Homeಮುಖಪುಟಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಮತ್ತು ಇತರ ಐವರನ್ನು ಬಂಧಿಸಲಾಗಿದೆ.

ಭಾನುವಾರ ನಡೆದ ಪ್ರತಿಭಟನೆಯ ಸಂಘಟಕರಲ್ಲಿ ಒಬ್ಬರೆಂದು ಹೇಳಲಾಗಿರುವ ಅಶ್ವಿನಿ ಉಪಾಧ್ಯಾಯರನ್ನು ಸೋಮವಾರ ತಡರಾತ್ರಿಯವರೆಗೆ ಇತರ ಆರೋಪಿಗಳೊಂದಿಗೆ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ದೊರೆತಿದೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

“ಹಿಂದೂಸ್ತಾನ್ ಮೇ ರೆಹನಾ ಹೋಗಾ, ಜೈ ಶ್ರೀ ರಾಮ್ ಕೆಹನಾ ಹೋಗಾ (ಭಾರತದಲ್ಲಿ ಉಳಿಯಬೇಕಿದ್ದರೇ, ಜೈ ಶ್ರೀ ರಾಮ್ ಎಂದು ಹೇಳಬೇಕು)” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಸಂಸತ್ತಿನಿಂದ ಕೇವಲ ಒಂದು ಕಿಮೀ ದೂರದಲ್ಲಿರುವ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜನರು ಇಂತಹ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು.

ಸುಪ್ರೀಂಕೋರ್ಟ್ ವಕೀಲ ಮತ್ತು ದೆಹಲಿ ಬಿಜೆಪಿ ಮಾಜಿ ವಕ್ತಾರ ಅಶ್ವಿನಿ ಉಪಾಧ್ಯಾಯ ಆಯೋಜಿಸಿದ್ದರು ಎಂದು ಹೇಳಲಾದ ಪ್ರತಿಭಟನೆಯಲ್ಲಿ ಘೋಷಣೆಗಳನ್ನು ಕೂಗಲಾಗಿತ್ತು. “ವೈರಲ್ ವಿಡಿಯೊಗಳ ಬಗ್ಗೆ ತಿಳಿದಿಲ್ಲ. ಕೇವಲ ಐದು ಅಥವಾ ಆರು ಜನರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅವರು ಅಂತಹ ಘೋಷಣೆಗಳನ್ನು ಕೂಗಬಾರದಿತ್ತು. ಈ ಘೋಷಣೆಗಳು ಕೂಗುತ್ತಿದ್ದಾ ನಾನು ಕೂಡ ಇರಲಿಲ್ಲ, ಘೋಷಣೆ ಕೂಗಿದವರನ್ನು ನಾನು ಆಹ್ವಾನಿಸಿರಲಿಲ್ಲ. ನಾನು ಪ್ರತಿಭಟನೆಯಿಂದ ಹೋದ ನಂತರ ಇದು ನಡೆದಿರಬೇಕು. ವಿಡಿಯೊಗಳಲ್ಲಿ ಕಾಣುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅಶ್ವಿನಿ ಉಪಾಧ್ಯಾಯ ಹೇಳಿದ್ದರು.

ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಮತ್ತೊಂದು ಹೇಳಿಕೆಯಲ್ಲಿ, ಈ ಪ್ರತಿಭಟನೆಯನ್ನು ಜಂತರ್ ಮಂತರ್‌ನಲ್ಲಿ ಸೇವ್ ಇಂಡಿಯಾ ಫೌಂಡೇಶನ್‌ನವರು ಆಯೋಜಿಸಿದ್ದರು ಎಂದು ಹೇಳಿದ್ದಾರೆ. “ಸೇವ್ ಇಂಡಿಯಾ ಫೌಂಡೇಶನ್ ಟ್ರಸ್ಟ್‌ನೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ. ನಾನು  ಆರ್‌ವಿಎಸ್ ಮಣಿ, ಫಿರೋಜ್ ಬಕ್ತ್ ಅಹ್ಮದ್, ಗಜೇಂದ್ರ ಚೌಹಾಣ್ ಅಲ್ಲಿ ಅತಿಥಿಗಳಾಗಿ ಹೋಗಿದ್ದೇವು” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊಗಳು ವೈರಲ್ ಆದ ಮೇಲೆ, ಅಶ್ವಿನಿ ಉಪಾಧ್ಯಾಯ ಮತ್ತು ವಿಡಿಯೊಗಳಲ್ಲಿ ಗೋಚರಿಸುವವರನ್ನು ಒಳಗೊಂಡಂತೆ ಕಾರ್ಯಕ್ರಮದ ಹಿಂದೆ ಇರುವವರನ್ನು ಪೋಲಿಸರು ಬಂಧಿಸದಿರುವ ಬಗ್ಗೆ ಪೊಲೀಸರ ಮೇಲೆ ಒತ್ತಡ ಹೇರಲಾಗಿತ್ತು. ಅಂತಿಮವಾಗಿ ಸೋಮವಾರ ತಡರಾತ್ರಿ ಕಾರ್ಯನಿರ್ವಹಿಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹಳೆಯ ವಸಾಹತುಶಾಹಿ ಯುಗದ ಕಾನೂನುಗಳ ವಿರುದ್ಧವಾಗಿ ಆಯೋಜಿಸಲಾಗಿದ್ದ, “ವಸಾಹತು ಕಾನೂನುಗಳು ಮತ್ತು ಏಕರೂಪದ ಕಾನೂನುಗಳನ್ನು ಮಾಡಿ” ಎಂಬ ಮೆರವಣಿಗೆಯಲ್ಲಿ ಈ ಘೋಷಣೆಗಳನ್ನು ಕೂಗಲಾಗಿದೆ.

ಬಂಧಿತರಲ್ಲಿ ಅಶ್ವಿನಿ ಉಪಾಧ್ಯಾಯ, ಸೇವ್ ಇಂಡಿಯಾದ ನಿರ್ದೇಶಕ ಪ್ರೀತ್ ಸಿಂಗ್, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತಿ ಮತ್ತು ದೀಪಕ್ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...