Homeಚಳವಳಿರೈತ ಹೋರಾಟ: ಸ್ವಾತಂತ್ರ್ಯ ದಿನದಂದು ತಿರಂಗಾ ಯಾತ್ರೆ ನಡೆಸಲಿರುವ ರೈತರು

ರೈತ ಹೋರಾಟ: ಸ್ವಾತಂತ್ರ್ಯ ದಿನದಂದು ತಿರಂಗಾ ಯಾತ್ರೆ ನಡೆಸಲಿರುವ ರೈತರು

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಭಾರತದ 75 ನೇ ಸ್ವಾತಂತ್ರ್ಯ ದಿನವನ್ನು ‘ಕಿಸಾನ್ ಮಜ್ದೂರ್ ಆಜಾದಿ ಸಂಗ್ರಾಮ ದಿವಸ್’ ಎಂದು ಆಚರಿಸಲಿದ್ದು, ಅಂದು ತಿರಂಗಾ ಯಾತ್ರೆ ನಡೆಸಲಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ, ದೇಶಾದ್ಯಂತ ರೈತರು ಸ್ವಾತಂತ್ರ್ಯ ದಿನದಂದು ತಿರಂಗಾ ಯಾತ್ರೆಯಲ್ಲಿ ಬ್ಲಾಕ್ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಆದರೆ, ರೈತರು ದೆಹಲಿಯನ್ನು ಪ್ರವೇಶಿಸುವುದಿಲ್ಲ” ಎಂದು ಒತ್ತಿ ಹೇಳಿದೆ.

ರೈತ ಹೋರಾಟಕ್ಕೆ ಮಸಿ ಬಳಿಯುವ ಯತ್ನ ವಿವಿಧ ರೀತಿಯಲ್ಲಿ ಕಳೆದ ಎಂಟು ತಿಂಗಳಿಂದ ನಡೆಯುತ್ತಿದ್ದು, ಇಂತಹ ಅವಕಾಶಗಳನ್ನು ಬಳಸಿಕೊಳ್ಳುವ ಸಾಧ್ಯತೆಯನ್ನು ಅರಿತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಶಾಂತಿಯುತವಾಗಿ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜದೊಂದಿಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ತಿರಂಗಾ ಯಾತ್ರೆ ಹೆಸರಿನಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಟ್ರ್ಯಾಕ್ಟರ್‌, ಬೈಕ್, ಸೈಕಲ್‌ ಮತ್ತು ಇತರೆ ವಾಹನಗಳಿಗೆ ರಾಷ್ಟ್ರಧ್ವಜವನ್ನು ಕಟ್ಟಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಬ್ಲಾಕ್‌, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕೃಷಿ ಕಾಯ್ದೆಗಳು ಮತ್ತು ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.

“ಸಂಯುಕ್ತ ಕಿಸಾನ್ ಮೋರ್ಚಾ ಆಗಸ್ಟ್ 15 ರಂದು, ಎಲ್ಲಾ ಘಟಕಗಳಿಗೆ ಕಿಸಾನ್ ಮಜ್ದೂರ್ ಆಜಾದಿ ಸಂಗ್ರಾಮ ದಿವಸ್ ಎಂದು ಆಚರಿಸಲು ಕರೆ ನೀಡಿದೆ. ಆ ದಿನ ತಿರಂಗಾ ಯಾತ್ರೆಗಳನ್ನು ಆಯೋಜಿಸಲಾಗುವುದು” ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ್ ಸಮನ್ವಯ ಸಮಿತಿಯ ನಾಯಕಿ ಕವಿತಾ ಕುರುಗಂಟಿ ಹೇಳಿದ್ದಾರೆ.

ಸಿಂಘು, ಟಿಕ್ರಿ ಮತ್ತು ಘಾಜಿಪುರ ಸೇರಿದಂತೆ ದೆಹಲಿಯ ಗಡಿಗಳಲ್ಲಿ, ದಿನವಿಡೀ ತ್ರಿವರ್ಣ ಧ್ವಜದ ಮೆರವಣಿಗೆಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ರೈತರ ಟೆಂಟ್, ಗುಡಿಸಲು, ಟ್ಯ್ರಾಲಿಗಳ ಮೇಲೆ ತಿರಂಗಾವನ್ನು ಹಾರಿಸಲಾಗುತ್ತದೆ.

“ಸಿಂಘು ಗಡಿಯಲ್ಲಿ, ರೈತರು ಪ್ರತಿಭಟನಾ ಸ್ಥಳದ ಮುಖ್ಯ ವೇದಿಕೆಯಿಂದ ಕೆಎಂಪಿ ಎಕ್ಸ್‌ಪ್ರೆಸ್‌ವೇಯವರೆಗೆ ಸುಮಾರು ಎಂಟು ಕಿಲೋಮೀಟರ್‌ಗಳವರೆಗೆ ತ್ರಿವರ್ಣ ಧ್ವಜ ಮತ್ತು ತಮ್ಮ ಕೃಷಿ ಒಕ್ಕೂಟಗಳ ಧ್ವಜಗಳೊಂದಿಗೆ ಮೆರವಣಿಗೆ ನಡೆಸುತ್ತಾರೆ” ಎಂದು ರೈತ ನಾಯಕ ಜಗಮೋಹನ್ ಸಿಂಗ್ ಮಾಹಿತಿ ನೀಡಿದ್ದಾರೆ.

“ಜನವರಿ 26 ರಂದು ನಡೆದ ಘಟನೆಗಳು ನಮ್ಮ ಚಳುವಳಿಗೆ ಧಕ್ಕೆ ತಂದಿವೆ. ಆದ್ದರಿಂದ ಆಗಸ್ಟ್ 15 ರಂದು ನಡೆಯುವ ತಿರಂಗಾ ಯಾತ್ರೆ ಯಾವುದೇ ನಗರವನ್ನು ಪ್ರವೇಶಿಸುವುದಿಲ್ಲ. ಆದರೆ ನಮ್ಮ ಬೇಡಿಕೆಗಳು ಈಡೇರುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ” ಎಂದು ರೈತ ನಾಯಕ ಜಗಮೋಹನ್ ಸಿಂಗ್  ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ಮುಂದಿನ 6 ತಿಂಗಳಿಗಾಗಿ ಪಡಿತರ ಸಂಗ್ರಹಿಸುತ್ತಿರುವ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...