Homeಕರ್ನಾಟಕಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ ನಿಷೇಧ; ಆದೇಶ ಹಿಂಪಡೆಯುವಂತೆ ಪುಷ್ಪ ಬೆಳೆಗಾರರ ಪ್ರತಿಭಟನೆ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ ನಿಷೇಧ; ಆದೇಶ ಹಿಂಪಡೆಯುವಂತೆ ಪುಷ್ಪ ಬೆಳೆಗಾರರ ಪ್ರತಿಭಟನೆ

- Advertisement -
- Advertisement -

ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನೀಡುವುದನ್ನು ನಿಷೇಧ ಮಾಡಿದ್ದು, ಅವವುಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಕೃಷಿ ರೈತ ಸಂಘಟನೆಗಳು ಬೆಂಗಳೂರಿನ ಹೆಬ್ಬಾಳದ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದೆ.

ಕೊರೊನಾ ಸಂಕಷ್ಟದಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ರಾಜ್ಯ ಸರ್ಕಾರ ಗಧಾಪ್ರಹಾರ ಮಾಡಿದೆ ಎಂದು ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ ಎಂ ಅರವಿಂದ್‌ ಮಾತನಾಡಿ, “ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್‌ ಅವರು, ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಆದೇಶವನ್ನು ಹೊರಡಿಸಿದ್ದಾರೆ. ಇದು ರಾಜ್ಯದ 7500 ಹೆಕ್ಟೇರ್‌ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ಜನ ರೈತರ ಕುಟುಂಬಗಳ ಮೇಲಿನ ಗಧಾಪ್ರಹಾರವಾಗಿದೆ. ಈ ನಿರ್ಧಾರದ ಹಿಂದೆ ಯಾವುದೇ ವೈಜ್ಞಾನಿಕ ಅಥವಾ ಸಂಶೋಧನಾತ್ಮ ಅಂಶಗಳ ಕಂಡು ಬರುತ್ತಿಲ್ಲ” ಎಂದು ಹೇಳಿದ್ದಾರೆ.

“ಈ ನಿಷೇಧದಿಂದಾಗಿ ಕೊರೊನಾ ಸಂಕಷ್ಟದಿಂದ ತೊಂದರೆಗೀಡಾಗಿರುವ ಪುಷ್ಪ ಬೆಳೆಗಾರರ ಚೇತರಿಕೆ ಮತ್ತಷ್ಟು ನಿಧಾನವಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿಯನ್ನು ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ” ಎಂದು ಹೇಳಿದ್ದಾರೆ.

ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್‌ ಬೊಲ್ಲಪಳ್ಳಿ ಮಾತನಾಡಿ, “ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7500 ಹೆಕ್ಟೇರ್‌ ನಷ್ಟು ಭೂಮಿಯಲ್ಲಿ ಗ್ರೀನ್‌ ಹೌಸ್‌ ಮೂಲಕ ಪುಷ್ಪ ಕೃಷಿಯನ್ನು ನಡೆಸಲಾಗುತ್ತಿದೆ. ಅಲ್ಲದೆ, ಇದನ್ನು ಹೊರಪಡಿಸಿ ಲಕ್ಷಾಂತರ ಎಕರೆಗಳಲ್ಲಿ ಹೂವನ್ನು ಬೆಳೆಯಲಾಗುತ್ತಿದೆ.

ಇದನ್ನೂ ಓದಿ: ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ಒಂದು ಎಕರೆಯಲ್ಲಿ ಸುಮಾರು ಆರು ಜನ ಒಂದು ಹೆಕ್ಟೇರ್‌ ನಲ್ಲಿ ಸುಮಾರು 15 ಜನರು ಕಾರ್ಯನಿರ್ವಹಿಸುತ್ತಾರೆ. ಬೆಂಗಳೂರು ನಗರ ದೇಶದ ಪುಷ್ಪೋದ್ಯಮದ ಪ್ರಮುಖ ಹಬ್‌ ಆಗಿದ್ದು, ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ನಡೆಸಿದ ಪ್ರತಿಭಟನೆಯಲ್ಲಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ರಾಜ್ಯದ ಹೂ ಬೆಳೆಗಾರ ರೈತರು ಹಾಗೂ ಪುಷ್ಪೋದ್ಯಮದಲ್ಲಿ ತೊಡಗಿಕೊಂಡಿರುವ ಲಕ್ಷಾಂತರ ಜನರ ಜೀವನ ಆಧಾರ ಉದ್ಯಮಕ್ಕೆ ಈ ರೀತಿ ಕೊಡಲಿ ಪೆಟ್ಟು ನೀಡುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ‘ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...