Homeಮುಖಪುಟದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ಸರ್ಕಾರಗಳು ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು.

- Advertisement -
- Advertisement -

“ಮಕ್ಕಳೇ ನಮ್ಮ ರಾಜ್ಯದ ಮುಂದಿನ ಭವಿಷ್ಯ. ಹಾಗಾಗಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ನಿರ್ಧರಿಸಿ, ದೆಹಲಿ ಬಜೆಟ್‌ನಲ್ಲಿ ಶೇ. 25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೆವು. ಆದ್ದರಿಂದ ದೆಹಲಿ ಶೈಕ್ಷಣಿಕ ಕ್ರಾಂತಿ ಸಾಧಿಸಲು ಸಾಧ್ಯವಾಯಿತು ಎಂದು ದೆಹಲಿಯ ಎಎಪಿ ಶಾಸಕಿ, ಶಿಕ್ಷಣ ತಜ್ಞೆ ಆತಿಶಿ ಮಾರ್ಲೇನಾ ತಿಳಿಸಿದರು.

ಬೆಂಗಳೂರಿನ ರೋಟರಿ ಹಾಲ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಆಯೋಜಿಸಿದ್ದ “ಶಿಕ್ಷಣ ಸಮ್ಮೇಳನ” ಸಂವಾದದಲ್ಲಿ ಮಾತನಾಡಿದ ಅವರು, “ಏಳು ವರ್ಷಗಳ ಹಿಂದೆ ದೆಹಲಿಯ ಸರ್ಕಾರಿ ಶಾಲೆಗಳು ಕೂಡ ಕರ್ನಾಟಕದ ಈಗಿನ ಸರ್ಕಾರಿ ಶಾಲೆಗಳಂತೆ ಇದ್ದವು. ಶೌಚಾಲಯ, ಬೋರ್ಡ್‌, ಡೆಸ್ಕ್‌, ಟೇಬಲ್‌, ಕೊಠಡಿ ಯಾವುದೂ ಅಲ್ಲಿ ಸರಿಯಾಗಿರಲಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ಅನುಭವ ಹಂಚಿಕೊಂಡರು.

ದೆಹಲಿ ಸರ್ಕಾರದಂತೆ ಕರ್ನಾಟಕ ಸರ್ಕಾರ ಕೂಡ ಕೋವಿಡ್‌ ಸಮಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ನಾವು ಮೀಸಲಿಟ್ಟ ಹಣದಲ್ಲಿ ಪ್ರತಿ ರೂಪಾಯಿಗೂ ಲೆಕ್ಕವಿಟ್ಟು ಸದ್ಭಳಕೆ ಮಾಡಿಕೊಂಡೆವು ಎಂದರು.

ಶಿಕ್ಷಣದಲ್ಲಿ ಸುಧಾರಣೆ ತರುವುದು ಕಷ್ಟವಲ್ಲ. ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು ಅಷ್ಟೇ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳಿಗೆ ಶಿಕ್ಷಣವು ಆದ್ಯತೆಯ ವಿಷಯವೇ ಆಗಿಲ್ಲ. ಆದ್ದರಿಂದ ದೆಹಲಿಯೇತರ ರಾಜ್ಯಗಳ ಸರ್ಕಾರಿ ಶಾಲೆಗಳು ಈಗಲೂ ಹಿಂದುಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ


ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು. ಉಪಕರಣಗಳ ಕೊರತೆಯಿಂದಾಗಿ ಕರ್ನಾಟಕದ 65% ಮಕ್ಕಳು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಕೊರೊನಾವನ್ನು ಬಿಟ್ಟರೆ, ಹಾಳಾಗಿರುವ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ ಎಂದು ಆತಿಶಿ ಮಾರ್ಲೇನಾ ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಬೋಧನಾ ಗುಣಮಟ್ಟದ ಅಭಿವೃದ್ಧಿಗೆ ಶಿಕ್ಷಕರನ್ನು ಮಾತ್ರವಲ್ಲದೇ ಪೋಷಕರ ಸಹಾಯವನ್ನೂ ಪಡೆಯಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ನಡುವೆ ಅನೇಕ ಸಲ ಸಭೆ, ಸಂವಾದ ಏರ್ಪಡಿಸಿದೆವು. ಅಲ್ಲಿ ಅಮೂಲ್ಯವಾದ ಸಲಹೆಗಳು ಕೇಳಿಬಂದವು. ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಕೆಲಸವನ್ನು ಎಎಪಿ ಸರ್ಕಾರ ಮಾಡಿತು. ಶಿಕ್ಷಕರಿಗೆ ತಜ್ಞರಿಂದ ತರಬೇತಿ ಕೊಡಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಂಡೆವು. ಈ ಎಲ್ಲಾ ಕ್ರಮಗಳಿಂದ ಪೋಷಕರಿಗೆ ಸರ್ಕಾರದ ಮೇಲೆ ಹೆಮ್ಮೆ ಉಂಟಾಗಿ, ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಸ್ವಯಂಪ್ರೇರಣೆಯಿಂದ ಎಎಪಿ ಪರವಾಗಿ ಕೆಲಸ ಮಾಡಿದರು. ಹೀಗೆ ನಾವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಎಎಪಿಯ ಬೆಳವಣಿಗೆಗೂ ಕಾರಣವಾಯಿತು ಎಂದು ಆತಿಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ಎಎಪಿ ಮುಖಂಡರಾದ ಎಚ್‌.ಡಿ.ಬಸವರಾಜು, ಶಿಕ್ಷಣ ತಜ್ಞರಾದ ಗುರುರಾಜ್‌ ಕರ್ಜಗಿ, ತಾನ್ಯಾ ಜಯರಾಜ್‌, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್‌, ಚಿದಾನಂದ್‌, ಗುರು ಕಾಸಿನಾಥನ್‌, ಸಂಜೀವ್‌ ನರೇನ್‌ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...