Homeಮುಖಪುಟವಿವಾದಿತ ಯತಿ ನರಸಿಂಗಾನಂದ ಅರ್ಚಕನಾಗಿರುವ ದೇವಾಲಯದಲ್ಲಿ ವ್ಯಕ್ತಿಗೆ ಚೂರಿ ಇರಿತ

ವಿವಾದಿತ ಯತಿ ನರಸಿಂಗಾನಂದ ಅರ್ಚಕನಾಗಿರುವ ದೇವಾಲಯದಲ್ಲಿ ವ್ಯಕ್ತಿಗೆ ಚೂರಿ ಇರಿತ

- Advertisement -
- Advertisement -

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸ್ನಾ ದೇವಿ ದೇವಸ್ಥಾನದ ಆವರಣದಲ್ಲಿ ನಿದ್ರಿಸುತ್ತಿದ್ದ 52 ವರ್ಷದ ವ್ಯಕ್ತಿಯ ಮೇಲೆ ಪೇಪರ್‌ ಕಟ್ಟರ್‌ ಚಾಕುವಿನಿಂದ ಹಲವು ಬಾರಿ ಚುಚ್ಚಲಾಗಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

ಘಟನೆಯು ಆಗಸ್ಟ್ 9 ಮತ್ತು 10 ರ ಮಧ್ಯರಾತ್ರಿ ನಡೆದ್ದಿದ್ದು, ಘಟನೆ ನಡೆಯುವ ಸಮಯದಲ್ಲಿ, ದೇವಸ್ಥಾನದ ಮುಖ್ಯ ಮಹಂತ್‌‌‌ ಆಗಿರುವ, ಸದಾ ದ್ವೇಷ ಭಾಷಣಗಳಿಂದಲೇ ಸುದ್ದಿಯಲ್ಲಿರುವ ವಿವಾದಿತ ಅರ್ಚಕ ನರಸಿಂಹಾನಂದ್ ಅವರು, ದೇವಸ್ಥಾನದ ಆವರಣದಲ್ಲಿರುವ ಕೊಠಡಿಯಲ್ಲಿದ್ದರು ಎಂದು ದಿಕ್ವಿಂಟ್‌ ವರದಿ ಮಾಡಿದೆ.

ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಸಂತ್ರಸ್ತ ವ್ಯಕ್ತಿಯನ್ನು ಸ್ವಾಮಿ ನರೇಶಾನಂದ್, ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಅವರು ಆಗಸ್ಟ್ 7 ರಂದು ಸಮಾರಂಭವೊಂದರಲ್ಲಿ ಭಾಗವಹಿಸಲು ಗಾಜಿಯಾಬಾದ್‌ಗೆ ಬಂದಿದ್ದರು.

ದೇವಸ್ಥಾನದಲ್ಲಿನ ಸಿಸಿಟಿವಿ ಕ್ಯಾಮೆರಾಗಳು

ದಾಳಿಯ ನಂತರ, ನರೇಶಾನಂದ್ ಅವರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಬಗ್ಗೆ ಯಾವುದೆ ದೂರು ದಾಖಲಾಗದಿದ್ದರೂ ಗಾಜಿಯಾಬಾದ್ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ದೇವಾಲಯದ ಒಳಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

“ದೇವಸ್ಥಾನದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳು ಕೆಲಸ ಮಾಡುತ್ತಿಲ್ಲ. ನಾವು ಸ್ಥಳೀಯವಾಗಿ ಇರುವ ಇತರ ಸಿಸಿಟಿವಿ ಕ್ಯಾಮೆರಾಗಳ ತುಣುಕನ್ನು ಸ್ಕ್ಯಾನ್ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮಗೆ ಬಂದ ದೂರಿನ ಆಧಾರದ ಮೇಲೆ ನಾವು ಎಫ್ಐಆರ್ ದಾಖಲಿಸುತ್ತೇವೆ” ಎಂದು ಗಾಜಿಯಾಬಾದ್ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಇರಾಜ್ ರಾಜ ಹೇಳಿದ್ದಾರೆ.

ವಿವಾದದ ಕೇಂದ್ರ ದಾಸ್ನಾ ದೇವಿ ದೇವಸ್ಥಾನ!

ವಿವಾದಿತ ಯತಿ ನರಸಿಂಹಾನಂದ ಅವರ ವೈಯಕ್ತಿಕ ಭದ್ರತೆಗಾಗಿ ನಾಲ್ಕು ಪೊಲೀಸ್ ಗನ್ನರ್‌ಗಳನ್ನು ಹೊರತುಪಡಿಸಿ, ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಯನ್ನು ಮುಖ್ಯ ದ್ವಾರದಲ್ಲಿ ಮತ್ತು ದೇವಸ್ಥಾನದ ಆವರಣದಲ್ಲಿ ನಿಯೋಜಿಸಲಾಗಿದೆ. ಆದ್ದರಿಂದ ದಾಳಿಕೋರ ಮುಖ್ಯ ದ್ವಾರದ ಮೂಲಕ ದಾಟಿ ಹೋಗುವುದು ಅಸಂಭವವಾಗಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಕ್ವಿಂಟ್‌ ವರದಿ ಮಾಡಿದೆ.

ಇದನ್ನೂ ಓದಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ದೇವಾಲಯದ ಆವರಣದ ಸುತ್ತಲೂ ಒಂದು ಗೋಡೆಯಿದೆ. ಆದರೆ ಕೆಲವು ಕಡೆ ಅದರ ಎತ್ತರ ಕಡಿಮೆಯಾಗಿದೆ. ಬಹುಶಃ ದಾಳಿಕೋರ ದಾಳಿಯ ನಂತರ ಅಂತಹ ಒಂದು ಸ್ಥಳದಲ್ಲಿ ಗೋಡೆಯನ್ನು ಹಾರಿ ತಪ್ಪಿಸಿಕೊಂಡಿರಬಹುದು” ಎಂದು ಇರಾಜ್ ರಾಜಾ ಹೇಳಿದ್ದಾರೆ.

ಇತ್ತೀಚೆಗೆ ದಾಸ್ನಾ ದೇವಿ ದೇವಸ್ಥಾನವು ವಿವಾದದ ಕೇಂದ್ರವಾಗಿತ್ತು. ಮಾರ್ಚ್ 11 ರಂದು, ನರಸಿಂಗಾನಂದ್ ಅವರ ಶಿಷ್ಯರಲ್ಲಿ ಒಬ್ಬರಾದ ಶೃಂಗಿ ಯಾದವ್ ಎಂಬ ವ್ಯಕ್ತಿ, ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ 14 ವರ್ಷದ ಮುಸ್ಲಿಂ ಬಾಲಕನಿಗೆ ಕ್ರೂರವಾಗಿ ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ದೇವಾಲಯದ ಆವರಣದ ಹೊರಗೆ ಒಂದು ಬೋರ್ಡ್ ಇದ್ದು, ಅದರಲ್ಲಿ, “ಈ ದೇವಸ್ಥಾನವು ಹಿಂದೂಗಳಿಗೆ ಪವಿತ್ರ ಸ್ಥಳವಾಗಿದೆ. ಮುಸ್ಲಿಮರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...