Homeಕರ್ನಾಟಕಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ವಸತಿ ಕಲ್ಪಸಿಕೊಡಲಾಗುವುದು

- Advertisement -
- Advertisement -

ಕೊರೊನಾ ಆತಂಕದ ಮಧ್ಯೆಯೇ ಭಾರತವು ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಅಮೃತ’ ಎಂಬ ಹೆಸರಿನೊಂದಿಗೆ ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾಹೋರಾಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ’ಕರ್ನಾಟಕ ನಾಡು, ನುಡಿ, ನೆಲ, ಜಲದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ದುಡಿಯುತ್ತೇನೆ. ರೈತರು, ನೇಕಾರರು ಸೇರಿದಂತೆ ವಿವಿಧ ಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತೇನೆ’ ಎಂದು ಹೇಳಿದ್ದಾರೆ.

“ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟ ಉತ್ತೇಜಿಸಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ 225 ಕೋಟಿ ರೂಪಾಯಿ ಮೂಲ ಬಂಡವಾಳವನ್ನು ಒದಗಿಸಿ, ಪ್ರತಿ ಸಂಸ್ಥೆಗೂ 30 ಲಕ್ಷ ರೂ ನೀಡಲಾಗುವುದು” ಎಂದು ಬೊಮ್ಮಾಯಿ ಪ್ರಕಟಿಸಿದ್ದಾರೆ.

ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಅಪ್ಪರ್‌ ಕೃಷ್ಣ 3ನೇ ಹಂತವನ್ನು ಮಾಡಿ 5.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅದಕ್ಕೆ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟದ ಅಗತ್ಯವಿದೆ. ಅದರೊಂದಿಗೆ ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

“ಮೇಕೆದಾಟು ಮತ್ತು ಮಹಾದಾಯಿ ಯೋಜನೆಗಳನ್ನು ಪ್ರಾರಂಭಿಸಬೇಕಾಗಿದೆ. ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಕಾನೂನಿನ ಎಲ್ಲಾ ಆಯಾಮಗಳನ್ನು ಅವರಿಗೆ ಮನವರಿಗೆ ಮಾಡಿ, ಪರವಾನಗಿ ಪಡೆದು, ಯೋಜನೆಯನ್ನ ಪ್ರಾರಂಭಿಸುತ್ತೇವೆ. ಬೆಂಗಳೂರು ಮತ್ತು ಹಲವು ಗ್ರಾಮಗಳಿಗೆ ಕುಡಿಯುವ ನೀರು ತರುತ್ತೇವೆ” ಎಂದು ಹೇಳಿದ್ದಾರೆ.

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಸಿಕೊಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಅಮೃತ ಗ್ರಾಮ ಪಂಚಾಯತಿ ಯೋಜನೆಯ ಅಡಿಯಲ್ಲಿ ಆಯ್ದ 750 ಗ್ರಾಮ ಪಂಚಾಯಿತಿಗಳಿಗೆ ಪ್ರತಿ ಮನೆಗೆ ಕುಡಿಯುವ ನೀರು, ಘನತ್ಯಾಜ್ಯ ವಿತರಣೆ, ವಿದ್ಯುತ್‌, ಡಿಜಿಟಲ್‌ ಲೈಬ್ರರಿಗಳನ್ನ ತೆರೆಯುತ್ತೇವೆ ಎಂದು ಹೇಳಿದ್ದಾರೆ.

ಅಮೃತ ನಿರ್ಮಲ ನಗರ ಯೋಜನೆಯಡಿ 75 ನಗರಗಳನ್ನು ಆಯ್ಕೆ ಮಾಡಿ, ಅವುಗಳ ಸ್ವಚ್ಛತೆ ಕಾಪಾಡಲು ಮತ್ತು ಸೌಂದರ್ಯ ವೃದ್ಧಿಗಾಗಿ ಪ್ರತಿ ನಗರಕ್ಕೂ ಒಂದು ಕೋಟಿ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರದ್ದಾದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲು!; ರಾಜ್ಯ ಮತ್ತು ಕೇಂದ್ರಾಡಳಿತಕ್ಕೆ ಸುಪ್ರೀಂ ನೋಟಿಸ್‌‌

ಶಾಲಾ ಸೌಲಭ್ಯ ಯೋಜನೆಯಡಿ 750 ಶಾಲೆಗಳಿಗೆ 75 ಕೋಟಿ ರೂಪಾಯಿ ಮೀಸಲಿಡಲಾಗುವುದು. ಈ ಪೈಕಿ ಪ್ರತಿ ಶಾಲೆಗಳಿಗೂ 10 ರೂಗಳನ್ನು ಒದಗಿಸಿ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಮೃತ ಅಂಗನವಾಡಿ ಕೇಂದ್ರಗಳ ನಿರ್ಮಾಣ ಯೋಜನೆಯಡಿ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 1 ಲಕ್ಷ ರೂಪಾಯೊ ಒದಗಿಸಲಾಗುತ್ತದೆ. ಬೆಂಗಳೂರಿನ 75 ಕೊಳೆಗೇರಿಗಳ ಸುಧಾರಣೆ ಮತ್ತು 75 ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಡಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯಗಳ್ನು ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ ವೆಚ್ಚ ಮಾಡಲಾಗುವುದು.

ಅಮೃತ ಕೌಶಲ ತರಬೇತಿ ಯೋಜನೆಗೆ 112 ಕೋಟಿ ನೀಡಲಾಗಿವುದು. ಈ ಯೋಜನೆಯ ಅಡಿಯಲ್ಲಿ 75,000 ಯುವಕ ಯುವತಿಯರಿಗೆ  ಕೌಶಲ್ಯ ತರಬೇತಿ ನೀಡಲಾಗುವುದು. ಅಮೃತ ಕ್ರೀಡಾ ಪ್ರೋತ್ಸಾಹ ಯೋಜನೆ ಅಡಿಯಲ್ಲಿ 76 ಕ್ರೀಡಾಪಟುಗಳನ್ನು ದತ್ತು ಪಡೆದುಕೊಂಡು ತರಬೇತಿ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ 75 ನವೋದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...