Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...