Homeಕರೋನಾ ತಲ್ಲಣ3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

- Advertisement -
- Advertisement -

ಕೊರೊನಾ ಎರಡನೆ ಅಲೆಯಿಂದ ಹೈರಾಣಾಗಿರುವ ದೇಶಕ್ಕೆ ಮೂರನೆ ಅಲೆಯ ಆತಂಕ ಎದುರಾಗಿದೆ. ಈ ಮಧ್ಯೆ ಸೆಪ್ಟೆಂಬರ್‌ 10 ರ ವೇಳೆಗೆ ಭಾರತದ ಕೊರೊನಾ ಪ್ರಕರಣಗಳು 32.8 ಕೋಟಿ ಮತ್ತು ಸಾವುಗಳು 4.40 ಲಕ್ಷ ಮುಟ್ಟುವ ನಿರೀಕ್ಷೆಯಿದೆ ಎಂದು ಜೀವನ್ ರಕ್ಷಾ ಸಮೀಕ್ಷೆ ವಿಶ್ಲೇಷಿಸಿದೆ. ಈ ವಿಶ್ಲೇಷಣೆಯಂತೆ ಈ ಸಮಯದಲ್ಲಿ ಕರ್ನಾಟಕದ ಕೊರೊನಾ ಪ್ರಕರಣಗಳು 29.50 ಲಕ್ಷ ಮತ್ತು ಸಾವುಗಳ ಸಂಖ್ಯೆ 37,470 ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.

ಎರಡನೇ ಅಲೆಯ ನಂತರ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಪ್ರದೇಶದಗಳಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಕಳೆದ ನಾಲ್ಕು ವಾರಗಳಲ್ಲಿ ಇಲ್ಲಿ ಹೊಸ ಪ್ರಕರಣಗಳು 24% ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿದ್ದು, ಇಲ್ಲಿ 18.4% ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿಯಾಗಿದೆ. ನಂತರದ ಸ್ಥಾನದಲ್ಲಿ, ಮೈಸೂರು, ಉಡುಪಿ ಮತ್ತು ಹಾಸನ ಜಿಲ್ಲೆಗಳಿವೆ.

ಇದನ್ನೂ ಓದಿ: ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

“ಕರ್ನಾಟಕವು ಅತ್ಯಂತ ಜಾಗರೂಕತೆ ವಹಿಸಬೇಕು. ಹೊರಗಿನಿಂದ ಬರುವವರಿಗೆ ಕಡಿವಾಣ ಹಾಕಬೇಕು. ಇಂದು ಕರ್ನಾಟಕವು 22,000 ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಮಾರ್ಚ್ ಮಧ್ಯದಲ್ಲಿ ಅಬ್ಬರಿಸಿದ 2 ನೇ ಅಲೆ ಸಮಯದಲ್ಲಿ, ಕೇವಲ ಐದರಿಂದ ಆರು ವಾರಗಳಲ್ಲಿ, ರಾಜ್ಯದಲ್ಲಿ 6 ಲಕ್ಷ ಸಕ್ರಿಯ ಪ್ರಕರಣಗಳು ವರದಿಯಾಗಿತ್ತು. ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಬೇಕು” ಎಂದು ಜೀವನ್ ರಕ್ಷಾದ ಸಂಚಾಲಕ ಮೈಸೂರು ಸಂಜೀವ್ ಹೇಳಿದ್ದಾರೆ.

ಜುಲೈ ತಿಂಗಳಲ್ಲಿ ಕರ್ನಾಟಕವು 61,314 ಹೊಸ ಕೊರೊನಾ ಪ್ರಕರಣಗಳು ಮತ್ತು 1,522 ಸಾವುಗಳನ್ನು ವರದಿ ಮಾಡಿದೆ. ಕರ್ನಾಟಕದಲ್ಲಿ ಕೊರೊನಾ ಚಿಕಿತ್ಸೆಗಾಗಿ 28,060 ಹೊಸ ವಿಮಾ ಕ್ಲೈಂಗಳನ್ನು ನೋಂದಾಯಿಸಲಾಗಿದೆ. ಅಂದರೆ ಸೋಂಕಿಗೊಳಗಾದವರಲ್ಲಿ 46% ಜನರು ಆರೋಗ್ಯ ವಿಮಾ ರಕ್ಷಣೆಯನ್ನು ಹೊಂದಿದ್ದಾರೆ.

ವಾಸ್ತವವಾಗಿ, “ಜುಲೈನಲ್ಲಿ ಕರ್ನಾಟಕದಲ್ಲಿ ನಿಜವಾದ ಪ್ರಕರಣಗಳ ಸಂಖ್ಯೆ ಸುಮಾರು 1.75 ಲಕ್ಷದಿಂದ 1.9 ಲಕ್ಷ ಮತ್ತು ಸುಮಾರು 3,000 ಸಾವುಗಳು ಸಂಭವಿಸಿವೆ” ಎಂದು ಸಂಜೀವ್ ತಿಳಿಸಿದ್ದಾರೆ.

ಇದನ್ನೂ ಓದಿ: ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...