Homeಕರೋನಾ ತಲ್ಲಣಕೇರಳ: ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು

ಕೇರಳ: ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು

- Advertisement -
- Advertisement -

ಕೇರಳದಲ್ಲಿ ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉನ್ನತ ಅಧಿಕೃತ ಮೂಲಗಳು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಹೆಚ್ಚುತ್ತಿರುವ ಕೊರೊನಾ ಸೋಂಕುಗಳ ಆತಂಕದ ನಡುವೆ, ಒಕ್ಕೂಟ ಸರ್ಕಾರವು ಅಂತಹ ಎಲ್ಲಾ ಪ್ರಕರಣಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸುವಂತೆ ಕೇರಳಕ್ಕೆ ತಿಳಿಸಿದೆ. ಅಲ್ಲಿ ಸೋಂಕಿಗೊಳಗಾದ ವ್ಯಕ್ತಿಯಿಂದ ತೆಗೆದ ವೈರಸ್ ಮಾದರಿಯನ್ನು ಪರೀಕ್ಷಿಸಿ, ಇತರ ಪ್ರಕರಣಗಳೊಂದಿಗೆ ತಾಳೆ ಹಾಕಲಾಗುತ್ತದೆ.

ಕೊರೊನಾ ಲಸಿಕೆಗಳು ಮತ್ತು ರೋಗನಿರೋಧಕ ಶಕ್ತಿಯನ್ನು ದಾಟುವಷ್ಟು ಈ ವೈರಸ್ ರೂಪಾಂತರಗೊಂಡಿವೆ ಎಂದು ತಿಳಿದು ಬಂದರೆ ನಿಜವಾದ ಆತಂಕ ಆರಂಭವಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣಗಳು ಡೆಲ್ಟಾ ರೂಪಾಂತರಿಯಾಗಿವೆಯೇ ಎಂಬುದು ಇನ್ನು ತಿಳಿದಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ವರದಿಯಾಗಿರುವ ಹೆಚ್ಚಿನ ಕೊರೊನಾ ಪ್ರಕರಣಗಳು ಪತ್ತನಂತಿಟ್ಟ ಜಿಲ್ಲೆಯಿಂದ ವರದಿಯಾಗಿವೆ. ಪತ್ತನಂತಿಟ್ಟದಲ್ಲಿ ಮೊದಲ ಕೋವಿಡ್ ಲಸಿಕೆ ಪಡೆದಿರುವ 1,4974 ಜನರು ಸೋಂಕಿಗೆ ಒಳಗಾಗಿದ್ದರೆ, ಎರಡನೇ ಲಸಿಕೆ ಪಡೆದ 5,042 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಒಮ್ಮೆ ಕೊರೊನಾ ಬಂದು ಮತ್ತೊಮ್ಮೆ ಬರುವುದಿಲ್ಲ ಎಂಬಂತೆ ಇಲ್ಲ. ಕೇರಳದ ಕೆಲವು ಜಿಲ್ಲೆಗಳಲ್ಲಿಯೂ ಇಂತಹ ಪ್ರಕರಣಗಳಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಗಳು ತಿಳಿಸಿವೆ.

ಕಳೆದ ಕೆಲವು ವಾರಗಳಿಂದ ಕೇರಳದಲ್ಲಿ ಪ್ರತಿದಿನ 20,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದವೆ. ಮಂಗಳವಾರ ಮಾತ್ರ ಸ್ಪಲ್ಪ ಕಡಿಮೆ ಪ್ರಕರಣಗಳು ವರದಿಯಾಗಿವೆ. ಮಂಗಳವಾರ 13,049 ಪ್ರಕರಣಗಳು ಮತ್ತು 105 ಸಾವುಗಳು ವರದಿಯಾಗಿವೆ. ರಾಜ್ಯದಲ್ಲಿ ಬುಧವಾರ 21,119 ಪ್ರಕರಣಗಳು ಮತ್ತು 152 ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಕೇರಳದಲ್ಲಿ ಕೊರೊನಾ ಏರಿಕೆ: ವೀಕೆಂಡ್ ಲಾಕ್‌ಡೌನ್, ಕೇಂದ್ರದಿಂದ ತಂಡ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...