Homeಕರ್ನಾಟಕನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

- Advertisement -
- Advertisement -

ಭಾರತದ ಪುರಾಣಗಳಲ್ಲಿ ಹಾವುಗಳಿಗೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ನಾಗರ ಹಾವನ್ನು ದೇವರ ಅವತಾರವೆಂದು, ಅದರ ಹಣೆಯಲ್ಲಿ ವಜ್ರ (ನಾಗಮಣಿ) ಇದೆಯೆಂದು ಮತ್ತು ಅದನ್ನು ಆರಾಧನೆ ಮಾಡುವುದರಿಂದ ಹಲವಾರು ಕಾಯಿಲೆಗಳು ಗುಣವಾಗುತ್ತದೆ ಎಂದು ನಂಬಲಾಗುತ್ತದೆ.

ಒಮ್ಮೆ ಒಬ್ಬ ಹೆಂಗಸು ತನ್ನ ಮಗಳು, ಸುಂದರ ಮತ್ತು ಶ್ರೀಮಂತ ಹುಡಗನನ್ನು ಮದುವೆ ಆಗಬೇಕು, ಅದಕ್ಕಾಗಿ ಏನು ಮಾಡಬೇಕು ಎಂದು ಪುರೋಹಿತನ ಬಳಿ ಕೇಳುತ್ತಾಳೆ. ಆ ಪುರೋಹಿತ ಮಹಿಳೆಗೆ, “ನಿನ್ನ ಮಗಳು ನಾಗರ ಪಂಚಮಿಯ ದಿನ ಒಂದು ನಾಗರ ಹಾವನ್ನು ಮದುವೆ ಆಗಬೇಕು, ನಾಗರ ಪಂಚಮಿಯ ದಿನ ಮದುವೆ ಆದರೆ ಆ ಹಾವೇ ಒಂದು ಸುಂದರ ಯುವಕನಾಗಿ ಮತ್ತು ನಾಗಮಣಿ ಅದರ ಬಳಿ ಇರುವುದರಿಂದ ಶ್ರೀಮಂತನಾಗಿಯೂ ಬದಲಾಗುತ್ತಾನೆ” ಎಂದು ಸಲಹೆ ನೀಡುತ್ತಾನೆ.

ಅಂತೆಯೇ ಅವರು ಒಂದು ನಾಗರ ಹಾವನ್ನು ಹಿಡಿದು, ಪ್ರಜ್ಞೆ ತಪ್ಪಿಸಿ ’ಮದುವೆ’ ಮಾಡಿಸುತ್ತಾರೆ. ಮುಂದೇನಾಯಿತು ಎಂಬ ಕಾತರವೇ? ಅಂಥದ್ದೇನಿಲ್ಲ ಹಾವು ಎಚ್ಚರಗೊಂಡಮೇಲೆ ಒತ್ತಡ ಮತ್ತು ಗಾಬರಿಯಲ್ಲಿದ್ದ ಹಾವು ತನ್ನ ಆತ್ಮರಕ್ಷಣೆಗಾಗಿ ಆ ಹುಡುಗಿಯನ್ನು ಕಚ್ಚಿ ಓಡಿಹೋಯಿತು. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ನಡೆದುಹೋಗಿದೆ. ಇಂದಿನ ಆಧುನಿಕ ಯುಗದಲ್ಲಿಯೂ ಹಾವಿನ ಬಗ್ಗೆ ಆಪಾರವಾದ ತಪ್ಪು ಕಲ್ಪನೆಗಳು ಇದೆ ಮತ್ತು ಈ ಕಾರಣಕ್ಕೆ ಹಾವುಗಳ ಜೊತೆ ತಪ್ಪಾಗಿ ನಡೆದುಕೊಂಡು ಅವುಗಳ ಸಾವಿಗೂ ಕಾರಣವಾಗಿದೆ ಎಂಬುದು ಆತಂಕಕಾರಿ ವಿಚಾರ.

ಇದನ್ನೂ ಓದಿ: ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ಈ ನಾಗರ ಪಂಚಮಿಯ ದಿನ ಹಾವುಗಳ ಕುರಿತು ಇರುವ ಮಿಥ್ಯೆ ಮತ್ತು ಸತ್ಯಗಳನ್ನು ತಿಳಿದುಕೊಳ್ಳೋಣ

೧. ಹಾವುಗಳು ಹಾಲು ಕುಡಿಯುತ್ತವೆ:

ನಾಗರ ಪಂಚಮಿಯ ದಿನ ಜನರು ಹುತ್ತಗಳಿಗೆ, ಹಾವುಗಳಿಗೆ ಹಾಲುಣಿಸುವುದು ಹಬ್ಬದ ಬಹುಮುಖ್ಯ ಭಾಗವಾಗಿದೆ. ಮತ್ತು ಹಾಲು ಕುಡಿಯುತ್ತದೆ ಎನ್ನುವುದು ಹಾವುಗಳ ಕುರಿತು ಇರುವ ಅತ್ಯಂತ ದೊಡ್ಡ ಮಿಥ್ಯೆ. ವೈಜ್ಞಾನಿಕವಾಗಿ ಜೀವರಾಶಿಯಲ್ಲಿ ಹಾಲು ಕುಡಿಯುವ ಜೀವಿಗಳು ಎಂದರೆ ಸಸ್ತನಿಗಳು, ಹಾವುಗಳು ಸರಿಸೃಪಗಳು ಹಾಗಾಗಿ ಹಾವುಗಳು ಹಾಲು ಕುಡಿಯುದಿಲ್ಲ.

ಹಾಲು ಕುಡಿಯುವ ದೃಶ್ಯ ನಾನು ನೋಡಿದ್ದೇನಲ್ಲ..?

ಸಾಮಾನ್ಯವಾಗಿ ನಾಗರ ಪಂಚಮಿ ಅಥವಾ ಯಾವುದಾರು ವಿಶೇಷ ಸಂದರ್ಭದಲ್ಲಿ ಪೂಜಾರಿಗಳು ಹಾವುಗಳನ್ನು ಹಿಡಿದು ಅವುಗಳಿಗೆ ಆಹಾರ, ನೀರು ಏನೂ ಸಿಗದಂತೆ ಮಾಡಿ ತಿಂಗಳು ಗಟ್ಟಲೆ ಇಡಲಾಗುತ್ತದೆ. ಇದರಿಂದ ಹಾವುಗಳು ಬಳಲಿ ಡೀಹೈಡ್ರೇಟ್ ಆಗುತ್ತದೆ. ಅಂತ ಹಾವುಗಳಿಗೆ ಮಾತ್ರ ಬಲವಂತವಾಗಿ ಹಾಲು ಕುಡಿಸಲಾಗುತ್ತದೆ. ಹಾವುಗಳು ಶೀತ ರಕ್ತದ ಸರೀಸೃಪಗಳು ಅವುಗಳಿಗೆ ಬಲವಂತವಾಗಿ ಹಾಲು ಕುಡಿಸುವುದರಿಂದ ಅವಕ್ಕೆ ಸಾವು ಸಂಭವಿಸುತ್ತದೆ!

೨. ನಾಗರ ಹಾವುಗಳು ಕ್ರೂರ ಜೀವಿಗಳು, ಹಾವುಗಳಿಗೆ 12 ವರ್ಷ ದ್ವೇಷ ಇರುತ್ತದೆ:

ಸಿನೆಮಾದವರಿಗೆ ದೊಡ್ಡ ನಮಸ್ಕಾರ ಹೊಡಿಯಬೇಕು. ಇಂತಹದೊಂದು ತಪ್ಪು ಕಲ್ಪನೆಗೆ ಪುರಾಣಗಳ ಜೊತೆಜೊತೆಗೆ ಹೆಚ್ಚಿನ ಕೊಡುಗೆ ನೀಡಿದ್ದು ಸಿನೆಮಾ ರಂಗ. ದ್ವೇಷ ಎನ್ನುವುದು ಹೆಚ್ಚು ಅಭಿವೃದ್ದಿಗೊಂಡ ಮನುಷ್ಯರ ಮೆದಿಳಿನಲ್ಲಿ ಇರುತ್ತದೆಯೇ ಹೊರತು ಹಾವುಗಳಲ್ಲಿ ಇರುವುದೇ ಇಲ್ಲ. ಹಾವುಗಳು ದ್ವೇಷ ಮಾಡುವ ಜೀವಿಗಳಲ್ಲ, ಅವುಗಳಿಗೆ ಅಷ್ಟು ತೀಕ್ಷ್ಣವಾದ ನೆನಪಿನ ಶಕ್ತಿ ಇಲ್ಲ ಮತ್ತು ಅವುಗಳ ಮೆದಿಳು ಅಷ್ಟು ’ಅಭಿವೃದ್ಧಿಯೂ’ ಆಗಿಲ್ಲ. ದಶಕಗಳ ಕಾಲ ಮನುಷ್ಯರ ಮುಖವನ್ನು ನೆನಪಿನಲ್ಲಿಟ್ಟುಕೊಂಡು ಸಾಯಿಸಲು ಬರುತ್ತದೆ ಎನ್ನುವ ಮೂಢ ನಂಬಿಕೆ ಹುಟ್ಟಲು ಕಾರಣಕರ್ತರು ನಮ್ಮ ಸಿನೆಮಾದವರು.

Nag Panchami Festival In Bidar - YouTube

 

೩. ನಾಗರ ಹಾವಿನ ಬಳಿ ನಾಗಮಣಿ ಇದೆ, ಅದರಿಂದ ಸನ್ಮೋಹಿನಿ ಮಾಡುತ್ತದೆ.

ಇದು ತಮಾಷೆಯಾಗಿದೆಯಾದರೂ ಪುರಾಣ ಮತ್ತು ಸಿನೆಮಾ ಜುಗಲ್‌ಬಂದಿಯಿಂದಾಗಿ ಈ ನಂಬಿಕೆಯೂ ರೂಢಿಯಲ್ಲಿದೆ. ಹಾವುಗಳ ಹಣೆಯಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ವಜ್ರ(ನಾಗಮಣಿ) ಇದೆ ಎನ್ನುವ ಕಾರಣಕ್ಕೆ ಅದೆಷ್ಟೋ ನಾಗರಗಳನ್ನು ಹಿಡಿದು ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ.

೪. ಹಾವುಗಳಿಗೆ ಏಳು ತಲೆಗಳು ಇರುತ್ತದೆ.

ಏಳು ತಲೆಯ ಹಾವು ಈ ದೇವಸ್ಥಾನದಲ್ಲಿ ಕಾವಲಿದೆ, ಆ ನಿಧಿಗೆ ಕಾವಲಿದೆ, ಅವನು ಏಳು ತಲೆಯ ಹಾವು ನೋಡಿದನಂತೆ ಹಾಗಾಗಿ ಸತ್ತುಹೋದ. ಇಂತಹ ಹಲವಾರು ಮಾತುಗಳನ್ನು ನಾವು ಕೇಳಿರುತ್ತೇವೆ. ಇನ್ನೂ ಕೆಲವರು ಈಗ ಇಲ್ಲ ಮುಂಚೆ ಇತ್ತು, ದೇವರುಗಳಿಗೆ ಏಳೆಡೆಯ ಹಾವು ಕಾವಲು ಇರುತ್ತಿತ್ತು ಎಂದು ಹೇಳುತ್ತಾರೆ. ಈಗ ಅಸ್ತಿತ್ವದಲ್ಲಿ ಇಲ್ಲದ ಡೈನಾಸಾರ್‌ಗಳ ಪಳೆಯುಳಿಕೆಗಳಿಂದ ಮತ್ತು ಹಲವಾರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಡೈನಾಸಾರ್ ಗಳು ಇದ್ದವು ಎನ್ನುವ ನಿರ್ಧಾರಕ್ಕೆ ವಿಜ್ಞಾನಿಗಳು ಬಂದಿದ್ದಾರೆ. ಆದರೆ ಏಳು ತಲೆಯ ಹಾವುಗಳು ಇರುವ/ಇದ್ದ ಕುರಿತಾಗಿ ಯಾವುದೇ ಆಧಾರಗಳು ಲಭ್ಯವಿಲ್ಲ.

೫. ಹಾವುಗಳು ಹಾರುತ್ತವೆ.

ಹಾವುಗಳು ಹಾರುತ್ತದೆ ಎನ್ನುವುದನ್ನು ಕೆಲವೇ ಕೆಲವು ಜನರು ನಂಬುತ್ತಾರೆ, ಹಾರುವ ಕೆಲಸ ಏನಿದ್ದರು ಪಕ್ಷಿಗಳದ್ದು. ಸರೀಸೃಪಗಳು ತೆವಳುತ್ತವೆ. ಕೆಲವು ಸಂದರ್ಭದಲ್ಲಿ ಮತ್ತು ಕೆಲವು ಹಾವುಗಳು ಮಾತ್ರ ತಮ್ಮ ದೇಹ ರಚನೆ, ತೂಕ ಆಧಾರದ ಮೇಲೆ ಮರದ ರೆಂಬೆಯಿಂದ ಮತ್ತೊಂದು ರೆಂಬೆಗೆ ಅಥವಾ ಆಳದ ಜಾಗವನ್ನು ದಾಟುವಾಗ ಜಿಗಿಯುತ್ತದೆ ಆದರೆ ಹಾವುಗಳು ಹಾರುವುದಿಲ್ಲ.

ಹಾವುಗಳ ಕುರಿತು ಭಾರತದಲ್ಲಿ ಇಂತಹ ಇನ್ನೂ ಹತ್ತಾರು ಮೂಢ ನಂಬಿಕೆಗಳು ಆಚರಣೆಯಲ್ಲಿದೆ. ಕೆಲವನ್ನು ಮಾತ್ರ ಇಲ್ಲಿ ಚರ್ಚಿಸಲಾಗಿದೆ.

ವಾಸುಕಿ, ಶೇಶನಾಗ ಮತ್ತು ಹಲವು ಪುರಾಣಗಳನ್ನು ಆಧರಿಸಿ ಹಾವುಗಳನ್ನು ಶತಮಾನಗಳನ್ನು ಹಿಂದೂ ಸಂಪ್ರದಾಯದ ಪ್ರಕಾರ ದೇವರೆಂದು ಆರಾಧಾನೆ ಮಾಡಲಾಗುತ್ತಿದೆ. ಅಲ್ಲದೇ ಬೇರೆ ಸಂಪ್ರದಾಯದಲ್ಲಿಯೂ ಆರಾಧನೆ ಇದೆ. ಈಜಿಪ್ಟ್ ಪುರಾಣದ ವಾಜೆಟ್ ನಲ್ಲಿಯೂ ನಾಗ ದೇವಿಯನ್ನು ಆರಾಧಾನೆ ಮಾಡಲಾಗುತ್ತದೆ. ಮತ್ತು (ಬೈಬಲ್ ನ ಸರ್ಪೆಂಟ್ ಸೈತಾನ್) ಹಾವುಗಳನ್ನು ಕೆಟ್ಟ ರಾಕ್ಷಸ ಎಂಬಂತೆಯೂ ನೋಡಲಾಗುತ್ತದೆ. ಆದರೆ ಹಿಂದೂ ಸಂಪ್ರದಾಯದ ಆಚರಣೆಯಲ್ಲಿ ಇಂದಿಗೂ ನಾಗರ ಹಾವುಗಳ ಆರಾಧನೆ ಮುಂದುವರೆದಿದೆ. ಒಟ್ಟಾರೆಯಲ್ಲಿ ಹಾವುಗಳ ಅತೀಯಾದ ಆರಾಧನೆ ಅಥವಾ ದ್ವೇಷ ಈ ಎರಡರಿಂದಲೂ ಹಾವುಗಳ ಅತ್ಯಂತ ತಪ್ಪಾಗಿ ಅರ್ಥ ಮಾಡಿಕೊಳ್ಳಲಾದ ಜೀವಿಯಾಗಿದೆ ಮತ್ತು ಇದರಿಂದಾಗಿ ನಿರಪರಾದಿ ಮುಗ್ದ ಹಾವಿನ ಜೀವಕ್ಕೂ ಅಪಾಯ ತಂದೊಡ್ಡಿದೆ.

ಆಧಾರ: PUGDUNDEE SAFARIS


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...