Homeಮುಖಪುಟಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಿಸದ ಗೋವಾ; ಕಾರಣ ಇಲ್ಲಿದೆ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಿಸದ ಗೋವಾ; ಕಾರಣ ಇಲ್ಲಿದೆ

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಭಾನುವಾರ ದೇಶದಲ್ಲಿ ಸರಳವಾಗಿ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಆಗಸ್ಟ್ 15 ರಂದು ಆಚರಿಸಲಾಗುವ ಈ ದಿನದಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ನೆನಪಿಸಿಕೊಳ್ಳಲಾಗುತ್ತದೆ.

ದೇಶದಾದ್ಯಂತ ತ್ರಿವರ್ಣ ಧ್ವಜ ಹಾರಿಸಿ, ಮೆರವಣಿಗೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆದಸಲಾಗುತ್ತದೆ. ಆದರೆ, ಗೋವಾದಲ್ಲಿ ಮಾತ್ರ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದಿಲ್ಲ.

ಭಾರತ 1947ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದರೂ ಕೂಡ ಗೋವಾ ಪೋರ್ಚುಗೀಸ್ ವಸಾಹತಿನ ಅಡಿಯಲ್ಲಿತ್ತು. ಪೋರ್ಚುಗೀಸರು ಗೋವಾದ ಸುಂದರವಾದ ಭೂಮಿ ಮತ್ತು ರಮಣೀಯ ಸೌಂದರ್ಯಕ್ಕಾಗಿ 450 ವರ್ಷಗಳಿಗೂ ಹೆಚ್ಚು ಕಾಲ ಆ ರಾಜ್ಯವನ್ನು ಆಳಿದ್ದಾರೆ. ಭಾರತವನ್ನು ಆಳದ ವಿದೇಶಿಗರಲ್ಲಿ ಪೋರ್ಚುಗೀಸರು ಮೊದಲ ವಸಾಹತುದಾರರು ಮತ್ತು ಕೊನೆಯದಾಗಿ ದೇಶವನ್ನು ತೊರೆದರು ಕೂಡ ಪೋರ್ಚುಗೀಸರು.

ಇದನ್ನೂ ಓದಿ: 75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

1510ರಲ್ಲಿ ಪೋರ್ಚುಗೀಸರು ಗೋವಾವನ್ನು ಆಕ್ರಮಿಸಿದ್ದರು. ನಾಲ್ಕು ಶತಮಾನಗಳಿಗೂ ಹೆಚ್ಚು ಕಾಲ, ಗೋವಾದಲ್ಲಿ ಜನರು ಡಯಾಬಾಲಿಕ್ ಚಿತ್ರಹಿಂಸೆಗೆ ಒಳಗಾಗಿದ್ದರು. ಕೊಂಕಣಿ ಭಾಷೆಯನ್ನು ನಿಗ್ರಹಿಸುವುದು, ಹಿಂದೂಗಳು ಮತ್ತು ಗೋವಾ ಕ್ಯಾಥೊಲಿಕ್‌ಗಳ ಮೇಲೆ ಕಿರುಕುಳ ನೀಡುವುದರಿಂದ ಹಿಡಿದು ಹಿಂದೂ ದೇವಾಲಯಗಳ ನಾಶ ಮತ್ತು ಹಿಂದೂ ವಿವಾಹದ ಆಚರಣೆಗಳ ಮೇಲಿನ ನಿಷೇಧಗಳು ಗೋವಾದಲ್ಲಿದ್ದವು.

ಪೋರ್ಚುಗೀಸರ ಆಳ್ವಿಕೆಯ ಅಂತ್ಯ 18 ಜೂನ್, 1946 ರಂದು ಆರಂಭವಾಯಿತು. ಭಾರತದ ಉಳಿದ ಭಾಗಗಳು ಸ್ವಾತಂತ್ರ್ಯದತ್ತ ಸಾಗುತ್ತಿದ್ದಾಗ, ರಾಜಕೀಯ ನಾಯಕ ರಾಮ್ ಮನೋಹರ್ ಲೋಹಿಯಾ ಅವರು ಬರಹಗಾರ ಡಾ. ಜೂಲಿಯೊ ಮೆನೆಜೆಸ್ ಅವರೊಂದಿಗೆ ಗೋವಾಕ್ಕೆ ಭೇಟಿ ನೀಡಿದ್ದರು. ಗೋವಾ ಜನರ ಕಷ್ಟ ತಿಳಿದ ನಂತರ, ಲೋಹಿಯಾ ರಾಜ್ಯದಲ್ಲಿ ನಾಗರಿಕ ಅಸಹಕಾರ ಚಳುವಳಿಯನ್ನು ಆರಂಭಿಸಿದರು.

ಪ್ರಭಾಕರ ವಿಠ್ಠಲ್ ಸಿನಾರಿ ಮತ್ತು ಅವರ ಆಪ್ತರು ಕ್ರಾಂತಿಕಾರಿ ಸಂಘಟನೆಯನ್ನು ಆಜಾದ್ ಗೋಮಂತಕ್ ದಳ(Azad Gomantak Dal) ರಚಿಸಿ, ಪೋರ್ಚುಗೀಸರ ವಿರುದ್ಧ ಹೋರಾಡಲು ಸಜ್ಜಾಯಿತು. ಇದರೊಂದಿಗೆ ಅನೇಕ ಸಂಘಟನೆಗಳು ಸೇರಿ ಯುನೈಟೆಡ್ ಫ್ರಂಟ್ ಆಫ್ ಲಿಬರೇಶನ್ ಎಂಬ ದೊಡ್ಡ ಒಕ್ಕೂಟವನ್ನು ರಚಿಸಿದರು.

ಗೋವಾ ವಿಮೋಚನೆಗಾಗಿ 1946 ರಲ್ಲಿ ಆರಂಭವಾದ ಸುದೀರ್ಘ ಹೋರಾಟದ ಫಲವಾಗಿ ಗೋವಾ ಪೋರ್ಚುಗೀಸರ ಆಳ್ವಿಕೆಯಿಂದ ಡಿಸೆಂಬರ್ 19, 1961 ರಂದು ಬಿಡುಗಡೆಯಾಯಿತು. ಹೀಗಾಗಿ ಪ್ರತಿ ವರ್ಷ ಡಿಸೆಂಬರ್‌ 19ರಂದು ಗೋವಾ ವಿಮೋಚನೆ ದಿನವನ್ನು ಆಚರಿಸಲಾಗುತ್ತದೆ.


ಇದನ್ನೂ ಓದಿ: ದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...