Homeಮುಖಪುಟ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಳ್ಳುವ ಆರು ನಿಮಿಷದ ಕಿರು ಚಿತ್ರ ಇದು

- Advertisement -
- Advertisement -

ಆಗಸ್ಟ್‌ 12 ರಂದು ಪ್ರತಿ ವರ್ಷ ‘ವಿಶ್ವ ಆನೆ ದಿನ’ ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಬೇಟೆಗೆ ಬಲಿಯಾಗುವುದು, ತನ್ನ ಆವಾಸಸ್ಥಾನಗಳ ಇಲ್ಲದಾಗುವಿಕೆ, ಮಾನವರೊಂದಿಗೆ ಸಂಘರ್ಷ ಮತ್ತು ಸೆರೆಯಲ್ಲಿ ಕಷ್ಟಗಳು ಹೀಗೆ ಏಷ್ಯನ್ ಮತ್ತು ಆಫ್ರಿಕನ್ ಆನೆಗಳಿಗೆ ಒದಗಿ ಬಂದ ಸಂಕಷ್ಟವನ್ನು ಎತ್ತಿ ಹಿಡಿಯಲು ವಿಶ್ವ ಆನೆ ದಿನವನ್ನು ಪ್ರಾರಂಭಿಸಲಾಯಿತು.

ಅಂತಾರಾಷ್ಟ್ರೀಯ ಆನೆ ದಿನದಂದು ವನ್ಯ ಜೀವಿಗಳ ಬಗ್ಗೆ ಸುಮಾರು 25 ಕಿರು ಚಿತ್ರಗಳನ್ನು ನಿರ್ಮಿಸಿರುವ ಪ್ರಕಾಶ್‌‌ ಮಟದ ಅವರು ನಿರ್ದೇಶಿಸಿರುವ “ಫ್ಲೈಯಿಂಗ್‌ ಎಲಿಫೆಂಟ್ಸ್‌ – ಎ ಮದರ್ಸ್‌ ಹೋಪ್‌” ಎಂಬ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಆನೆಯೊಂದು ತನ್ನ ಆತಂಕ ಮತ್ತು ಮನುಷ್ಯನ ಕ್ರೌರ್ಯವನ್ನು ತನ್ನ ಮರಿಯೊಂದಿಗೆ ತೋಡಿಕೊಳ್ಳುವ ಕಿರು ಚಿತ್ರವಾಗಿದೆ ಫ್ಲೈಯಿಂಗ್‌ ಎಲಿಫೆಂಟ್ಸ್‌!.

ಫ್ಲೈಯಿಂಗ್‌ ಎಲಿಫೆಂಟ್ಸ್ ಕಿರುಚಿತ್ರವು ‘ಜಾಕ್ಸನ್ ವೈಲ್ಡ್-2020’ ರಲ್ಲಿ ‘ಅತ್ಯುತ್ತಮ ಗ್ಲೋಬಲ್ ವಾಯ್ಸ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ವೈಲ್ಡ್‌ ಸ್ಕ್ರೀನ್‌ ಪಿಲ್ಮ್‌ ಫೇಸ್ಟಿವೆಲ್‌ನಲ್ಲಿ ಅಧಿಕೃವಾಗಿ ಆಯ್ಕೆಯಾಗಿರುವ ಏಷ್ಯಾದ ಒಂದೇ ಒಂದು ಕಿರು ಚಿತ್ರ ಇದಾಗಿದೆ. ಅಲ್ಲದೆ, ಇನ್ನೂ ಮೂರು ಫಿಲ್ಮ್‌ಫೆಸ್ಟ್‌ಗಳಿಗೆ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಗಜಶಾಸ್ತ್ರದಲ್ಲಿರುವ ಪೌರಾಣಿಕ ಕಥೆಯೊಂದರ ಮೂಲಕ, ಆನೆಗಳು ಪ್ರಸ್ತುತ ಅನುಭವಿಸುತ್ತಿರುವ ಸಂಕಷ್ಟವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. ಇಷ್ಟೇ ಅಲ್ಲದೆ, ಚಿತ್ರವು ‘ಬೆಟ್ಟ ಕುರುಬ’ ಬುಡಕಟ್ಟು ಭಾಷೆಯಲ್ಲಿ ನಿರೂಪಿಸಲ್ಪಟ್ಟಿದ್ದು ಚಿತ್ರಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ತಾಯಿ ಆನೆಯೊಂದು ಮನುಷ್ಯರು ತಮ್ಮ ಮೇಲೆ ನಡೆಸುವ ಅನ್ಯಾಯಗಳನ್ನು ಹೇಳುತ್ತಾ, ತಾವು ಕಳೆದು ಕೊಂಡ ಹಲವು ಸಂಗತಿಗಳ ಬಗ್ಗೆ ನೆನಪಿಸುತ್ತದೆ. ಕೊನೆಗೆ ಪೌರಾಣಿಕ ಕತೆಯಲ್ಲಿ ತನ್ನ ಪೂರ್ವಜರಿಗೆ ಇದ್ದಂತೆ ತನ್ನ ಮರಿಗೆ ಭವಿಷ್ಯದಲ್ಲಿ ರೆಕ್ಕೆನಾದರೂ ಮರಳಿ ಬರಲಿ ಎಂದು ಬಯಸಿ, ಮನುಷ್ಯನ ಮುಂದೆ ತನ್ನ ಅಸಹಾಯಕತೆಯನ್ನು ಮುಂದಿಡುತ್ತದೆ.

ಕಿರುಚಿತ್ರವನ್ನು ಇಲ್ಲಿ ನೋಡಬಹುದಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಕಾಶ್‌ ಮಟದ, “ಆನೆಗಳು ತನ್ನ ಆವಾಸ ಸ್ಥಾನ ಮತ್ತು ತಾನು ನಡೆದಾಡುವ ಪಥವನ್ನು ಕಳೆದು ಕೊಳ್ಳುತ್ತಿದೆ. ಉದಾಹರಣೆಗೆ ಹೇಳಬೇಕೆಂದರೆ, ಸಕಲೇಶಪುರದಲ್ಲಿ ಎತ್ತಿನಹೊಳೆ ಪ್ರಾರಂಭವಾಯಿತು, ಅದಕ್ಕಿಂತ ಮುಂಚೆ ಬಿಸಿಲೆಘಾಟ್‌, ಚಾರ್ಮಾಡಿ ಘಾಟ್‌ಗಳ ಮೂಲಕ ಆನೆಗಳು ನಡೆದಾಡುತ್ತಿದ್ದವು. ಆದರೆ ಇವೆಲ್ಲಾ, ಆನೆಯ ಕಾರಿಡಾರ್‌‌ಗಳಾಗಿದೆ. ಎತ್ತಿನಹೊಳೆ ಯೋಜನೆ ಪ್ರಾರಂಭಿಸಿದ ನಂತರ ಅವುಗಳ ದಾರಿ ಕಡಿತಗೊಂಡಿತು. ಇದರಿಂದಾಗಿಯೆ ಆನೆಗಳು ರೈತರ ಹೊಲಗಳಿಗೆ ನುಗ್ಗಿ ತೊಂದರೆ ಕೊಡುವುದು” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

“ಆನೆಗಳಿಗೆ ಅವುಗಳ ಪಥ(ಕಾರಿಡಾರ್‌) ಬಹಳ ಮುಖ್ಯವಾದುದಾಗಿದೆ. ಈ ಪಥಗಳಲ್ಲಿ ರೈಲ್ವೇ, ರಸ್ತೆ, ಅಣೆಕಟ್ಟು ಮುಂತಾದವುಗಳನ್ನು ಮಾಡುವುದರಿಂದ ಅವುಗಳ ಚಲನೆಗೆ ತೊಂದರೆಯಾಗುತ್ತದೆ. ಆನೆಯೊಂದು ಸಾಧು ಪ್ರಾಣಿ, ಅವುಗಳು ತೊಂದರೆ ಮಾಡುವುದು ಅವುಗಳಿಗೆ ತೊಂದರೆಯಾದರೆ ಮಾತ್ರ. ಅವುಗಳ ಭೂಮಿ ಅವುಗಳಿಗಷ್ಟೇ ಬಿಟ್ಟುಬಿಡಬೇಕು” ಎಂದು ಪ್ರಕಾಶ್‌ ಹೇಳುತ್ತಾರೆ.

ಎಲಿಫೆಂಟ್ ರಿಇಂಟ್ರೊಡಕ್ಷನ್ ಫೌಂಡೇಶನ್ ಮತ್ತು ಚಲನಚಿತ್ರ ನಿರ್ಮಾಪಕರಾದ ಪೆಟ್ರೀಷಿಯಾ ಸಿಮ್ಸ್ ಮತ್ತು ಮೈಕೆಲ್ ಕ್ಲಾರ್ಕ್ 2011 ರಲ್ಲಿ ಮೊದಲ ಬಾರಿ ಆನೆ ದಿನವನ್ನು ಆರಂಭಿಸಿದರು. ಮೊದಲ ಅಂತರಾಷ್ಟ್ರೀಯ ಆನೆ ದಿನವನ್ನು ಆಗಸ್ಟ್ 12, 2012 ರಂದು ಆಚರಿಸಲಾಯಿತು. ಮಳೆಕಾಡುಗಳ ಜೀವವೈವಿಧ್ಯತೆಯಲ್ಲೊಂದಾದ ಆನೆಗಳನ್ನು ರಕ್ಷಿಸಲು ಪ್ರತಿ ವರ್ಷ ಆಗಸ್ಟ್ 12 ಈ ದಿನವನ್ನು ಕಾಡಿನಲ್ಲಿನ ಆನೆಗಳ ಕಷ್ಟದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಅವುಗಳನ್ನು ರಕ್ಷಿಸಲು ಸಂಭವನೀಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆನೆ ದಿನವನ್ನು ಆಚರಿಸಲಾಗುತ್ತಿದೆ.

ವೈಲ್ಡ್‌ಲೈಫ್‌ ಫಿಲ್ಮ್‌ಮೇಕರ್‌ ಆಗಿರುವ ಪ್ರಕಾಶ್ ಮಟದ ಅವರ ಮತ್ತಷ್ಟು ಚಿತ್ರಗಳನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...