Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...