Homeಕರ್ನಾಟಕಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ - ಪ್ರಕರಣ ಭೇದಿಸಿದ...

ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

- Advertisement -
- Advertisement -

ಇತ್ತೀಚೆಗೆ ತಮ್ಮ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಬೊಮ್ಮನ ಹಳ್ಳಿ ಶಾಸಕ ಸತೀಶ್‌ ರೆಡ್ಡಿ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿ ವಾಸ್ತವಾಂಶವನ್ನು ಬಯಲಿಗೆಳೆದಿದ್ದಾರೆ. ‘ಶಾಸಕ ಸತೀಶ್‌ ರೆಡ್ಡಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೆ ಇರುವುದರಿಂದ ಸಿಟ್ಟಾಗಿದ್ದ ಆರೋಪಿಗಳು ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಸ್ವತಃ ಶಾಸಕ ಸತೀಶ್‌ ರೆಡ್ಡಿ ಅವರೇ ಮಾಡಿದ್ದರು. ಅಲ್ಲದೆ ಬಿಜೆಪಿ ಪರವಿರುವ ಸಂಘಪರಿವಾರದ ಕಾರ್ಯಕರ್ತರು ಬೇಗೂರು ಕೆರೆಯ ಶಿವನ ಪ್ರತಿಮೆಯ ವಿವಾದದ ಭಾಗವಾಗಿ ಅವರ ಕಾರಿಗೆ ಬೆಂಕಿ ಹಾಕಲಾಗಿದೆ ಎಂದು ಕೂಡಾ ಆರೋಪಿಸಿದ್ದರು. ಇದರ ಜೊತೆಗೆ ಹಲವು ಮಾಧ್ಯಮಗಳೂ ಕೋಮು ಬಣ್ಣ ಹಚ್ಚಿಯೆ ವರದಿ ಮಾಡಿದ್ದವು. ಆದರೆ ಕೊನೆಗೂ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆದರೆ ಬಿಬಿಎಂಪಿ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಬಿಬಿಎಂಪಿಯ ಕೆಲಸವನ್ನು ಪ್ರಶ್ನಿಸಿದ್ದರು. ಪ್ರಕರಣವನ್ನು ಆಲಿಸಿದ್ದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ, ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು.

ಅಷ್ಟೇ ಅಲ್ಲದೆ, ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ. ಆದರೆ, ಕಾನೂನಾತ್ಮಕ ತೊಡಕು ಮತ್ತು ಪರಿಸರ ಸಮಸ್ಯೆಯನ್ನು ಸಂಘಪರಿವಾರದ ಕಾರ್ಯಕರ್ತರು ಕೋಮುದ್ವೇಷಕ್ಕೆ ಬಳಸಿಕೊಂಡಿದ್ದು, ಪ್ರಕರಣವನ್ನು ಕೋಮು ವಿವಾದವನ್ನಾಗಿ ಮಾಡಿದ್ದರು.

ಇದರ ಮದ್ಯೆ ಶಾಸಕ ಸತೀಶ್‌ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದು, ಇದನ್ನೂ ಬೇಗೂರು ಕೆರೆಯ ವಿವಾದಕ್ಕೆ ತಗಲುಹಾಕಿಕೊಂಡು ಪ್ರಕರಣವನ್ನು ಮತ್ತಷ್ಟು ಸಿಕ್ಕುಸಿಕ್ಕನ್ನಾಗಿ ಮಾಡಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿ ವಿವಾದವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

“ಶಾಸಕ ಸತೀಶ್ ರೆಡ್ಡಿ ಶ್ರೀಮಂತರು. ನಮ್ಮಂಥ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನೂ ಆಲಿಸಲು ಅವರ ಬಳಿ ಸಮಯವಿಲ್ಲ. ಮನೆ ಬಳಿ ಹೋದರೂ ಅವರನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ. ಇದರಿಂದ ಸಿಟ್ಟಾಗಿ, ಅವರ ಕಾರುಗಳಿಗೆ ಬೆಂಕಿ ಹಚ್ಚಿದೆವು” ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸ್‌‌ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರಾಗಿದ್ದು, ಆಗಸ್ಟ್‌‌ 11 ರ ಬುಧವಾರ ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಅವರ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ವಿಡಿಯೊ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯಾಂಶವನ್ನು ಬಯಲಿಗೆಳೆದ ಪೊಲೀಸರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...