Homeಮುಖಪುಟಟ್ವಿಟರ್‌ ಖಾತೆ ಸ್ಥಗಿತ: 'ಪ್ರಜಾಪ್ರಭುತ್ವದ ಮೇಲಿನ ದಾಳಿ' ಎಂದ ರಾಹುಲ್ ಗಾಂಧಿ

ಟ್ವಿಟರ್‌ ಖಾತೆ ಸ್ಥಗಿತ: ‘ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್‌ ಖಾತೆಯನ್ನು ಸ್ಥಗಿತಗೊಳಿಸಿರುವ ಕಂಪನಿ ವಿರುದ್ಧ ತಿರುಗಿ ಬಿದ್ದಿರುವ ಅವರು, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕಿಡಿ ಕಾರಿದ್ದಾರೆ.

ಕಳೆದ ವಾರ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 9 ವರ್ಷದ ದಲಿತ ಬಾಲಕಿಯ ಕುಟುಂಬದೊಂದಿಗೆ ರಾಹುಲ್ ಗಾಂಧಿ ಮಾತನಾಡುತ್ತಿರುವ ಫೋಟೋಗಳನ್ನು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗಳನ್ನು ಹಂಚಿಕೊಂಡ ರಾಹುಲ್ ಗಾಂಧಿ ಮತ್ತು ಇತರ ಹಲವು ಕಾಂಗ್ರೆಸ್ ನಾಯಕರ ಟ್ವಿಟರ್ ಹ್ಯಾಂಡಲ್‌ಗಳನ್ನು ಸ್ಥಗಿತ ಮಾಡಲಾಗಿದೆ.

“ಟ್ವಿಟರ್‌ ಖಾತೆ ನಿರ್ಬಂಧ ರಾಹುಲ್ ಗಾಂಧಿಯ ಮೇಲಿನ ದಾಳಿ ಅಲ್ಲ. ನಾನು 19 ರಿಂದ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದೇನೆ. ನೀವು ಅವರ ಅಭಿಪ್ರಾಯದ ಹಕ್ಕನ್ನು ಕೂಡ ನಿರಾಕರಿಸುತ್ತಿದ್ದೀರಿ” ಎಂದು ರಾಹುಲ್ ಗಾಂಧಿ ಯೂಟ್ಯೂಬ್ ವಿಡಿಯೊ ಮೂಲಕ ಹೇಳಿದ್ದಾರೆ.

“ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು ಕಂಪನಿ ಪ್ರಯತ್ನಿಸುತ್ತಿದೆ. ರಾಜಕೀಯ ಪ್ರಕ್ರಿಯೆಯಲ್ಲಿ ಕಂಪನಿ ಹಸ್ತಕ್ಷೇಪ ಮಾಡುತ್ತಿದೆ. ಒಬ್ಬ ರಾಜಕಾರಣಿಯಾಗಿ ನಾನು ಅದನ್ನು ಇಷ್ಟಪಡುವುದಿಲ್ಲ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ” ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಟ್ವಿಟ್ಟರ್ ಕಂಪನಿಯನ್ನು ಪಕ್ಷಪಾತಿ ಎಂದು ಕರೆದಿರುವ ರಾಹುಲ್ ಗಾಂಧಿ, “ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿಯಾಗುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಅವಕಾಶವಿಲ್ಲ. ಮಾಧ್ಯಮವನ್ನು ನಿಯಂತ್ರಿಸಲಾಗುತ್ತಿದೆ. ಇಂತಹ ಸಮಯದಲ್ಲಿ ನಾವು ಟ್ವಿಟರ್‌ನಲ್ಲಿ ನಮ್ಮ ಆಲೋಚನೆಗಳನ್ನು ಹಾಕಬಹುದು ಎಂದು ನಾನು ಭಾವಿಸಿದೆ. ಆದರೆ ಅದು ಸಾಧ್ಯವಿಲ್ಲ. ಟ್ವಿಟರ್ ವಾಸ್ತವವಾಗಿ ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಅದು ಸರ್ಕಾರ ಹೇಳುವುದನ್ನು ಕೇಳುತ್ತದೆ” ಎಂದು ಆರೋಪಿಸಿದ್ದಾರೆ.

ಆದರೆ ಟ್ವಿಟರ್‌ ಮಾತ್ರ, ತಾನು ತನ್ನ ನಿಯಮಗಳನ್ನು “ಎಲ್ಲರಿಗೂ ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಜಾರಿಗೊಳಿಸಿದೆ” ಎಂದು ಹೇಳಿದೆ.  “ನಮ್ಮ ನಿಯಮಗಳನ್ನು ಉಲ್ಲಂಘಿಸುವ ಚಿತ್ರವನ್ನು ಪೋಸ್ಟ್ ಮಾಡಿದ ನೂರಾರು ಟ್ವೀಟ್‌ಗಳ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇತ್ತ ರಾಹುಲ್ ಗಾಂಧಿಗೆ ಬೆಂಬಲವಾಗಿ ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಹೆಸರು ಮತ್ತು ಫೋಟೋವನ್ನು ಬದಲಿಸಿದ್ದಾರೆ. ತಮ್ಮ ಹೆಸರು ಮತ್ತು ಫೋಟೋ ಬದಲು ರಾಹುಲ್ ಗಾಂಧಿ ಫೋಟೋ ಹಾಕಿ ಬೆಂಬಲ ತೋರಿಸಿದ್ದಾರೆ.

ಕಾಂಗ್ರೆಸ್ ಯುವ ಘಟಕದ ಟ್ವಿಟರ್‌ ಖಾತೆಗಳಲ್ಲಿ ರಾಹುಲ್ ಗಾಂಧಿಯ ಪ್ರೋಫೈಲ್‌ ಚಿತ್ರವನ್ನು ಹಾಕಿಕೊಂಡಿರುವುದು.

ಟ್ವಿಟರ್‌ ಖಾತೆ ಸ್ಥಗಿತಗೊಳಿಸಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತು

 

ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...