Homeಅಂತರಾಷ್ಟ್ರೀಯಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

ಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

- Advertisement -
- Advertisement -

ತಾಲಿಬಾನ್ ಭಯೋತ್ಪಾದಕರು ಇಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ಗೆ ಪ್ರವೇಶಿಸಿದ್ದಾರೆ. ಹಾಗಾಗಿ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಯಾವುದೇ ಹಿಂಸಾಚಾರಕ್ಕೆ ಆಸ್ಪದ ಕೊಡದಂತೆ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ಹಂಗಾಮಿ ಆಂತರಿಕ ವ್ಯವಹಾರಗಳ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಲಿಬಾನ್‌ ಬಂಡುಕೋರರು “ಎಲ್ಲಾ ಕಡೆಗಳಿಂದಲೂ” ರಾಜಧಾನಿಯನ್ನು ಪ್ರವೇಶಿಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಹೋರಾಟಗಳು ವರದಿಯಾಗಿಲ್ಲ ಎಂದು ಆಂತರಿಕ ಸಚಿವಾಯಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಬೂಲ್‌ನ ಶಾಂತಿಯುತ ಶರಣಾಗತಿಗಾಗಿ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

20 ವರ್ಷಗಳ ಹಿಂದೆ ಅಮೆರಿಕಾವು ಕಾಬೂನ್‌ನಿಂದ ತಾಲಿಬಾನ್‌ಗಳನ್ನು ಹೊರಗಟ್ಟಿತ್ತು. ಅದಾದ ನಂತರ ಕಳೆದ ತಿಂಗಳು ಅಮೆರಿಕಾ ವಾಪಸ್ ಹೊರಟಿದೆ. ಈಗ ಸೆಪ್ಟೆಂಬರ್‌ 11ರ ದಾಳಿಯೊಂದಿಗೆ ತಾಲಿಬಾನ್‌ಗಳು ಕಾಬೂನ್‌ಗೆ ಪ್ರವೇಶಿಸಿದ್ದಾರೆ. ಅವರು ಶಾಂತಿಯುತ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಒಪ್ಪಿಕೊಳ್ಳುವವರೆಗೂ ಕಾಬೂನ್‌ನ ಎಲ್ಲಾ ಪ್ರವೇಶದ್ವಾರಗಳಲ್ಲಿಯೂ ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗಿದೆ.

ಅಫ್ಘಾನ್‌ ಪರಿಸ್ಥಿತಿಯ ಬಗ್ಗೆ ಸದ್ಯ ಅಧ್ಯಕ್ಷ ಅಶ್ರಫ್ ಘನಿ ಅವರಿಂದ ಯಾವುದೇ ತಕ್ಷಣದ ಮಾಹಿತಿ ದೊರಕಿಲ್ಲ. ಅವರು ಶನಿವಾರ ಸ್ಥಳೀಯ ನಾಯಕರು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ತುರ್ತು ಸಮಾಲೋಚನೆ ನಡೆಸಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಮತ್ತು ತಾಲಿಬಾನ್ ಕಮಾಂಡರ್ ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಡಲಿದ್ದಾರೆ ಎಂದು ವರದಿಗಳು ಹೇಳಿವೆ.

“ನಗರದ ಮೇಲೆ ದಾಳಿ ನಡೆಯುವುದಿಲ್ಲ, ಶಾಂತಿಯುತ ಹಸ್ತಾಂತರವನ್ನು ಒಪ್ಪಿಕೊಳ್ಳಲಾಗಿದೆ.” ಪರಿವರ್ತನೆಯ ಆಡಳಿತಕ್ಕೆ ಅಧಿಕಾರವನ್ನು ಹಸ್ತಾಂತರಿಸಲಾಗುವುದು ಎಂದು ಸರ್ಕಾರದ ಹಂಗಾಮಿ ಆಂತರಿಕ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ಹೇಳಿದ್ದಾರೆ.

ಕಾಬೂಲ್ ಸುತ್ತಮುತ್ತಲಿನ ಹಲವಾರು ಸ್ಥಳಗಳಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಆದರೆ ಭದ್ರತಾ ಪಡೆಗಳು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗಿನ ಸಮನ್ವಯದಿಂದ ನಗರದ ಮೇಲೆ ನಿಯಂತ್ರಣ ಹೊಂದಿದೆ ಎಂದು ಅಫ್ಘಾನ್‌ ಅಧ್ಯಕ್ಷೀಯ ಕಚೇರಿ ಟ್ವೀಟ್‌ ಮಾಡಿದೆ.

ಕಾಬೂಲ್‌ನ ಅನೇಕ ಬೀದಿಗಳು ಕಾರುಗಳಿಂದ ತುಂಬಿಹೋಗಿವೆ. ಜನರು ತಮ್ಮ ಸ್ವಂತ ಸ್ಥಳಗಳಿಗೆ ಧಾವಿಸುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಕೆಲವು ಜನರು ತಮ್ಮ ಕೀಗಳನ್ನು ಕಾರಿನಲ್ಲಿ ಬಿಟ್ಟು ವಿಮಾನ ನಿಲ್ದಾಣಕ್ಕೆ ನುಗ್ಗಲು ಆರಂಭಿಸಿದ್ದಾರೆ” ಎಂದು ನಿವಾಸಿಯೊಬ್ಬರು ರಾಯಿಟರ್ಸ್‌ಗೆ ಫೋನ್ ಮೂಲಕ ತಿಳಿಸಿದ್ದಾರೆ.

ಸರ್ಕಾರದ ಕೈಯಲ್ಲಿರುವ ಕಾಬೂಲ್‌ ಏರ್‌ಪೋರ್ಟ್‌ಅನ್ನು ಹೊರತು ಪಡಿಸಿದರೆ, ಜನರು ಅಫ್ಘಾನಿಸ್ಥಾನದಿಂದ ಹೊರ ಹೋಗಲು ಇರುವುದು ಒಂದೇ ದಾರಿ, ಅದು ಪಾಕಿಸ್ತಾನಕ್ಕೆ ಅಂಟಿಕೊಂಡಿರುವ ಟೋರ್ಖಾಮ್ ಗಡಿ ಪೋಸ್ಟ್. ಆದರೆ, ಅದನ್ನೂ ಸಹ ತಾಲಿಬಾನ್‌ ವಶಪಡಿಸಿಕೊಂಡಿದೆ.

ಉಳಿದಂತೆ, “ಜಲಾಲಾಬಾದ್‌ನಲ್ಲಿ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಏಕೆಂದರೆ, ಅಲ್ಲಿನ ರಾಜ್ಯಪಾಲರು ತಾಲಿಬಾನ್‌ಗೆ ಶರಣಾಗಿದ್ದಾರೆ.” ಎಂದು ಜಲಾಲಾಬಾದ್ ಮೂಲದ ಅಫ್ಘಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. “ಜನರ ಜೀವಗಳನ್ನು ಉಳಿಸಲು ತಾಲಿಬಾನ್‌ಗಳಿಗೆ ಅಧಿಕಾರ ನೀಡುವುದೊಂದೇ ಏಕೈಕ ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಯುಎಸ್ ನೇತೃತ್ವದ ಪಡೆಗಳು ಅಫ್ಘಾನ್‌ನಲ್ಲಿದ್ದ ತಮ್ಮ ಉಳಿದ ಸೈನ್ಯದ ಬಹುಭಾಗವನ್ನು ಹಿಂತೆಗೆದುಕೊಂಡವು. ನಂತರ ಅಫ್ಘಾನ್ ಮಿಲಿಟರಿಯ ರಕ್ಷಣೆ ವ್ಯವಸ್ಥೆ ಕುಸಿಯಲಾರಂಭಿಸಿದಂತೆ ಕಾಣತೊಡಗಿತು. ಈ ವೇಳೆಗೆ ತಾಲಿಬಾನ್ ಕಾರ್ಯಾಚರಣೆ ಚುರುಕುಗೊಂಡಿತು.

ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಶನಿವಾರ ಅಫ್ಘಾನ್‌ನ ನಾಗರಿಕರನ್ನು ಸ್ಥಳಾಂತರಿಸಲು ಮತ್ತು ಸೇನಾ ಸಿಬ್ಬಂದಿಗಳ “ಕ್ರಮಬದ್ಧ ಮತ್ತು ಸುರಕ್ಷಿತ” ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು 5,000 ಯುಎಸ್ ಸೈನಿಕರನ್ನು ನಿಯೋಜಿಸಲು ಸೇನೆಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ, 1,000 ಸೈನಿಕರನ್ನು ನಿಯೋಜಿಸಲಾಗಿದೆ. ಅವರು ಅಫ್ಘಾನ್‌ ಏರ್‌ಪೋರ್ಟ್‌ನಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಯುಎಸ್ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತಾಲಿಬಾನ್ ಅಫಘಾನ್ ಜನರಿಂದ ಜನಪ್ರಿಯವಾಗಿ ಅಂಗೀಕರಿಸಲ್ಪಟ್ಟಿದೆ. ಅಫ್ಘಾನಿಸ್ತಾನಿಗಳು ಮತ್ತು ವಿದೇಶಿಯರಿಗೆ ಸುರಕ್ಷತೆಯ ಭರವಸೆ ನೀಡಿದೆ. ಅವರ ಜೀವನ, ಆಸ್ತಿ ಮತ್ತು ಗೌರವವನ್ನು ರಕ್ಷಿಸಲಾಗುತ್ತದೆ. ತನ್ನ ಪ್ರೀತಿಯ ರಾಷ್ಟ್ರದಲ್ಲಿ ಶಾಂತಿಯುತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗುತ್ತದೆ. ರಾಜತಾಂತ್ರಿಕರು ಮತ್ತು ಸಹಾಯ ಕಾರ್ಯಕರ್ತರು ಕೂಡ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ” ಎಂದು ತಾಲಿಬಾನ್‌ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರೊಳಗೆ ಅಫ್ಘಾನಿಸ್ತಾನದಲ್ಲಿ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ಅಮೆರಿಕಾದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯೋಜಿಸಿದ್ದರು. ಅದೇ ನಿರ್ಧಾರಕ್ಕೆ ಈಗಿನ ಅಧ್ಯಕ್ಷ ಬೈಡನ್‌ ಕೂಡ ಅಂಟಿಕೊಂಡಿದ್ದಾರೆ. ತಾಲಿಬಾನ್‌ಗಳು ಊಹಿಸಿದ್ದಕ್ಕಿಂತ ವೇಗವಾಗಿ ನಗರವನ್ನು ವಶಪಡಿಸಿಕೊಂಡಿದ್ದಾರೆ. ತನ್ನದೇ ಪ್ರದೇಶವನ್ನು ಹಿಡಿದಿಟ್ಟುಕೊಳ್ಳುವ ಅಥವಾ ರಕ್ಷಿಸಿಕೊಳ್ಳುವುದು ಅಫ್ಘಾನ್ ಸೇನೆಗೆ ಬಿಟ್ಟದ್ದು ಎಂದು ಅಮೆರಿಕಾ ಹೇಳಿದೆ.


ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...