Homeಮುಖಪುಟದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ಸರ್ಕಾರಗಳು ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು.

- Advertisement -
- Advertisement -

“ಮಕ್ಕಳೇ ನಮ್ಮ ರಾಜ್ಯದ ಮುಂದಿನ ಭವಿಷ್ಯ. ಹಾಗಾಗಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ನಿರ್ಧರಿಸಿ, ದೆಹಲಿ ಬಜೆಟ್‌ನಲ್ಲಿ ಶೇ. 25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೆವು. ಆದ್ದರಿಂದ ದೆಹಲಿ ಶೈಕ್ಷಣಿಕ ಕ್ರಾಂತಿ ಸಾಧಿಸಲು ಸಾಧ್ಯವಾಯಿತು ಎಂದು ದೆಹಲಿಯ ಎಎಪಿ ಶಾಸಕಿ, ಶಿಕ್ಷಣ ತಜ್ಞೆ ಆತಿಶಿ ಮಾರ್ಲೇನಾ ತಿಳಿಸಿದರು.

ಬೆಂಗಳೂರಿನ ರೋಟರಿ ಹಾಲ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಆಯೋಜಿಸಿದ್ದ “ಶಿಕ್ಷಣ ಸಮ್ಮೇಳನ” ಸಂವಾದದಲ್ಲಿ ಮಾತನಾಡಿದ ಅವರು, “ಏಳು ವರ್ಷಗಳ ಹಿಂದೆ ದೆಹಲಿಯ ಸರ್ಕಾರಿ ಶಾಲೆಗಳು ಕೂಡ ಕರ್ನಾಟಕದ ಈಗಿನ ಸರ್ಕಾರಿ ಶಾಲೆಗಳಂತೆ ಇದ್ದವು. ಶೌಚಾಲಯ, ಬೋರ್ಡ್‌, ಡೆಸ್ಕ್‌, ಟೇಬಲ್‌, ಕೊಠಡಿ ಯಾವುದೂ ಅಲ್ಲಿ ಸರಿಯಾಗಿರಲಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ಅನುಭವ ಹಂಚಿಕೊಂಡರು.

ದೆಹಲಿ ಸರ್ಕಾರದಂತೆ ಕರ್ನಾಟಕ ಸರ್ಕಾರ ಕೂಡ ಕೋವಿಡ್‌ ಸಮಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ನಾವು ಮೀಸಲಿಟ್ಟ ಹಣದಲ್ಲಿ ಪ್ರತಿ ರೂಪಾಯಿಗೂ ಲೆಕ್ಕವಿಟ್ಟು ಸದ್ಭಳಕೆ ಮಾಡಿಕೊಂಡೆವು ಎಂದರು.

ಶಿಕ್ಷಣದಲ್ಲಿ ಸುಧಾರಣೆ ತರುವುದು ಕಷ್ಟವಲ್ಲ. ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು ಅಷ್ಟೇ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳಿಗೆ ಶಿಕ್ಷಣವು ಆದ್ಯತೆಯ ವಿಷಯವೇ ಆಗಿಲ್ಲ. ಆದ್ದರಿಂದ ದೆಹಲಿಯೇತರ ರಾಜ್ಯಗಳ ಸರ್ಕಾರಿ ಶಾಲೆಗಳು ಈಗಲೂ ಹಿಂದುಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ


ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು. ಉಪಕರಣಗಳ ಕೊರತೆಯಿಂದಾಗಿ ಕರ್ನಾಟಕದ 65% ಮಕ್ಕಳು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಕೊರೊನಾವನ್ನು ಬಿಟ್ಟರೆ, ಹಾಳಾಗಿರುವ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ ಎಂದು ಆತಿಶಿ ಮಾರ್ಲೇನಾ ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಬೋಧನಾ ಗುಣಮಟ್ಟದ ಅಭಿವೃದ್ಧಿಗೆ ಶಿಕ್ಷಕರನ್ನು ಮಾತ್ರವಲ್ಲದೇ ಪೋಷಕರ ಸಹಾಯವನ್ನೂ ಪಡೆಯಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ನಡುವೆ ಅನೇಕ ಸಲ ಸಭೆ, ಸಂವಾದ ಏರ್ಪಡಿಸಿದೆವು. ಅಲ್ಲಿ ಅಮೂಲ್ಯವಾದ ಸಲಹೆಗಳು ಕೇಳಿಬಂದವು. ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಕೆಲಸವನ್ನು ಎಎಪಿ ಸರ್ಕಾರ ಮಾಡಿತು. ಶಿಕ್ಷಕರಿಗೆ ತಜ್ಞರಿಂದ ತರಬೇತಿ ಕೊಡಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಂಡೆವು. ಈ ಎಲ್ಲಾ ಕ್ರಮಗಳಿಂದ ಪೋಷಕರಿಗೆ ಸರ್ಕಾರದ ಮೇಲೆ ಹೆಮ್ಮೆ ಉಂಟಾಗಿ, ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಸ್ವಯಂಪ್ರೇರಣೆಯಿಂದ ಎಎಪಿ ಪರವಾಗಿ ಕೆಲಸ ಮಾಡಿದರು. ಹೀಗೆ ನಾವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಎಎಪಿಯ ಬೆಳವಣಿಗೆಗೂ ಕಾರಣವಾಯಿತು ಎಂದು ಆತಿಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ಎಎಪಿ ಮುಖಂಡರಾದ ಎಚ್‌.ಡಿ.ಬಸವರಾಜು, ಶಿಕ್ಷಣ ತಜ್ಞರಾದ ಗುರುರಾಜ್‌ ಕರ್ಜಗಿ, ತಾನ್ಯಾ ಜಯರಾಜ್‌, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್‌, ಚಿದಾನಂದ್‌, ಗುರು ಕಾಸಿನಾಥನ್‌, ಸಂಜೀವ್‌ ನರೇನ್‌ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...