Homeಮುಖಪುಟದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ಸರ್ಕಾರಗಳು ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು.

- Advertisement -
- Advertisement -

“ಮಕ್ಕಳೇ ನಮ್ಮ ರಾಜ್ಯದ ಮುಂದಿನ ಭವಿಷ್ಯ. ಹಾಗಾಗಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ನಿರ್ಧರಿಸಿ, ದೆಹಲಿ ಬಜೆಟ್‌ನಲ್ಲಿ ಶೇ. 25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೆವು. ಆದ್ದರಿಂದ ದೆಹಲಿ ಶೈಕ್ಷಣಿಕ ಕ್ರಾಂತಿ ಸಾಧಿಸಲು ಸಾಧ್ಯವಾಯಿತು ಎಂದು ದೆಹಲಿಯ ಎಎಪಿ ಶಾಸಕಿ, ಶಿಕ್ಷಣ ತಜ್ಞೆ ಆತಿಶಿ ಮಾರ್ಲೇನಾ ತಿಳಿಸಿದರು.

ಬೆಂಗಳೂರಿನ ರೋಟರಿ ಹಾಲ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಆಯೋಜಿಸಿದ್ದ “ಶಿಕ್ಷಣ ಸಮ್ಮೇಳನ” ಸಂವಾದದಲ್ಲಿ ಮಾತನಾಡಿದ ಅವರು, “ಏಳು ವರ್ಷಗಳ ಹಿಂದೆ ದೆಹಲಿಯ ಸರ್ಕಾರಿ ಶಾಲೆಗಳು ಕೂಡ ಕರ್ನಾಟಕದ ಈಗಿನ ಸರ್ಕಾರಿ ಶಾಲೆಗಳಂತೆ ಇದ್ದವು. ಶೌಚಾಲಯ, ಬೋರ್ಡ್‌, ಡೆಸ್ಕ್‌, ಟೇಬಲ್‌, ಕೊಠಡಿ ಯಾವುದೂ ಅಲ್ಲಿ ಸರಿಯಾಗಿರಲಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ಅನುಭವ ಹಂಚಿಕೊಂಡರು.

ದೆಹಲಿ ಸರ್ಕಾರದಂತೆ ಕರ್ನಾಟಕ ಸರ್ಕಾರ ಕೂಡ ಕೋವಿಡ್‌ ಸಮಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ನಾವು ಮೀಸಲಿಟ್ಟ ಹಣದಲ್ಲಿ ಪ್ರತಿ ರೂಪಾಯಿಗೂ ಲೆಕ್ಕವಿಟ್ಟು ಸದ್ಭಳಕೆ ಮಾಡಿಕೊಂಡೆವು ಎಂದರು.

ಶಿಕ್ಷಣದಲ್ಲಿ ಸುಧಾರಣೆ ತರುವುದು ಕಷ್ಟವಲ್ಲ. ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು ಅಷ್ಟೇ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳಿಗೆ ಶಿಕ್ಷಣವು ಆದ್ಯತೆಯ ವಿಷಯವೇ ಆಗಿಲ್ಲ. ಆದ್ದರಿಂದ ದೆಹಲಿಯೇತರ ರಾಜ್ಯಗಳ ಸರ್ಕಾರಿ ಶಾಲೆಗಳು ಈಗಲೂ ಹಿಂದುಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ


ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು. ಉಪಕರಣಗಳ ಕೊರತೆಯಿಂದಾಗಿ ಕರ್ನಾಟಕದ 65% ಮಕ್ಕಳು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಕೊರೊನಾವನ್ನು ಬಿಟ್ಟರೆ, ಹಾಳಾಗಿರುವ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ ಎಂದು ಆತಿಶಿ ಮಾರ್ಲೇನಾ ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಬೋಧನಾ ಗುಣಮಟ್ಟದ ಅಭಿವೃದ್ಧಿಗೆ ಶಿಕ್ಷಕರನ್ನು ಮಾತ್ರವಲ್ಲದೇ ಪೋಷಕರ ಸಹಾಯವನ್ನೂ ಪಡೆಯಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ನಡುವೆ ಅನೇಕ ಸಲ ಸಭೆ, ಸಂವಾದ ಏರ್ಪಡಿಸಿದೆವು. ಅಲ್ಲಿ ಅಮೂಲ್ಯವಾದ ಸಲಹೆಗಳು ಕೇಳಿಬಂದವು. ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಕೆಲಸವನ್ನು ಎಎಪಿ ಸರ್ಕಾರ ಮಾಡಿತು. ಶಿಕ್ಷಕರಿಗೆ ತಜ್ಞರಿಂದ ತರಬೇತಿ ಕೊಡಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಂಡೆವು. ಈ ಎಲ್ಲಾ ಕ್ರಮಗಳಿಂದ ಪೋಷಕರಿಗೆ ಸರ್ಕಾರದ ಮೇಲೆ ಹೆಮ್ಮೆ ಉಂಟಾಗಿ, ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಸ್ವಯಂಪ್ರೇರಣೆಯಿಂದ ಎಎಪಿ ಪರವಾಗಿ ಕೆಲಸ ಮಾಡಿದರು. ಹೀಗೆ ನಾವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಎಎಪಿಯ ಬೆಳವಣಿಗೆಗೂ ಕಾರಣವಾಯಿತು ಎಂದು ಆತಿಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ಎಎಪಿ ಮುಖಂಡರಾದ ಎಚ್‌.ಡಿ.ಬಸವರಾಜು, ಶಿಕ್ಷಣ ತಜ್ಞರಾದ ಗುರುರಾಜ್‌ ಕರ್ಜಗಿ, ತಾನ್ಯಾ ಜಯರಾಜ್‌, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್‌, ಚಿದಾನಂದ್‌, ಗುರು ಕಾಸಿನಾಥನ್‌, ಸಂಜೀವ್‌ ನರೇನ್‌ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...