Homeಮುಖಪುಟ75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ಆತಂಕದ ನಡುವೆ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗಿದೆ.

ಭಾಷಣದಲ್ಲಿ ದೇಶದ ಯೋಜನೆಗಳು ಶೇ 100 ರಷ್ಟು ಜನರಿಗೆ ತಲುಪಬೇಕು ಎಂದಿರುವ ಪ್ರಧಾನಿ, ಎರಡು ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗೆ ಕರೆ ನೀಡಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಸುದೀರ್ಘ ಮತ್ತು ಕಠಿಣ ಹೋರಾಟವನ್ನು ನಡೆಸಿದೆ ಎಲ್ಲಾ ಹಿಂದಿನ ನಾಯಕರಿಗೆ ಪ್ರಧಾನಿ ಗೌರವ ಸಲ್ಲಿಸಿದ್ದಾರೆ. ಜವಾಗಹರ್‌ ಲಾಲ್ ನೆಹರೂ, ಸರ್ದಾರ್ ಪಟೇಲ್, ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಚಂದ್ರಶೇಖರ್ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮ ಮುಂತಾದ ಮಹನೀಯರನ್ನು ಸ್ಮರಿಸಿದ್ದಾರೆ. ಭಾರತಕ್ಕೆ ಭವಿಷ್ಯದ ಹಾದಿಯನ್ನು ತೋರಿಸಿದ ಇವರುಗಳಿಗೆ ದೇಶವು ಋಣಿಯಾಗಿದೆ ಎಂದಿದ್ದಾರೆ.

“ನಮ್ಮ ಹಳ್ಳಿಗಳಿಗೆ 100% ರಸ್ತೆಗಳಿವೆ, ಶೇ.100 ರಷ್ಟು ಮನೆಗಳಿಗೆ ಬ್ಯಾಂಕ್ ಖಾತೆಗಳಿವೆ, ಶೇ.100 ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಇದೆ, ಶೇ.100 ರಷ್ಟು ಅರ್ಹ ವ್ಯಕ್ತಿಗಳಿಗೆ ಉಜ್ವಲ ಅನಿಲ ಯೋಜನೆಯ ಸಂಪರ್ಕವಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಉತ್ಪಾದನೆ ಮತ್ತು ಉದ್ಯೋಗವನ್ನು ಉತ್ತೇಜಿಸಲು ಸರ್ಕಾರವು 100 ಕೋಟಿ ರೂ.ಮೌಲ್ಯದ ಗತಿ ಶಕ್ತಿ ಯೋಜನೆಯನ್ನು ಆರಂಭಿಸಲಿದೆ. “ಎಲ್ಲಾ ತಯಾರಕರು ಜಾಗತಿಕ ಮಾರುಕಟ್ಟೆಯನ್ನು ಗುರಿಯಾಗಿಸಿಕೊಳ್ಳಬೇಕು. ಭಾರತವು ಜಾಗತಿಕ ಮಾರುಕಟ್ಟೆಯ ಕೇಂದ್ರವಾಗಬೇಕು” ಎಂದು ಎಂದು ಪ್ರಧಾನಿ ಹೇಳಿದ್ದಾರೆ.

ಬಾಲಕಿಯರಿಗಾಗಿ ಸೈನಿಕ ಶಾಲೆಗಳನ್ನು ತೆರೆಯಲಾಗುವುದು. 75 ವಂದೇ ಭಾರತ್ ರೈಲುಗಳು ಅಮೃತ್ ಹಬ್ಬದ 75 ವಾರಗಳಲ್ಲಿ ದೇಶದ ಮೂಲೆ ಮೂಲೆಯನ್ನು ಸಂಪರ್ಕಿಸಲಿವೆ. ಇನ್ನು ಮುಂದೆ, ಆಗಸ್ಟ್ 14 ಅನ್ನು “ವಿಭಜನೆಯ ಕರಾಳ ದಿನ” ಎಂದು ಆಚರಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹಾಜರಿದ್ದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ” ಒಲಂಪಿಕ್ಸ್ ನಲ್ಲಿ ನಮಗೆ ಹೆಮ್ಮೆ ತಂದ ಕ್ರೀಡಾಪಟುಗಳು ಇಂದು ನಮ್ಮ ನಡುವೆ ಇದ್ದಾರೆ. ಅವರ ಸಾಧನೆಯನ್ನು ಶ್ಲಾಘಿಸುವಂತೆ ನಾನು ರಾಷ್ಟ್ರವನ್ನು ಒತ್ತಾಯಿಸುತ್ತೇನೆ. ಅವರು ನಮ್ಮ ಹೃದಯವನ್ನು ಗೆಲ್ಲುವುದಲ್ಲದೆ ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಲಾಗುತ್ತದೆ. ಅಲ್ಲಿಯವರೆಗೆ ನಮ್ಮ ಗುರಿ ಭಾರತದ ನಿರ್ಮಾಣ ಆಗಿರಬೇಕು. ಯಾವ ರಾಷ್ಟ್ರಕ್ಕೂ ನಾವು ಕಡಿಮೆ ಇಲ್ಲ ಎನ್ನುವಂತೆ ಬೆಳೆಯಬೇಕು. ನಮ್ಮ ಎಲ್ಲಾ ಗುರಿಗಳ ಸಾಧನೆಗೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಬಹಳ ಮುಖ್ಯವಾಗಿದೆ” ಎಂದರು.

ರಾಷ್ಟ್ರೀಯ ಹೈಡ್ರೋಜನ್‌ ಮಿಷನ್‌ ಘೋಷಣೆ. ನಾವು ಭಾರತವನ್ನು ಹಸಿರು ಜಲಜನಕದ ಉತ್ಪಾದನೆ ಮತ್ತು ರಫ್ತು ಮಾಡುವ ಕೇಂದ್ರವನ್ನಾಗಿಸಬೇಕು. ಈಶಾನ್ಯ ಭಾಗ, ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕರಾವಳಿ ಪ್ರದೇಶ ಮತ್ತು ಬುಡಕಟ್ಟು ಪ್ರದೇಶಗಳು ಭವಿಷ್ಯದಲ್ಲಿ ಭಾರತದ ಅಭಿವೃದ್ಧಿಗೆ ಅಡಿಪಾಯಗಳಾಗಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿರ್ಣಯದ ಆಯೋಗವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ 54 ಕೋಟಿ ಜನರು ಲಸಿಕೆ ಪಡೆದಿದ್ದಾರೆ. ಎಲ್ಲಾ ಪ್ರಯತ್ನಗಳ ಹೊರತಾಗಿಯೂ ನಾವು ಅನೇಕ ಜನರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅನೇಕ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...