Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...