Homeಕರ್ನಾಟಕಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

- Advertisement -
- Advertisement -

ಕಾಳಿ-ಮಲಪ್ರಭಾ-ಘಟಪ್ರಭಾ ನದಿ ಜೋಡಣೆಗೆ ಉತ್ತರ ಕನ್ನಡದಲ್ಲಿ ವಿರೋಧ ವ್ಯಕ್ತವಾಗಿದೆ. ಕಾಳಿ ನದಿ ಉತ್ತರ ಕನ್ನಡದ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಿನ ಜೀವಜಾಲದ ಜೀವನ! ಈ ತಾಲೂಕಿನ ಬದುಕಿನೊಂದಿಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕಾಳಿ ಇಲ್ಲದಿದ್ದರೆ ಎಲ್ಲವೂ ಖಾಲಿ-ಖಾಲಿ!! ಉತ್ತರ ಕರ್ನಾಟಕದ ಸಕ್ಕರೆ ಫ್ಯಾಕ್ಟರಿ ಲಾಬಿಯ ಕಣ್ಣು ಕಾಳಿ ಮೇಲೆ ಬಿದ್ದಾಗಿಂದ ಅದರ ಎರಡೂ ದಂಡೆ ಮೇಲಿರುವ ಮಂದಿ ಕಂಗಾಲಾಗಿ ಹೋಗಿದ್ದಾರೆ. ಮುರುಗೇಶ್ ನಿರಾಣಿ ಬೃಹತ್ ಕೈಗಾರಿಕಾ ಮಂತ್ರಿಯಾದಾಗೆಲ್ಲ ಕಾಳಿಯನ್ನು ಮಲಪ್ರಭಾ ಮತ್ತು ಘಟಪ್ರಭಾ ನದಿಗೆ ಜೋಡಿಸಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ನೀರೊದಗಿಸುವ ಕಾರ್ಯಸಾಧ್ಯವಲ್ಲದ ಹುಚ್ಚು ಯೋಜನೆ ಕಾರ್ಯಗತಗೊಳಿಸುವ ಸಂಚೊಂದು ಒಳಗೊಳಗೇ ಬಿರುಸಿಂದ ನಡೆಯುತ್ತದೆಂದು ಕಾಳಿ ನದಿ ಪಾತ್ರದ ಮಂದಿ ಆತಂಕಿತರಾಗುತ್ತಾರೆ.

ಮೊನ್ನೆ ನಿರಾಣಿ ಮತ್ತೆ ದೊಡ್ಡ ಕೈಗಾರಿಕಾ ಮಂತ್ರಿಯಾಗುತ್ತಲೇ ತಮ್ಮ ಜೀವ ನದಿಗೆ ಕುತ್ತು ಬರುವ ಭಯಕ್ಕೆ ಕಾಳಿ ಮಕ್ಕಳು ಬಿದ್ದಿದ್ದಾರೆ. 2019ರಲ್ಲಿ ನಿರಾಣಿ ಸಹೋದರರಾದ ಮಂತ್ರಿ ಮುರುಗೇಶ್, ಎಮ್‌ಎಲ್‌ಸಿ ಹನುಮಂತ ಮತ್ತು ಉದ್ಯಮಿ ಸಂಗಮೇಶ್‌ರ ನಿರಾಣಿ ಪೌಂಡೇಶನ್ ಘಟಪ್ರಭಾ-ಮಲಪ್ರಭಾ ನದಿಗಳಿಗೆ ಉತ್ತರ ಕನ್ನಡದ ಕಾಳಿ ನದಿಯ 25 ಟಿಎಮ್‌ಸಿ ನೀರನ್ನು ಹರಿಸುವ ವಿಸ್ತ್ರತ ವರದಿಯೊಂದನ್ನು ಸರಕಾಕ್ಕೆ ನೀಡಿತ್ತು. ಏತ ನೀರಾವರಿ ಯೋಜನೆಯಿಂದ ಘಟಪ್ರಭಾ ಮತ್ತು ಮಲಪ್ರಭಾಕ್ಕೆ ಕಾಳಿ ನೀರನ್ನು ತುಂಬಿದರೆ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಮಗ್ರ ಕುಡಿಯುವ ನೀರು ಮತ್ತು ಸುಮಾರು 600 ಕೆರೆಗಳ ಪುನಶ್ಚೇತನ ಯೋಜನೆಗಳನ್ನು ಕೈಗೊಳ್ಳಬಹುದೆಂಬ ಆಕರ್ಷಕ ವರದಿ ನಿರಾಣಿ ಪೌಂಡೇಶನ್ ತಯಾರು ಮಾಡಿತ್ತು. ಸದ್ರಿ ಯೋಜನೆಗೆ ಒಪ್ಪಿಗೆ ಪಡೆಯಲು ಸಚಿವ ನಿರಾಣಿ ಆರು ಬಾರಿ ಕೇಂದ್ರ ಸರಕಾರದ ಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

PC : Kannada News – News18, (ಮುರುಗೇಶ್ ನಿರಾಣಿ)

ಘಟಪ್ರಭಾ-ಮಲಪ್ರಭಾದಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಈ ಯೋಜನೆ ಜಾರಿಗೆ ಬಯಲು ಸೀಮೆ ಕಡೆಯ ಕೆಲವು ಮಠಾಧೀಶರು ಮತ್ತು ರೈತ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಉತ್ತರ ಕನ್ನಡದಲ್ಲಿ ಸದ್ರಿ ನದಿ ತಿರುವು ಯೋಜನೆ ವಿರುದ್ಧ ದೊಡ್ಡ ಕೂಗೆದದ್ದಿದೆ. ಕಾಳಿಯ 140 ಟಿಎಮ್‌ಸಿ ನೀರು ವಿದ್ಯುತ್ ಉತ್ಪಾದನೆಯ ಬಳಿಕ ವ್ಯರ್ಥವಾಗಿ ಸಮುದ್ರ ಸೇರುತ್ತದೆಂಬುದು ನಿರಾಣಿ ಬಳಗದ ವಾದ. ಆದರೆ ಸೂಪಾ ಜಲಾಶಯದ ನೀರಿನ ಸಂಗ್ರಹದ ಸಾಮರ್ಥ್ಯವೇ 144 ಟಿಎಮ್‌ಸಿ; ನಿರಾಣಿಗಳ ವರದಿಯಲ್ಲಿ ಹೇಳಿರುವಷ್ಟು ಸುಲಭವಾಗಿ ಕಾಳಿ ನೀರನ್ನು ಬಯಲು ಸೀಮೆಯೆಡೆ ತಿರುಗಿಸಲಾಗದು. ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

ಕಾಳಿ ಜನ್ಮ ತಳೆಯುವ ಜೋಯಿಡಾದ ಡಿಗ್ಗಿ ಗ್ರಾಮದಿಂದ ಕಾರವಾರದಲ್ಲಿ ಅರಬ್ಬಿ ಸಮುದ್ರ ಸೇರುವ ತನಕ ಐದು ಜಲ ವಿದ್ಯುತ್ ತಯಾರಿಸುವ ಆಣೆಕಟ್ಟುಗಳಿವೆ. ಈ ಜಲಾಶಯಗಳಲ್ಲಿ ಸಂಗ್ರಹವಾಗುವ ನೀರು ವಿದ್ಯುತ್ ಉತ್ಪಾದನೆ ನಂತರ ಸಮುದ್ರ ಸೇರುತ್ತದೆ. ಇದು ನಿರಾಣಿಗಳು ಹೇಳುವಂತೆ ವ್ಯರ್ಥ ನೀರಲ್ಲ. ಸಮುದ್ರದ ಲವಣಾಂಶ ಕಾಪಾಡಲು ಸಿಹಿ ನಿರು ಬೇಕು. ಆಗ ಮಾತ್ರ ಸಮುದ್ರದಲ್ಲಿರುವ ಜಲಚರಗಳು ಬದುಕಲು ಸಾಧ್ಯವೆಂದು ಅಧ್ಯಯನ ವರದಿಗಳು ಹೇಳುತ್ತವೆ. ನದಿಯ ಇಕ್ಕೆಲದಲ್ಲಿ ಕುಡಿಯುವ ನೀರಿಗಾಗಿ ಹಲವು ಚೆಕ್ ಡ್ಯಾಮ್‌ಗಳನ್ನು ನಿರ್ಮಿಸಲಾಗಿದೆ. ಕಾಳಿ ದಡದ ಮೇಲೆಯೇ ಕೈಗಾ ಅಣು ಸ್ಥಾವರವಿದ್ದು ಅದರ ಶೀಥಲೀಕರಣಕ್ಕೆ ಕಾಳಿ ನೀರನ್ನೆ ಬಳಸಲಾಗುತ್ತಿದೆ. ಹಳಿಯಾಳ ಭಾಗದ ರೈತರಿಗೆ ಅನಿವಾರ್ಯವಾದ ಕಾಳಿ ನೀರಾವರಿ ಯೋಜನೆಯಿದೆ. ಈ ನದಿ ಪಶ್ಚಿಮ ಘಟ್ಟದ ಜೀವ ವೈವಿದ್ಯತೆಯ ಮತ್ತು ತೀರಾ ಸೂಕ್ಷ್ಮಜೀವವಲಯವಾದ ಮಧ್ಯ ಪಶ್ಚಿಮ ಘಟ್ಟ ಪ್ರದೇಶದಿಂದ ಹರಿಯುತ್ತಿದೆ. ಇಂಥ ನದಿಯನ್ನು ತಿರುಗಿಸಲು ಪ್ರಯತ್ನಿಸುವುದು ಅಪಾಯಕಾರಿ ದುಸ್ಸಾಹಸವೆಂದು ಪರಿಸರ ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಕಾಳಿ ನೀರು ಬಯಲು ಸೀಮೆಯೆಡೆ ತಿರುಗಿಸಿದರೆ ನದಿ ಪಾತ್ರದಲ್ಲಿ ಹರಿವು ಸೊರಗಿ ಕಣಿವೆ ಬರಡಾಗುವುದು ಖಂಡಿತ. ಅಷ್ಟೇ ಅಲ್ಲ, ನೀರು ಬಯಲು ಸೀಮೆಗೂ ತಲುಪದೆ ಯೋಜಿತ ಉದ್ದೇಶ ವಿಫಲವಾಗಲಿದೆ.

ಸ್ಥಳಿಯ ಜೀವ ಜಾಲವನ್ನು ಛಿದ್ರಗೊಳಿಸುವ ಈ ನದಿ ತಿರುವು ಯೋಜನೆಗೆ ಅವಕಾಶ ಕೊಡುವುದಿಲ್ಲವೆಂದು ಕಾಳಿ ತೀರದ ಮಂದಿ ಒಂದಾಗಿ ಒಕ್ಕೊರಳಲ್ಲಿ ಹೇಳುತ್ತಿದ್ದಾರೆ. ಕಾಳಿ ಕಣಿವೆ ಇಡೀ ಭಾರತಕ್ಕೆ ಮುಂಗಾರು ಮಳೆ ತರುವ ಪಶ್ಚಿಮ ಘಟ್ಟದ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶ ಅದರಲ್ಲೂ ಜೋಯಿಡಾ ಮತ್ತು ದಾಂಡೇಲಿ ಭಾಗಗಳು ಸೂಕ್ಷ್ಮಜೀವ ವಲಯ ವ್ಯಾಪ್ತಿಯಲ್ಲಿವೆ. ಯುನೆಸ್ಕೊ ಪಶ್ಚಿಮ ಘಟ್ಟವನ್ನು ಪಾರಂಪರಿಕ ತಾಣವೆಂದು ಘೋಶಿಸಿದೆ. ಕಾಳಿ ಕಣಿವೆ ಹುಲಿ ಸಂರಕ್ಷಿತ ಪ್ರದೇಶವಾದರೆ ಜೋಯಿಡಾ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿದೆ. ಕಾಡು ಪ್ರಾಣಿಗಳಿಗೆ ಕಾಳಿ ನೀರೆ ಸಂಜೀವಿನಿ. ಇಂಥ ಜೀವ ಸಂಕುಲದ ಉಸಿರಾದ ನದಿ ನೀರನ್ನು ಬಲವಂತವಾಗಿ ತಿರುಗಿಸಿದರೆ ಇಡೀ ದೇಶದ ಪರಿಸರದ ಮೇಲೆ ದುಶ್ಪರಿಣಾಮವಾಗುತ್ತದೆಂದು ಹಲವು ಅಧ್ಯಯನಗಳು ಸ್ಪಷ್ಟವಾಗಿ ಹೇಳಿವೆ.

PC : Prajavani , (ಸಂಗಮೇಶ ನಿರಾಣಿ)

ನಿರಾಣಿ ಸಹೋದರರು ನದಿ ಜೋಡಣೆ ವರದಿ ಸಿದ್ದಪಡಿಸುವ ಮೊದಲು ಪಶ್ಚಿಮ ಘಟ್ಟದ ಪರಿಸರದ ಬಗೆಗಿನ ಮಾಧವ ಗಾಡ್ಗೀಳ್ ವರದಿ ಅಥವಾ ಕಸ್ತೂರಿ ರಂಗನ್ ವರದಿ ಓದಿದಹಾಗಿಲ್ಲ; ತಮ್ಮ ಸಕ್ಕರೆ ಉದ್ಯಮದ ಹಿತಾಸಕ್ತಿ ಒಂದನ್ನೆ ಗಮನದಲ್ಲಿಟ್ಟುಕೊಂಡು ಅವೈಜ್ಞನಿಕ ನದಿ ತಿರುವು ಯೋಜನಾವರದಿ ತಯಾರಿಸಿದ್ದಾರೆಂದು ದಾಂಡೇಲಿಯ ಪರಿಸರ ಸಂರಕ್ಷಣಾ ಸಂಸ್ಥೆಯ ಕಾರ್ಯದರ್ಶಿ ಕೀರ್ತಿ ಗಾಂವ್ಕರ್, ನಗರ ಸಭಾ ಸದಸ್ಯ ಮೋಹನ ಹಲವಾಯಿ, ದಾಂಡೇಲಿ ಪ್ರವಾಸೋದ್ಯಮ ಸಂಘದ ಸಲಹೆಗಾರ ಅನಿಲ್ ದಂಡಗಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಯಲು ಸೀಮೆಯ ಐದು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸು ಮತ್ತು ಕೆರೆಗಳನ್ನು ತುಂಬಿಸುವ ನೆಪದಲ್ಲಿ ಕಬ್ಬು ಬೆಳೆಯಲು ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಬೇಕಾದ ನೀರು ಪಡೆಯಲು ಸಕ್ಕರೆ ಲಾಬಿ ಕಾಳಿ ನೀರಿಗಾಗಿ ಹೊಂಚು ಹಾಕಿದೆ ಎಂಬುದು ಉತ್ತರ ಕನ್ನಡದಲ್ಲಿ ಚಾಲ್ತಿಯಲ್ಲಿರುವ ಅಭಿಪ್ರಾಯ. ಈ ಕಾರಣಕ್ಕಾಗಿಯೆ ಸಕ್ಕರೆ ಉದ್ಯಮಿಯಾದ ಸಚಿವ ನಿರಾಣಿ ನಿರಂತರವಾಗಿ ಕಾಳಿ ನೀರನ್ನು ಘಟಪ್ರಭಾ-ಮಲಪ್ರಭಾ ನದಿಗೆ ತುಂಬಿಸುವ ಪ್ರಯತ್ನ ನಡೆಸಿದ್ದಾರೆಂದು ಜಿಲ್ಲೆಯ ಪರಿಸರ ಹೋರಟಗಾರರು ನೇರವಾಗಿಯೇ ಹೇಳುತ್ತಾರೆ.


ಇದನ್ನೂ ಓದಿ: ಅಭಿವೃದ್ಧಿ ಭ್ರಮೆಯ ಮತ್ತೊಂದು ಪ್ರಯೋಗ ; ಅಘನಾಶಿನಿ ನದಿ ನೀರನ್ನು ಬಯಲುಸೀಮೆಗೊಯ್ಯುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....