Homeಕರ್ನಾಟಕಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ - ಪ್ರಕರಣ ಭೇದಿಸಿದ...

ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

- Advertisement -
- Advertisement -

ಇತ್ತೀಚೆಗೆ ತಮ್ಮ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಬೊಮ್ಮನ ಹಳ್ಳಿ ಶಾಸಕ ಸತೀಶ್‌ ರೆಡ್ಡಿ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿ ವಾಸ್ತವಾಂಶವನ್ನು ಬಯಲಿಗೆಳೆದಿದ್ದಾರೆ. ‘ಶಾಸಕ ಸತೀಶ್‌ ರೆಡ್ಡಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೆ ಇರುವುದರಿಂದ ಸಿಟ್ಟಾಗಿದ್ದ ಆರೋಪಿಗಳು ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಸ್ವತಃ ಶಾಸಕ ಸತೀಶ್‌ ರೆಡ್ಡಿ ಅವರೇ ಮಾಡಿದ್ದರು. ಅಲ್ಲದೆ ಬಿಜೆಪಿ ಪರವಿರುವ ಸಂಘಪರಿವಾರದ ಕಾರ್ಯಕರ್ತರು ಬೇಗೂರು ಕೆರೆಯ ಶಿವನ ಪ್ರತಿಮೆಯ ವಿವಾದದ ಭಾಗವಾಗಿ ಅವರ ಕಾರಿಗೆ ಬೆಂಕಿ ಹಾಕಲಾಗಿದೆ ಎಂದು ಕೂಡಾ ಆರೋಪಿಸಿದ್ದರು. ಇದರ ಜೊತೆಗೆ ಹಲವು ಮಾಧ್ಯಮಗಳೂ ಕೋಮು ಬಣ್ಣ ಹಚ್ಚಿಯೆ ವರದಿ ಮಾಡಿದ್ದವು. ಆದರೆ ಕೊನೆಗೂ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆದರೆ ಬಿಬಿಎಂಪಿ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಬಿಬಿಎಂಪಿಯ ಕೆಲಸವನ್ನು ಪ್ರಶ್ನಿಸಿದ್ದರು. ಪ್ರಕರಣವನ್ನು ಆಲಿಸಿದ್ದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ, ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು.

ಅಷ್ಟೇ ಅಲ್ಲದೆ, ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ. ಆದರೆ, ಕಾನೂನಾತ್ಮಕ ತೊಡಕು ಮತ್ತು ಪರಿಸರ ಸಮಸ್ಯೆಯನ್ನು ಸಂಘಪರಿವಾರದ ಕಾರ್ಯಕರ್ತರು ಕೋಮುದ್ವೇಷಕ್ಕೆ ಬಳಸಿಕೊಂಡಿದ್ದು, ಪ್ರಕರಣವನ್ನು ಕೋಮು ವಿವಾದವನ್ನಾಗಿ ಮಾಡಿದ್ದರು.

ಇದರ ಮದ್ಯೆ ಶಾಸಕ ಸತೀಶ್‌ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದು, ಇದನ್ನೂ ಬೇಗೂರು ಕೆರೆಯ ವಿವಾದಕ್ಕೆ ತಗಲುಹಾಕಿಕೊಂಡು ಪ್ರಕರಣವನ್ನು ಮತ್ತಷ್ಟು ಸಿಕ್ಕುಸಿಕ್ಕನ್ನಾಗಿ ಮಾಡಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿ ವಿವಾದವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

“ಶಾಸಕ ಸತೀಶ್ ರೆಡ್ಡಿ ಶ್ರೀಮಂತರು. ನಮ್ಮಂಥ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನೂ ಆಲಿಸಲು ಅವರ ಬಳಿ ಸಮಯವಿಲ್ಲ. ಮನೆ ಬಳಿ ಹೋದರೂ ಅವರನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ. ಇದರಿಂದ ಸಿಟ್ಟಾಗಿ, ಅವರ ಕಾರುಗಳಿಗೆ ಬೆಂಕಿ ಹಚ್ಚಿದೆವು” ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸ್‌‌ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರಾಗಿದ್ದು, ಆಗಸ್ಟ್‌‌ 11 ರ ಬುಧವಾರ ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಅವರ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ವಿಡಿಯೊ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯಾಂಶವನ್ನು ಬಯಲಿಗೆಳೆದ ಪೊಲೀಸರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...