Homeಮುಖಪುಟಟ್ವಿಟರ್‌ ಖಾತೆ ಸ್ಥಗಿತ: 'ಪ್ರಜಾಪ್ರಭುತ್ವದ ಮೇಲಿನ ದಾಳಿ' ಎಂದ ರಾಹುಲ್ ಗಾಂಧಿ

ಟ್ವಿಟರ್‌ ಖಾತೆ ಸ್ಥಗಿತ: ‘ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್‌ ಖಾತೆಯನ್ನು ಸ್ಥಗಿತಗೊಳಿಸಿರುವ ಕಂಪನಿ ವಿರುದ್ಧ ತಿರುಗಿ ಬಿದ್ದಿರುವ ಅವರು, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕಿಡಿ ಕಾರಿದ್ದಾರೆ.

ಕಳೆದ ವಾರ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 9 ವರ್ಷದ ದಲಿತ ಬಾಲಕಿಯ ಕುಟುಂಬದೊಂದಿಗೆ ರಾಹುಲ್ ಗಾಂಧಿ ಮಾತನಾಡುತ್ತಿರುವ ಫೋಟೋಗಳನ್ನು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗಳನ್ನು ಹಂಚಿಕೊಂಡ ರಾಹುಲ್ ಗಾಂಧಿ ಮತ್ತು ಇತರ ಹಲವು ಕಾಂಗ್ರೆಸ್ ನಾಯಕರ ಟ್ವಿಟರ್ ಹ್ಯಾಂಡಲ್‌ಗಳನ್ನು ಸ್ಥಗಿತ ಮಾಡಲಾಗಿದೆ.

“ಟ್ವಿಟರ್‌ ಖಾತೆ ನಿರ್ಬಂಧ ರಾಹುಲ್ ಗಾಂಧಿಯ ಮೇಲಿನ ದಾಳಿ ಅಲ್ಲ. ನಾನು 19 ರಿಂದ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದೇನೆ. ನೀವು ಅವರ ಅಭಿಪ್ರಾಯದ ಹಕ್ಕನ್ನು ಕೂಡ ನಿರಾಕರಿಸುತ್ತಿದ್ದೀರಿ” ಎಂದು ರಾಹುಲ್ ಗಾಂಧಿ ಯೂಟ್ಯೂಬ್ ವಿಡಿಯೊ ಮೂಲಕ ಹೇಳಿದ್ದಾರೆ.

“ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು ಕಂಪನಿ ಪ್ರಯತ್ನಿಸುತ್ತಿದೆ. ರಾಜಕೀಯ ಪ್ರಕ್ರಿಯೆಯಲ್ಲಿ ಕಂಪನಿ ಹಸ್ತಕ್ಷೇಪ ಮಾಡುತ್ತಿದೆ. ಒಬ್ಬ ರಾಜಕಾರಣಿಯಾಗಿ ನಾನು ಅದನ್ನು ಇಷ್ಟಪಡುವುದಿಲ್ಲ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ” ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಟ್ವಿಟ್ಟರ್ ಕಂಪನಿಯನ್ನು ಪಕ್ಷಪಾತಿ ಎಂದು ಕರೆದಿರುವ ರಾಹುಲ್ ಗಾಂಧಿ, “ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿಯಾಗುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಅವಕಾಶವಿಲ್ಲ. ಮಾಧ್ಯಮವನ್ನು ನಿಯಂತ್ರಿಸಲಾಗುತ್ತಿದೆ. ಇಂತಹ ಸಮಯದಲ್ಲಿ ನಾವು ಟ್ವಿಟರ್‌ನಲ್ಲಿ ನಮ್ಮ ಆಲೋಚನೆಗಳನ್ನು ಹಾಕಬಹುದು ಎಂದು ನಾನು ಭಾವಿಸಿದೆ. ಆದರೆ ಅದು ಸಾಧ್ಯವಿಲ್ಲ. ಟ್ವಿಟರ್ ವಾಸ್ತವವಾಗಿ ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಅದು ಸರ್ಕಾರ ಹೇಳುವುದನ್ನು ಕೇಳುತ್ತದೆ” ಎಂದು ಆರೋಪಿಸಿದ್ದಾರೆ.

ಆದರೆ ಟ್ವಿಟರ್‌ ಮಾತ್ರ, ತಾನು ತನ್ನ ನಿಯಮಗಳನ್ನು “ಎಲ್ಲರಿಗೂ ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಜಾರಿಗೊಳಿಸಿದೆ” ಎಂದು ಹೇಳಿದೆ.  “ನಮ್ಮ ನಿಯಮಗಳನ್ನು ಉಲ್ಲಂಘಿಸುವ ಚಿತ್ರವನ್ನು ಪೋಸ್ಟ್ ಮಾಡಿದ ನೂರಾರು ಟ್ವೀಟ್‌ಗಳ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇತ್ತ ರಾಹುಲ್ ಗಾಂಧಿಗೆ ಬೆಂಬಲವಾಗಿ ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಹೆಸರು ಮತ್ತು ಫೋಟೋವನ್ನು ಬದಲಿಸಿದ್ದಾರೆ. ತಮ್ಮ ಹೆಸರು ಮತ್ತು ಫೋಟೋ ಬದಲು ರಾಹುಲ್ ಗಾಂಧಿ ಫೋಟೋ ಹಾಕಿ ಬೆಂಬಲ ತೋರಿಸಿದ್ದಾರೆ.

ಕಾಂಗ್ರೆಸ್ ಯುವ ಘಟಕದ ಟ್ವಿಟರ್‌ ಖಾತೆಗಳಲ್ಲಿ ರಾಹುಲ್ ಗಾಂಧಿಯ ಪ್ರೋಫೈಲ್‌ ಚಿತ್ರವನ್ನು ಹಾಕಿಕೊಂಡಿರುವುದು.

ಟ್ವಿಟರ್‌ ಖಾತೆ ಸ್ಥಗಿತಗೊಳಿಸಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತು

 

ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...