Homeಮುಖಪುಟ’ಠೇವಣಿ ವಿಮೆ ಮತ್ತು ಸಾಲ ಖಾತರಿ ಕಾರ್ಪೊರೇಷನ್ ಕಾಯ್ದೆ-1961’ಗೆ ತಿದ್ದುಪಡಿ; ಠೇವಣಿದಾರರಿಗೆ ಬೇಕು ಇನ್ನಷ್ಟು ಭದ್ರತೆ

’ಠೇವಣಿ ವಿಮೆ ಮತ್ತು ಸಾಲ ಖಾತರಿ ಕಾರ್ಪೊರೇಷನ್ ಕಾಯ್ದೆ-1961’ಗೆ ತಿದ್ದುಪಡಿ; ಠೇವಣಿದಾರರಿಗೆ ಬೇಕು ಇನ್ನಷ್ಟು ಭದ್ರತೆ

- Advertisement -
- Advertisement -

ಠೇವಣಿದಾರರಿಗೆ ಹೆಚ್ಚಿನ ಪರಿಹಾರ ಒದಗಿಸುವ ದೃಷ್ಟಿಯಿಂದ ಕಳೆದ ವಾರವಷ್ಟೇ ಭಾರತ ಸರ್ಕಾರದ ಸಚಿವ ಸಂಪುಟ “ಠೇವಣಿ ವಿಮೆ ಮತ್ತು ಸಾಲ ಖಾತರಿ ಕಾರ್ಪೊರೇಷನ್ ಕಾಯ್ದೆ-1961″ಗೆ ತಿದ್ದುಪಡಿ ತಂದು, ಬ್ಯಾಂಕು ಮುಚ್ಚುವ ಸಂದರ್ಭ ಬಂದಾಗಲೂ 90 ದಿನಗಳ ಕಾಲಮಿತಿಯಲ್ಲಿ ಠೇವಣಿದಾರರ ಮೊತ್ತವನ್ನು (ಗರಿಷ್ಠ ರೂ. 5 ಲಕ್ಷ ಮಾತ್ರ) ಪಾವತಿಸಬೇಕು ಎನ್ನುವ ತೀರ್ಮಾನ ಕೈಗೊಂಡಿದೆ (ಸಂಪಾದಕೀಯ, ಪ್ರ.ವಾ. ದಿ.4.8.2021). ಈ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಪೆಗಸಸ್ ಗದ್ದಲದ ನಡುವೆಯೂ ಅಂಗೀಕಾರಗೊಂಡಿದೆ. ಇದು ’ಎಂಟು ವರ್ಷಕ್ಕೆ ನನ್ನ ಮಗ ದಂಟು ಅಂದ’ ಎನ್ನುವ ಮಾತಿನಂತಿದ್ದರೂ ಸ್ವಾಗತಿಸಬೇಕಿದೆ. ಸ್ವತಂತ್ರ ಬಂದು ಏಳು ದಶಕಗಳು ಕಳೆದರೂ, ಮನಮೋಹನ್ ಸಿಂಗ್ ಅವರಂತಹ ಅರ್ಥಶಾಸ್ತ್ರಜ್ಞ ಹತ್ತು ವರ್ಷಗಳ ಕಾಲ ಈ ದೇಶದ ಪ್ರಧಾನ ಮಂತ್ರಿಯಾಗಿದ್ದರೂ ದೇಶದ ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಿ ಇಟ್ಟ ಗ್ರಾಹಕರಿಗೆ ಸೂಕ್ತ ಭದ್ರತೆ ನೀಡುವಲ್ಲಿ ವಿಫಲವಾಗಿರುವುದು ನಿಜ. ಇದು ಬ್ಯಾಂಕುಗಳು ಮತ್ತು ಠೇವಣಿದಾರರಿಬ್ಬರ ಹಿತದೃಷ್ಟಿಯಿಂದ ದೊಡ್ಡ ಹಿನ್ನಡೆಯೇ ಸರಿ.

ಯಾವುದೇ ದೇಶವೊಂದು ತನ್ನ ಆರ್ಥಿಕ ವಲಯದಲ್ಲಿನ ಬ್ಯಾಂಕುಗಳ ಠೇವಣಿದಾರರಿಗೆ ಕೊಡುವ ಠೇವಣಿ ಭದ್ರತೆ ಎಂದರೆ, ಅದು ಅಲ್ಲಿನ ಆಂತರಿಕ ಬಂಡವಾಳ ಕ್ರೋಢೀಕರಣಕ್ಕೆ ನೀಡುವ ಪ್ರೇರಣೆ ಅಷ್ಟೇ ಅಲ್ಲ, ಬ್ಯಾಂಕುಗಳ ಬಗೆಗಿನ ಗ್ರಾಹಕರ ನಂಬುಗೆಯ ಖಾತ್ರಿ ಕೂಡ. ಭವಿಷ್ಯದ ಭರವಸೆಯ ಬದುಕಿಗಾಗಿ ಕಷ್ಟಪಟ್ಟು ಗಳಿಸಿದ ಅಷ್ಟೋ ಇಷ್ಟೋ ಹಣವನ್ನು ಇಡುಗಂಟಾಗಿ ಬ್ಯಾಂಕಿನಲ್ಲಿ ಠೇವಣಿ ಇರಿಸುವ ಮೂಲಕ ಪಡೆಯುವ ಬಡ್ಡಿಯೇ ಬಹುಸಂಖ್ಯಾತ ಗ್ರಾಹಕರ ಸ್ವಾಭಿಮಾನದ ಬದುಕು. ಆತಂಕರಹಿತ ಹೂಡಿಕೆಯ ದಾರಿ. ಅದರಲ್ಲೂ ವೃತ್ತಿ, ಉದ್ಯೋಗಗಳಿಂದ ನಿವೃತ್ತರಾಗಿ ಜೀವನದ ಸಂಧ್ಯಾಕಾಲದಲ್ಲಿರುವವರಿಗೆ ನಿಜಕ್ಕೂ ಇದೊಂದು ವರದಾನ. ಅಧಿಕ ಹಣ ಗಳಿಕೆಯ ಸಾಧ್ಯತೆಯ ಹೂಡಿಕೆಗಳಲ್ಲಿ ಹಣ ಹಾಕಿ ಭರವಸೆಯ ಆದಾಯವಿಲ್ಲದೆ ಕೈಸುಟ್ಟುಕೊಳ್ಳಬಯಸದವರಿಗೊಂದು ನೆಮ್ಮದಿಯ ಆದಾಯ ಮೂಲ. ಇವರಿಗೆ ನೀಡುವ ಠೇವಣಿ ಭದ್ರತೆ ಎಂದರೆ ಅದು ಅವರಿಗೆ ಒದಗಿಸುವ ಸಾಮಾಜಿಕ ಭದ್ರತೆ ಮತ್ತು ನ್ಯಾಯ. ಇಂಥ ಭದ್ರತೆಯ ಅನುಪಸ್ಥಿತಿಯಲ್ಲಿ ಸಣ್ಣ ಮತ್ತು ಮಧ್ಯಮ ವರ್ಗದ ಠೇವಣಿದಾರರು ಡಬ್ಬಾ ಕಂಪನಿಗಳು ಮತ್ತು ವಂಚಕ ಸಂಸ್ಥೆಗಳ ಜಾಲದಲ್ಲಿ ಸಿಕ್ಕು ಇದ್ದದ್ದನ್ನೆಲ್ಲಾ ಕಳದುಕೊಂಡು ಬರಿಗೈ ಬಸಪ್ಪಗಳಾಗುವ ದೈನೇಸಿ ಸ್ಥಿತಿ ಒದಗಬಹುದು.

PC : Karnataka Trending

ಇಂತಹ ವಿದ್ಯಮಾನಕ್ಕೆ ಇವತ್ತು ನಾವು ನೋಡುತ್ತಿರುವ ಕೆಲ ಪ್ರಕರಣಗಳೇ ಸಾಕ್ಷಿ. ಅದು ಬೆಂಗಳೂರಿನ ಐಎಮ್‌ಎ ಪ್ರಕರಣ ಆಗಿರಬಹುದು, ರಾಘವೇಂದ್ರ ಸಹಕಾರಿ ಬ್ಯಾಂಕ್ ಆಗಿರಬಹುದು ಅಥವಾ ಪಂಜಾಬ್-ಮಹಾರಾಷ್ಟ್ರ ಬ್ಯಾಂಕ್, ಬೆಸ್ಟ್ ಬ್ಯಾಂಕ್, ಲಕ್ಷ್ಮಿವಿಲಾಸ ಬ್ಯಾಂಕುಗಳಂಥ ದೊಡ್ಡ ಬ್ಯಾಂಕುಗಳೂ ಆಗಿರಬಹುದು. ಇಂಥ ವಂಚಕರ ಕಪಿಮುಷ್ಟಿಗೆ ಸಿಕ್ಕು ಮುಗ್ಧ ಠೇವಣಿದಾರರು ಸಂಕಟದ ಕೂಪಕ್ಕೆ ಹೋಗಬಾರದೆಂದರೆ, ಅವರು ಇಟ್ಟ ಠೇವಣಿ ಮೊತ್ತ ಸುರಕ್ಷಿತವಾಗಿ ಅವರಿಗೆ ಬೇಕೆಂದಾಗ ಸಿಗುವಂತಿರಬೇಕು. ಈ ಬಗ್ಗೆ ಸರ್ಕಾರಗಳ ಕಟ್ಟುನಿಟ್ಟಿನ ಕಾಯ್ದೆಗಳಿಲ್ಲದಿದ್ದರೆ, ಮತ್ತು ಆ ಕಾಯಿದೆಗಳಾದರೂ ಕಾಲಮಿತಿಯಲ್ಲಿ ಜಾರಿಯಾಗದಿದ್ದರೆ ಅದು ತಾಯ ಮೊಲೆಹಾಲು ನಂಜಾದಂತೆ. ಭಾರತದಲ್ಲಿ ಇಂಥ ಠೇವಣಿ ಭದ್ರತೆಯ ಮೊತ್ತ ದಶಕಗಳಿಂದ ಕೇವಲ ಒಂದು ಲಕ್ಷಕ್ಕೆ ರೂಪಾಯಿಗಳಿಗೆ ಸೀಮಿತವಾಗಿತ್ತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 2020ರ ಮುಂಗಡಪತ್ರದಲ್ಲಿ ಈ ಮಿತಿಯನ್ನ ರೂ.5 ಲಕ್ಷಕ್ಕೆ ಏರಿಸಿ ಉಪಕರಿಸಿದ್ದಾರೆ. ಅದೂ ಕೂಡ ಒಂದು ಬ್ಯಾಂಕಿನ ಎಲ್ಲಾ ಶಾಖೆಗಳಿಗೆ ಅನ್ವಯಿಸುವ ಒಟ್ಟು ಮೊತ್ತವಾಗಿರುತ್ತದೆ. ಆದರೆ ಈ ಮೊತ್ತ ಇತರೆ ಅಭಿವೃದ್ಧಿ ಹೊಂದಿರುವ ಮತ್ತು ಹೊಂದುತ್ತಿರುವ ರಾಷ್ಟ್ರಗಳಿಲ್ಲಿನ ಮೊತ್ತಕ್ಕೆ ಹೋಲಿಸಿದರೆ ತೀರಾ ಕಡಿಮೆ. ಮೆಕ್ಸಿಕೋ, ಟರ್ಕಿ ಮತ್ತು ಜಪಾನ್ ದೇಶಗಳಲ್ಲಿ ಅದು ಶೇ. ನೂರರಷ್ಟಿದೆ.

ಅಲ್ಲದೆ ಅದು ಹಣದುಬ್ಬರ ದರಕ್ಕೆ ಹೊಂದಿಕೆಯಾಗಿ ಏರಿಕೆಯ ದರದಲ್ಲಿರುವುದಾದರೆ ಉಳಿತಾಯದಾರರಿಗೆ
ನೆಮ್ಮದಿ. ಈ ನಿಟ್ಟಿನಲ್ಲಿ ಬ್ಯಾಂಕುಗಳು ಠೇವಣಿ ಭರವಸೆ ನೀಡುವ ವಿಮಾ ಸಂಸ್ಥೆಗಳಿಗೆ ಪಾವತಿಸುವ ವಿಮಾ ಮೊತ್ತ ಅವುಗಳ ಆರ್ಥಿಕತೆಗೆ ಭಾರವಾಗುತ್ತದೆ ಎನ್ನುವುದಾದರೆ, ಹಾಲೀ ಕೆಲ ದೇಶಗಳಲ್ಲಿರುವಂತೆ ವಿಮಾ ಮೊತ್ತವನ್ನು ಬ್ಯಾಂಕು ಮತ್ತು ಗ್ರಾಹಕರು ಕೂಡಿ ಭರಿಸುವ ವ್ಯವಸ್ಥೆ ಮಾಡಬಹುದು. ಠೇವಣಿಯ ಮೇಲೆ ನೀಡುವ ಬಡ್ಡಿಯ ದರ ಒಂದಷ್ಟು ಕಡಿಮೆಯಾದರೂ ಸರಿ, ಬ್ಯಾಂಕುಗಳು ದುಃಸ್ಥಿತಿಗೆ ಒಳಗಾದಾಗ ಗ್ರಾಹಕರು ಠೇವಣಿ ವಂಚಿತರಾಗಬಾರದು. ಹೀಗೆ ವಿಮಾ ಕಂತಿನ ಪಾವತಿಯ ಭಾರವನ್ನು ಹಂಚಿಕೊಳ್ಳುವುದರಿಂದ ಬ್ಯಾಂಕಿಗೂ ಹೊರೆಯಾಗುವುದಿಲ್ಲ, ಮತ್ತು ಯಾವ ಗ್ರಾಹಕನೂ ಇಲ್ಲ ಎನ್ನುವುದಿಲ್ಲ. ಅದೂ ಕೋವಿಡ್-19ರಂತಹ ಸಂಕಷ್ಟದ ಸಂದರ್ಭದಲ್ಲಿ ಕೈಯಲ್ಲೊಂದಿಷ್ಟು ಹಣ ಇಟ್ಟುಕೊಂಡವರಿಗೆ ಸಣ್ಣ ಮೊತ್ತವಾದರೂ ಸರಿ, ನಿಗದಿತವಾಗಿ ಬಡ್ಡಿ ರೂಪದ ಆದಾಯ ಸಿಗುವ ಸಾಧ್ಯತೆ ಎಂದರೆ ಬ್ಯಾಂಕ್ ಠೇವಣಿಗಳು ಮಾತ್ರ.

ಈ ದೃಷ್ಟಿಯಿಂದ ಪ್ರಸ್ತುತ ಒಕ್ಕೂಟ ಸರ್ಕಾರ ಮಂಡಿಸಿರುವ “ಠೇವಣಿ ವಿಮೆ ಮತ್ತು ಸಾಲ ಖಾತರಿ ಕಾರ್ಪೊರೇಷನ್ ಕಾಯ್ದೆ(ಡಿಐಸಿಜಿಸಿ)” ತಿದ್ದುಪಡಿಯನ್ನು ಸ್ವಾಗತಿಸುತ್ತಲೇ, ಈಗಿನ ಠೇವಣಿ ಭರವಸೆ ಮೊತ್ತ ರೂ. 5 ಲಕ್ಷ ಮಿತಿಯನ್ನು ಅಮೆರಿಕಾ, ಇಂಗ್ಲೆಂಡ್, ಜಪಾನ್, ಜರ್ಮನಿ, ಯೂರೋಪಿಯನ್ ಒಕ್ಕೂಟ ರಾಷ್ಟ್ರಗಳಲ್ಲಿರುವಷ್ಟರ ಮೊತ್ತಕ್ಕೆ ಸಮನಾಗಿ ಅಲ್ಲದಿದ್ದರೂ, ಕನಿಷ್ಟ ರೂ.20 ಲಕ್ಷಕ್ಕಾದರೂ ಏರಿಸುವ ಅಗತ್ಯವಿದೆ. ಆ ದೇಶಗಳಲ್ಲಿ ಒದಗಿಸಲಾಗಿರುವ ಠೇವಣಿಗಳ ಮೇಲಿನ ಭದ್ರತೆಯ ಮೊತ್ತ, ನಮ್ಮ ರೂಪಾಯಿ ಲೆಕ್ಕದಲ್ಲಿ, ಸರಿಸುಮಾರು ಒಂದು ಕೋಟಿ ಹತ್ತಿರ ಬರುತ್ತದೆ. ಈ ಮೂಲಕ ಠೇವಣಿದಾರರಿಗೆ ಅರ್ಥಿಕ ಭದ್ರತೆ ಮತ್ತು ಬ್ಯಾಂಕುಗಳಿಗೆ ದ್ರವ್ಯತೆ(ಲಿಕ್ವಿಡಿಟಿ) ಎರಡನ್ನೂ ಏಕಕಾಲಕ್ಕೆ ಒದಗಿಸಬಹುದು. ಅಲ್ಲದೆ, ವಿದೇಶೀ ಬಂಡವಾಳಕ್ಕಾಗಿ ದೇಶ ಜಾಗತಿಕ ಹಣಕಾಸು ಸಂಸ್ಥೆಗಳ ಮುಂದೆ ಕೈಚಾಚುವ ದಯನೀಯ ಸ್ಥಿತಿಯನ್ನು ತಪ್ಪಿಸಬಹುದು.

ಜೊತೆಗೆ, ಸಹಕಾರಿ ವಲಯದ ಬ್ಯಾಂಕುಗಳು ಮತ್ತು ಪತ್ತಿನ ಸಹಕಾರ ಸಂಘಗಳನ್ನೂ ಕೂಡ ಈ ಕಾಯಿದೆಯ ವ್ಯಾಪ್ತಿ ಮತ್ತು ಆರ್‌ಬಿಐನ ಕಣ್ಗಾವಲಿಗೆ ಒಳಪಡಿಸಬೇಕಿದೆ. ಹೇಗೂ ಇದೀಗ ಒಕ್ಕೂಟ ಸರ್ಕಾರ ಸಹಕಾರಿ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಳ್ಳುವ ಪ್ರಯತ್ನವಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಿದೆ.
ಇದರಿಂದಾಗಿ ಸಹಕಾರಿ ವಲಯದ ಹಣಕಾಸು ಸಂಸ್ಥೆಗಳಲ್ಲಿ ಠೇವಣಿ ಇಟ್ಟವರಿಗೆ ಈ ಸೌಲಭ್ಯವನ್ನು ವಿಸ್ತರಿಸುವುದು ಕಷ್ಟವೇನಲ್ಲ. ಇಂದು ಬ್ಯಾಂಕೇತರ ಹಣಕಾಸು ಸಂಸ್ಥೆಗಳೂ ಕೂಡ ನಾಯಿಕೊಡೆಗಳಂತೆ ಹುಟ್ಟಿಕೊಂಡು ಸಾಲ ಕೋರಿ ಬಂದವರ ರಕ್ತ ಹೀರುತ್ತಿವೆ. ಇಲ್ಲಿ ಶೋಷಣೆ ಎನ್ನುವುದು ಎರಡು ಬದಿಯ ಗರಗಸವಾಗಿದೆ. ಸರ್ಕಾರದ ನೋಂದಾಯಿತ ಸಂಸ್ಥೆಗಳು ಎನ್ನುವ ನಂಬುಗೆಯಿಂದ ಇಂಥ ಸಂಸ್ಥೆಗಳಲ್ಲಿ ಹಣ ಹೂಡಿ ವಂಚನೆಗೊಳಗಾದ ಸಂತ್ರಸ್ತರು ಪರಿಹಾರ ಕೋರಿ ಸಚಿವರನ್ನು ಒತ್ತಾಯಿಸಿದಾಗ “ನನ್ನನ್ನು ಕೇಳಿ ನೀವು ಠೇವಣಿ ಇಟ್ಟಿದ್ರಾ?” ಎಂದು ಹರಿಹಾಯುವ, ಹಸಿವು ಇಂಗಿಸಲು ಅಕ್ಕಿ ಕೊಡಿ ಎಂದರೆ “ಸಾಯ್ರಿ” ಎನ್ನುವ ಪ್ರಭುತ್ವದ ಪ್ರತಿನಿಧಿಗಳಿರುವಾಗ ನ್ಯಾಯ ಸಿಗುವುದು ಕಷ್ಟಸಾಧ್ಯವಾಗಿದ್ದರೂ ಹಕ್ಕೊತ್ತಾಯವನ್ನು ಕೈಬಿಡುವಂತಿಲ್ಲ. ಇದೀಗ ಹೆಚ್ಚು ವಂಚನೆಯ ಪ್ರಕರಣಗಳು ವರದಿಯಾಗುತ್ತಿರುವುದೇ ಸಹಕಾರಿ ವಲಯದ ಹಣಕಾಸು ಸಂಸ್ಥೆಗಳಲ್ಲಿ. ಗಾಂಧೀಜಿಯವರ ಕನಸಿನ ಸಹಕಾರಿ ಚಳವಳಿ ಕಳ್ಳಕಾಕರ ಕಾರ್ಯಾಚರಣೆಯಾಗುತ್ತಿರುವುದನ್ನು ತಪ್ಪಿಸಲೇಬೇಕು.

PC : The Economic Times

ಕೊನೆಯದಾಗಿ, ಇವತ್ತು ಮಾಹಿತಿ ತಂತ್ರಜ್ಞಾನದ ಅನುಕೂಲಗಳನ್ನು ನಿತ್ಯ ಆರ್ಥಿಕ ಬದುಕಿನಲ್ಲಿ ಅನ್ವಯಿಸಿ ನಗದುರಹಿತ ವಹಿವಾಟು ನಡೆಸಲು ಮತ್ತು ವಿದ್ಯುನ್ಮಾನ ಬ್ಯಾಂಕ್ ವ್ಯವಹಾರ ನಡೆಸಲು ಒತ್ತಾಯಪೂರಕ ಪ್ರೋತ್ಸಾಹ ಜಾರಿಯಲ್ಲಿದೆ. ಇದು ಇವತ್ತಿನ ಜಾಗತಿಕ ಸಂದರ್ಭದಲ್ಲಿ ಅನಿವಾರ್ಯ ಕೂಡ. ಆದರೆ ಇದರಿಂದ ವಂಚನೆಗೊಳಗಾದ ಸಂದರ್ಭದಲ್ಲಿ ಅಮಾಯಕರಿಗೆ ರಕ್ಷಣೆ ಇಲ್ಲ ಎನ್ನುವುದಾದರೆ ವಂಚನೆಯನ್ನೇ ಸಾರ್ವತ್ರೀಕರಿಸಿದಂತಾಗುತ್ತದೆ. ಕೆಲವು ಮುಗ್ಧ, ಅಷ್ಟೇ ಏಕೆ ಪ್ರಬುದ್ಧರೆನಿಸಿಕೊಂಡವರ ಬ್ಯಾಂಕ್ ಖಾತೆಗಳ ಹಣ ವಿದ್ಯುನ್ಮಾನ ಕಳ್ಳರ ಕೈಚಳಕದಿಂದ ಕಾಣೆಯಾಗುತ್ತಿರುವ ವರದಿಗಳು ಠೇವಣಿದಾರರ ನಿದ್ದೆಗೆಡಿಸುತ್ತಿದೆ. ಇಲ್ಲಿ ಗ್ರಾಹಕರ ಎಚ್ಚರಿಕೆ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಬ್ಯಾಂಕುಗಳ ಹೊಣೆಗಾರಿಕೆ ಮತ್ತು ಸರ್ಕಾರಗಳ ರಕ್ಷಣಾ ಕವಚ. ಯಾವ ಕಾನೂನು ಮತ್ತು ಕ್ರಮಗಳನ್ನು ನಂಬಿ ಗ್ರಾಹಕರು ಠೇವಣಿ ಇಡುತ್ತಾರೋ, ಹಣದ ವಹಿವಾಟು ನಡೆಸುತ್ತಾರೋ ಅವು, ಅವರನ್ನು ರಕ್ಷಿಸದೆ ನಡುನೀರಲ್ಲಿ ಕೈಬಿಡುವಂತಹ ಪ್ರಕರಣಗಳು ನಡೆದಾಗ ಜನ ಹಣಕಾಸು ಸಂಸ್ಥೆಗಳು ಮತ್ತು ಸರ್ಕಾರ ಎರಡರ ಮೇಲೂ ಭರವಸೆ ಕಳೆದುಕೊಳ್ಳುವುದು ಸಹಜ. ಮುಕ್ತ ಮಾರುಕಟ್ಟೆ ಯಾವತ್ತೂ ತನ್ನ ವಹಿವಾಟುಗಳ ಸಂದರ್ಭದಲ್ಲಿ ಗ್ರಾಹಕರ ಬೌದ್ಧಿಕ ಸಬಲೀಕರಣವನ್ನು ಊಹಿಸಿಕೊಂಡೇ ಕ್ರಿಯಾಶೀಲವಾಗಿರುತ್ತದೆ. ಆದ್ದರಿಂದ ಮಾಹಿತಿ ಕೊರತೆ ಇರುವವರಿಗೆ, ಅಸಹಾಯಕರಿಗೆ ಅಲ್ಲಿ ನ್ಯಾಯ ಸಿಗುವುದು ಖಂಡಿತಾ ಸಾಧ್ಯವಿಲ್ಲ. ಇಂಥ ಸಂದರ್ಭ ಬಂದಾಗ ರಕ್ಷಣೆಗೆ ಬರಬೇಕಾದ್ದು ಪ್ರಭುತ್ವದ ಕೆಲಸ. ಈ ಕೆಲಸದಲ್ಲಿ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಏಕಕಾಲಕ್ಕೆ ಕ್ರಿಯಾಶೀಲವಾದರೆ ಮಾತ್ರ ದೇಶೀಯ ಉಳಿತಾಯ ಸಾಧ್ಯವಾಗುತ್ತದೆ, ದೇಶೀಯ ಹೂಡಿಕೆ ವೃದ್ಧಿಸುತ್ತದೆ, ಭಾರತ ಬಂಡವಾಳ ಸ್ವಾವಲಂಬಿ ರಾಷ್ಟ್ರವಾಗುತ್ತದೆ. ಇಲ್ಲವಾದರೆ ಠೇವಣಿದಾರರ ಸ್ಥಿತಿ ತೋಳನ ಕೈಗೆ ಕುರಿ ಒಪ್ಪಿಸಿದಂತೆ.

ಒಟ್ಟಿನಲ್ಲಿ ಠೇವಣಿದಾರರು ಮತ್ತು ಬ್ಯಾಂಕುಗಳೆರಡನ್ನೂ ರಕ್ಷಿಸಿ ಪೋಷಿಸುವ ಹೊಣೆ ಪ್ರಭುತ್ವದ್ದಾಗಿದೆ. ಠೇವಣಿದಾರರ ನಂಬುಗೆಯನ್ನು ಕಳೆದುಕೊಂಡ ಯಾವುದೇ ಬ್ಯಾಂಕು ಅಥವಾ ಠೇವಣಿಯನ್ನು ಕಚ್ಚಾವಸ್ತುವಾಗಿರಿಸಿಕೊಂಡ ಹಣಕಾಸು ಸಂಸ್ಥೆ ತನ್ನ ಅಸ್ತಿತ್ವವನ್ನು ಕಾಪಾಡಿಕೊಳ್ಳುವುದು ಸಾಧ್ಯವೇ ಇಲ್ಲ.

ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ

ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ
ವಿಶ್ರಾಂತ ಪ್ರ್ರಾಂಶುಪಾಲರು, ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಂದರ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರು. ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು. ಚಿತ್ರದುರ್ಗ ಮೂಲದವರು.


ಇದನ್ನೂ ಓದಿ: ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ?: ವಿಶಿಷ್ಟ ಸ್ವಾತಂತ್ರ್ಯೋತ್ಸವಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...