ ಕೋಚ್ ಆಗಿ ಸಾಧನೆ ಹಿಂದಿದ್ದ ಉವೆ ಹಾನ್, ಜೈವೀರ್ ಚೌಧರಿ, ಡಾ. ಕ್ಲಾಸ್ ಬಾರ್ಟೋನಿಯೆಟ್ಜ್, ಆಸ್ಟ್ರೇಲಿಯಾದ ಗ್ಯಾರಿ ಕ್ಯಾಲ್ವರ್ಟ್ ಮತ್ತು ಕನ್ನಡಿಗ ಕಾಶಿನಾಥ್ ನಾಯ್ಕರನ್ನು ಕೊಂಡಾಡಲಾಯಿತು.

ಇನ್ನು ನೀರಜ್ ಚೋಪ್ರಾಗೂ ಕರ್ನಾಟಕಕ್ಕೂ ನಿಕಟ ನಂಟಿದೆ. ಇಲ್ಲಿನ ಜೆಎಸ್‌ಡಬ್ಲು ಕಂಪನಿ ಅವರಿಗೆ ತರಬೇತಿಗೆ ಸ್ಪಾನ್ಸರ್ ಮಾಡಿದ್ದರು. ಕನ್ನಡಿಗ, ಸೈನಿಕ, ಶಿರಸಿಯ ಕಾಶಿನಾಥ್ ನಾಯ್ಕರವರು 2015 ರಿಂದ 2017ರವರೆಗೆ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದರು. ಇದು ಸಹಜವಾಗಿಯೇ ಕನ್ನಡಿಗರಲ್ಲಿ ಅಭಿಮಾನ ಮೂಡಿಸಿತ್ತು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶಿನಾಥ್ ನಾಯ್ಕ್‌ರವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದಾರೆ.

ಈ ಸಂಭ್ರಮಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೀರಜ್ ಚೋಪ್ರಾಗೆ ಕಾಶಿನಾಥ್ ನಾಯ್ಕ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶಿನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.
ಇಂತಹ ವ್ಯಕ್ತಿಯ ಬಗ್ಗೆ ತಮಗೆ ಗೊತ್ತೆ ಇಲ್ಲ ಎಂದು ಅದಿಲ್ಲೆ ಸುಮರಿವಾಲಾ ಹೇಳಿಕೆ ನೀಡಿರುವುದು ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಕನ್ನಡಿಗರು ಸುಮರಿವಾಲ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಾಶಿನಾಥ್ ನಾಯ್ಕರವರನ್ನು ಸಂಪರ್ಕಿಸಿದಾಗ “ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದರು.

“2015ರಲ್ಲಿ ಮಂಗಳೂರಿನಲ್ಲಿ ಅಂತರ್‌ರಾಜ್ಯ ಕಾಂಪಿಟೇಶನ್ ನಡೆದಿತ್ತು. ಆಗ ನನ್ನ ಶಿಷ್ಯಂದಿರಾದ ದೇವೇಂದ್ರ ಮೊದಲ ಸ್ಥಾನ ಪಡೆದರೆ ನೀರಜ್ ಚೋಪ್ರ ದ್ವಿತೀಯ ಸ್ಥಾನ ಪಡೆದಿದ್ದ. ನಾನು ನೀರಜ್ ಮಾತ್ರವಲ್ಲದೆ ಅನುರಾಣಿ, ಶಿವಪಾಲ್ ಸೇರಿದಂತೆ ಹಲವರಿಗೆ ಕೋಚ್ ಆಗಿ ಕೆಲಸ ಮಾಡಿದ್ದೇನೆ. ನಾನು 2017 ರಿಂದೀಚೆಗೆ ಸೈನ್ಯದ ಕಡೆ ಬಂದ ನಂತರವೇ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಅದಿಲ್ಲೆ ಸುಮರಿವಾಲಾ ಅಧಿಕಾರ ವಹಿಸಿಕೊಂಡಿದ್ದಾರೆ. ಹಾಗಾಗಿ ತಿಳಿಯದೇ ಮಾತನಾಡುವುದು ಸರಿಯಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ವಿವಾದದ ಕುರಿತು ಸಾಮಾಜಿಕ ಕಾರ್ಯಕರ್ತರು ಮತ್ತು ಸಂಶೋಧಕರಾದ ಹರ್ಷಕುಮಾರ್ ಕುಗ್ವೆ ಮಾತನಾಡಿ, “ರಾಷ್ಟ್ರಮಟ್ಟದಲ್ಲಿ ಹಲವಾರು ಸಾಧನೆಗಳನ್ನು ಮಾಡಿ ದೇಶಕ್ಕೇ ಹೆಸರು ತಂದಿರುವ ಕನ್ನಡಿಗ ಕಾಶೀನಾಥ್ ಅವರು ತಮಗೆ ಗೊತ್ತೇ ಇಲ್ಲ ಎಂದು ಅಥ್ಲೆಟಿಕ್ ಸಂಸ್ಥೆಯ ಅಧಿಕಾರಿಗಳು ಹೇಳುತ್ತಿರುವುದು ನಾಚಿಕೆಗೇಡಿನ ವಿಷಯ. ಕರ್ನಾಟಕದ ಸರ್ಕಾರದ ಕ್ರೀಡಾ ಪಶಸ್ತಿಗೂ ಭಾಜನರಾಗಿರುವ ಈ ಯುವ ಪ್ರತಿಭೆಯನ್ನು ಗುರುತಿಸಿ ಬಹುಮಾನ ಘೋಷಿಸುವ ಮೂಲಕ ಕರ್ನಾಟಕ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ಅದು ಈಗ ತನ್ನ ಬದ್ಧತೆಯಿಂದ ಹಿಂದೆ ಸರಿಯಬಾರದು” ಎಂದು ಆಗ್ರಹಿಸಿದ್ದಾರೆ.

ಕನ್ನಡಿಗ ಕಾಶೀನಾಥ್ ನಾಯ್ಕ ಅವರ ಸಾಧನೆಗಳು

2010ರ ಕಾಮನ್ವೆಲ್ತ್ ಗೇಮ್ಸ್: ಕಂಚಿನ ಪದಕ
2010ರ ದಕ್ಷಿಣ ಏಷ್ಯನ್ ಗೇಮ್ಸ್: ಚಿನ್ನ
2010ರ ಏಷ್ಯನ್ ಆಲ್ ಸ್ಟಾರ್ ಚಾಂಪಿಯನ್‌ಶಿಪ್: ಬೆಳ್ಳಿ
2008ರ ಏಷ್ಯನ್ ಗ್ರ್ಯಾಂಡ್ ಪ್ರಿಕ್ಸ್: ಬೆಳ್ಳಿ
2008ರ ಏಷ್ಯನ್ ಗ್ರ್ಯಾಂಡ್ ಪ್ರಿಕ್ಸ್: ಕಂಚು
14 ಬಾರಿ ರಾಷ್ಟ್ರೀಯ ಚಿನ್ನ
5 ಬಾರಿ ಬೆಳ್ಳಿ ಗೆದ್ದಿದ್ದಾರೆ.

ಇಷ್ಟೆಲ್ಲಾ ಸಾಧನೆ ಮಾಡಿರುವ, ನೀರಜ್‌ಗೆ ಸಹಾಯ ಮಾಡಿರುವ ಕಾಶಿನಾಥ್ ನಾಯ್ಕ್ ಕುರಿತು ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷರು ಹಾಗೇಕೆ ಹೇಳಿದರು? ಈ ರೀತಿಯ ಅಸಹಕಾರ ಇದ್ದುದ್ದರಿಂದಲೇ ನಮಗೆ ಒಲಿಂಪಿಕ್ ಮೆಡಲ್ ಸಿಗಲು 120 ವರ್ಷ ಬೇಕಾಗಿತು ಎನ್ನುವ ಪ್ರಶ್ನೆಯನ್ನು ಈ ವಿವಾದ ಎತ್ತಿ ತೋರಿಸುತ್ತದೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...