Homeಕರ್ನಾಟಕಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

- Advertisement -
- Advertisement -

ಬೆಂಗಳೂರಿನ ಐತಿಹಾಸಿಕ ಬೇಗೂರು ಕೆರೆ ಈಗ ವಿವಾದದ ಸ್ಥಳವಾಗಿ ರೂಪುಗೊಂಡಿದೆ. ಕೆರೆಯ ಬಳಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದೆ. ಕಾರಣ ಈ ಕೆರೆಯ ಅಭಿವೃದ್ಧಿಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ಮತ್ತು ಬಿಬಿಎಂಪಿ ಮಾಡಿದ ಎಡವಟ್ಟು.

2018 ರಲ್ಲಿ ಬೇಗೂರು ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಬಿಬಿಎಂಪಿ ಕೆರೆ ಮಧ್ಯ ಕೃತಕ ದ್ವೀಪ ಮತ್ತು ಶಿವನ ಮೂರ್ತಿ ಸ್ಥಾಪಿಸಲು ಆರಂಭಿಸಿತ್ತು. ಇಂತಹ ಕೆರೆ ಅಭಿವೃದ್ಧಿಯು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

 

ಬುಧವಾರ (ಆಗಸ್ಟ್ 11) ವಿಚಾರಣೆ ನಡೆಸಿದ ಮುಖ್ಯ  ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಹೈಕೋರ್ಟ್ ವಿಭಾಗಿಯ ನ್ಯಾಯಪೀಠ, ದ್ವೀಪದಲ್ಲಿ ಪ್ರತಿಮೆ ಅನಾವರಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಆದೇಶ ನೀಡಿತ್ತು. ಜೊತೆಗೆ ಕೆರೆ ಬಳಿ ಬಿಗೆ ಪೊಲೀಸ್ ಬಂದೋಬಸ್ತ್ ಮಾಡಲು ತಿಳಿಸಿತ್ತು. ಪೊಲೀಸರ ರಕ್ಷಣೆಯಲ್ಲಿ ಮತ್ತೆ ಪ್ರತಿಮೆಯನ್ನು ಮುಚ್ಚಬೇಕು ಎಂದು ತಿಳಿಸಿದೆ.

ಕೆರೆಯ ಮಧ್ಯದಲ್ಲಿ ದ್ವೀಪ ನಿರ್ಮಿಸಲು ಅವಕಾಶವಿದೇಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದಾರೆ. ಇದರಲ್ಲಿ ಯಾವುದೇ ಧಾರ್ಮಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ತಿಳಿಸಿದೆ.

ಇಷ್ಟೇಲ್ಲಾ ಆದರೂ ಕೂಡ, ಹೈಕೋರ್ಟ್ ಆದೇಶದ ಬೆನ್ನಲ್ಲೇ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವರು ಮತ್ತೆ ಕೆರೆಗೆ ಹೋಗಿ ಪ್ರತಿಮೆಯ ಟಾರ್ಪಲ್ ತೆಗೆದು ದಾಂಧಲೆ ನಡೆಸಿದ್ದಾರೆ. ಸದ್ಯ ಕೆರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ ಹಾಕಲಾಗಿದೆ. ಜೊತೆಗೆ ಇದಕ್ಕೆ ರಾಜಕೀಯ ಕೂಡ ಸೇರ್ಪಡೆಗೊಂಡಿದ್ದು ಪ್ರಕರಣ ಎಲ್ಲಿಗೆ ಮುಟ್ಟುತ್ತದೆಯೋ ಎಂಬ ಆತಂಕ ಎದುರಾಗಿದೆ.

ಕೆರೆಗಳ ಉಳಿವಿಗಾಗಿ ದಶಕಗಳಿಂದಲೂ ಹೋರಾಡುತ್ತಿರುವ ಪರಿಸರ ಹೋರಾಟಗಾರ ಲಿಯೋ ಸಾಲ್ಡಾನಾ, “ಕೆರೆ ಉಳಿವಿಗಾಗಿ, ಕೆರೆಯಲ್ಲಿ ಏನು ನಿರ್ಮಿಸಬೇಕು, ಏನು ನಿರ್ಮಿಸಬಾರದು ಎಂಬ ನಿಯಮಗಳಿವೆ. ಇದರ ಅಡಿಯಲ್ಲಿ ನಾವು ಅರ್ಜಿ ಸಲ್ಲಿಸಿದ್ದೇವೆ. ನಾವು ಸರಿಯಾದ ದಾರಿಯಲ್ಲಿದ್ದೇವೆ ಎಂಬುದು ಹೈಕೋರ್ಟ್ ಆದೇಶದಿಂದ ತಿಳಿದು ಬಂದಿದೆ” ಎಂದಿದ್ದಾರೆ.

ಒಟ್ಟಾರೆ, ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಇರುವ ಬೇಗೂರು ಕೆರೆಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ತೊಲಗಿ ಆದಷ್ಟು ಬೇಗ ಅಭಿವೃದ್ಧಿ ಕಾರ್ಯ ನಡೆದು, ಐತಿಹಾಸಿಕ ಬೇಗೂರು ಕೆರೆ ಉಳಿಯಲಿ ಎಂಬುದಷ್ಟೇ ನಮ್ಮ ಆಶಯ.

ವಿಡಿಯೊ ನೋಡಿ….


ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಕಮ್ಯೂನಿಸ್ಟ್ ರು ಯಾವಾಗಲಾದರು ಅಕ್ರಮ ವಾಗಿ ನಿರ್ಮಿಸಿರುವ ಚರ್ಚ್ ,ಮಸೀದಿಗಳ ಬಗ್ಗೆಯೂ ಮಾತನಾಡಿದ ಉದಾಹರಣೆಗಳು ಇತಿಹಾಸದಲ್ಲಿ ಇದಿಯಾ ,ನೀವು ನಿಮ್ಮ ನಿಲವು ದೇಶ ವಿರೋಧಿ ಚಟುವಟಿಕೆ ಕಡೆಗೆ ಇರುತ್ತದೆ ಬಿಡಿ ,ನಿಮ್ಮ ಪತ್ರಿಕೆಯು ಅದೇ ರೀತಿ ಕೆಲಸ ಮಾಡುತ್ತಿದೆ……

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...