Homeಕರ್ನಾಟಕಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಸಿಎಂ ಬಸವರಾಜ್‌ ಬೊಮ್ಮಾಯಿಯವರು ಈ ಹಿಂದೆ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿತ್ತು.

- Advertisement -
- Advertisement -

ಮಂಗಳೂರಿನ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್‌‌‌‌‌ ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು ಶರಣ್ ವಿರುದ್ದ ತಕ್ಷಣವೆ ಎಫ್‌ಐಆರ್‌ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಯವರನ್ನು ಒತ್ತಾಯಿಸಲಾಗಿದೆ.

ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ಶರಣ್ ಪಂಪ್‌ವೆಲ್, “ಮುಸ್ಲಿಂ ಸಮುದಾಯದ ನಾಯಕರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಮುಸ್ಲಿಂ ಯುವಕರಿಗೆ ಬುದ್ದಿ ಹೇಳಬೇಕು, ಲವ್‌ ಜಿಹಾದ್ ಪ್ರಕರಣ ಮುಂದುವರೆದರೆ ಬೀದಿಗಿಳಿದು ನೇರವಾಗಿ ಅವರ ವಿರುದ್ದ ಹೋರಾಟ ಮಾಡುತ್ತೇವೆ’’ ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಅಲ್ಲದೆ “ಕರಾವಳಿಯಲ್ಲಿ ಶಾಂತಿಯಿರಬೇಕಾದರೆ ಮುಸ್ಲಿಂ ನಾಯಕರು ತಮ್ಮ ಯುವಕರಿಗೆ ಎಚ್ಚರಿಕೆ ಕೊಡುವಂತಹ ಕೆಲಸ ಮಾಡಬೇಕು. ಹಿಂದೂ ಯುವತಿಯರನ್ನು ಸೆಕ್ಸ್‌ ದಂಧೆ ಮತ್ತು ಡ್ರಗ್ಸ್‌ ದಂಧೆಗೆ ಬಳಸಿಕೊಳ್ಳುತ್ತಿದ್ದೀರಿ. ಇಡೀ ಮುಸ್ಲಿಂ ಸಮುದಾಯ ಭಯೋತ್ಪಾದನೆಗೆ ಬೆಂಬಲ ಕೊಡುತ್ತಿದ್ದೀರ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವ!

ಅಷ್ಟೇ ಅಲ್ಲದೆ ಅದೇ ದಿನ ಮಾಧ್ಯಮಗಳಿಗೆ ನೀಡಿದ ಚುಟುಕು ಸಂದರ್ಶನಲ್ಲಿ, “ಮುಂದಿನ ದಿನಗಳಲ್ಲಿ ಹೋರಾಟವು ಆಗಬಹುದು ಅಥವಾ ಹೊಡೆದಾಟವು ಆಗಬಹುದು” ಎಂದು ಹಿಂಸಾಚಾರ ನಡೆಯುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶಗಳೆದ್ದಿದ್ದು, ಶರಣ್‌ ಪಂಪ್‌ವೆಲ್ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಗಳು ಕೇಳಿ ಬರುತ್ತಿದೆ. ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನವು, “ಮಾನ್ಯರೆ, ಈ ರಾಜ್ಯದ ಪ್ರಜೆಗಳಾದ ನಮಗೆ ಶಿಕ್ಷಣ, ಆಹಾರ, ಮಹಿಳೆಯರ ಸುರಕ್ಷತೆ, ಸಾರ್ವಜನಿಕ ಸಾರಿಗೆ, ಆರೋಗ್ಯ ಬೇಕು. ನಾವು ಈ ಕೋಮುವಾದಿ ರಾಜಕೀಯವನ್ನು ತಿರಸ್ಕರಿಸುತ್ತೇವೆ. ಶರಣ್ ಪಂಪ್‌ವೆಲ್ ವಿರುದ್ಧ ನೀವು ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ನಾವು ಬಯಸುತ್ತೇವೆ” ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಗೆ ಆಗ್ರಹಿಸಿದೆ.

ಪರ್ಯಾಯ ಕಾನೂನು ವೇದಿಕೆಯ ಸಂಚಾಲಕರಾದ ವಿನಯ್‌ ಶ್ರೀನಿವಾಸ್ ಅವರು, “ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕರ್ನಾಟಕದ ಡಿಜಿಪಿ ಅವರೇ, ಶರಣ್ ಪಂಪ್‌ವೆಲ್‌ ಸತ್ಯವನ್ನು ತಿರುಚುತ್ತಿದ್ದಾರೆ. ಅಲ್ಲದೆ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡುತ್ತಿದ್ದಾರೆ. ದಯವಿಟ್ಟು ಅವರ ವಿರುದ್ದ 153A, 295A, 505 (2) ಅಡಿಯಲ್ಲಿ ತಕ್ಷಣವೆ ಎಫ್ಐಆರ್ ಅನ್ನು ದಾಖಲಿಸಿರುವುದನ್ನು ಖಚಿತ ಪಡಿಸಿ” ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಶರಣ್ ಪಂಪ್‌ವೆಲ್ ಹಲವಾರು ಪಕ್ರರಣಗಳ ಆರೋಪಿಯಾಗಿದ್ದು, ಸದಾ ವಿವಾದಾತ್ಮಕವಾದ ಹೇಳಿಕೆಯನ್ನು ನೀಡುತ್ತಲೇ ಬಂದಿದ್ದಾರೆ. ಈಗಿನ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಯಡಿಯೂರಪ್ಪರ ಸಂಪುಟದಲ್ಲಿ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

ಇದೀಗ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರದಂದು ಪ್ರಸ್ತುತ ರಾಜ್ಯದ ಗೃಹಮಂತ್ರಿಯಾಗಿರುವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ವಿರುದ್ದ ಇರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿಯ ಹೊಸ ಸಂಪುಟ ರಚನೆಯಾಗುತ್ತಿದ್ದಂತೆ ಸಂಘಪರಿವಾರ ಮತ್ತು ಬಿಜೆಪಿಯ ಕಾರ್ಯಕರ್ತರ ವಿರುದ್ದದ ಪ್ರಕರಣಗಳನ್ನು ರದ್ದು ಪಡಿಸುವಂತೆ ಸಚಿವರೊಬ್ಬರೇ ಖುದ್ದಾಗಿ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದಾರೆ. ಇದರ ಜೊತೆಗೆ ಹಲವು ಪ್ರಕರಣಗಳ ಆರೋಪಿಯಾಗಿರುವ ಶರಣ್ ಪಂ‌ಪ್‌ವೆಲ್‌ ಬಹಿರಂಗವಾಗಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ, ಇದು ಏನನ್ನು ಪ್ರತಿಬಿಂಬಿಸುತ್ತದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...