Homeಚಳವಳಿಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

- Advertisement -
- Advertisement -

ಝಾನ್ಸಿ ಕಿ ರಾಣಿ ಪ್ರಸಿದ್ಧ ಕವಿತೆಯ ರಚನೆಕಾರರಾದ ಕವಯತ್ರಿ, ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಕುಮಾರಿ ಚೌಹಾಣ್ ಅವರ 117 ನೇ ಜನ್ಮ ದಿನಾಚರಣೆಯಂದು ಗೂಗಲ್ ಡೂಡಲ್ ಸೋಮವಾರ ವಿಶೇಷ ಗೌರವ ಸಲ್ಲಿಸಿದೆ.

ಸುಭದ್ರಾ ಕುಮಾರಿ ಚೌಹಾಣ್‌ ಪೆನ್ನು ಮತ್ತು ಪೇಪರ್‌ನೊಂದಿಗೆ ಕವಿತೆ ಬರೆಯಲು ಕುಳಿತಿರುವುದನ್ನು ಗೂಗಲ್ ಡೂಡಲ್ ತೋರಿಸುತ್ತದೆ. ಪ್ರಸಿದ್ಧ ಕವಿತೆ ಝಾನ್ಸಿ ಕಿ ರಾಣಿಯ ಸನ್ನಿವೇಶವನ್ನು ತೋರಿಸುವ ಸಲುವಾಗಿ ಒಂದು ಬದಿಯಲ್ಲಿ ರಾಣಿ ಲಕ್ಷ್ಮಿ ಬಾಯಿ ಕುದುರೆ ಸವಾರಿ ಮಾಡುತ್ತಿರುವುದನ್ನು ಚಿತ್ರಿಸಲಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮೆರವಣಿಗೆ ಹೊರಟಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತೊಂದು ಬದಿಯಲ್ಲಿ ತೋರಿಸಲಾಗಿದೆ.

ಸುಭದ್ರಾ ಕುಮಾರಿ ಹಿಂದಿ ಕಾವ್ಯದಲ್ಲಿ ಹಲವಾರು ಕೃತಿಗಳನ್ನು ಬರೆದಿದ್ದಾರೆ, ಝಾನ್ಸಿ ಕಿ ರಾಣಿ ಅವರ ಅತ್ಯಂತ ಪ್ರಸಿದ್ಧ ಕವಿತೆ. ರಾಣಿ ಲಕ್ಷ್ಮಿ ಬಾಯಿ ಅವರ ಜೀವನವನ್ನು ವಿವರಿಸುವ ಈ ಕವಿತೆಯು ಹಿಂದಿ ಸಾಹಿತ್ಯದಲ್ಲಿ ಹೆಚ್ಚು ಓದಿಸಿಕೊಂಡಿರುವ ಮತ್ತು ಹಾಡಿರುವ ಕವಿತೆಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಗೂಗಲ್ ಡೂಡಲ್ ಪ್ರಕಟಿಸಿರುವ ಚಿತ್ರವನ್ನು ನ್ಯೂಜಿಲೆಂಡ್ ಮೂಲದ ಅತಿಥಿ ಕಲಾವಿದೆ ಪ್ರಭಾ ಮಲ್ಯ ರಚಿಸಿದ್ದಾರೆ.

ಸುಭದ್ರಾ ಕುಮಾರಿ ಚೌಹಾಣ್ ಅವರ ಕವಿತೆ ಮತ್ತು ಗದ್ಯವು ಪ್ರಾಥಮಿಕವಾಗಿ ಲಿಂಗ ತಾರತಮ್ಯ ಮತ್ತು ಜಾತಿ ತಾರತಮ್ಯದಂತಹ ಭಾರತೀಯ ಮಹಿಳೆಯರು ಎದುರಿಸಿದ ಕಷ್ಟಗಳನ್ನು ಕೇಂದ್ರೀಕರಿಸಿವೆ.

Subhadra Kumari Chauhan Special | कविता और कहानियों से कहीं ज्यादा है Subhadra  Kumari Chauhan का योगदान
PC: thequint

ಸುಭದ್ರಾ ಕುಮಾರಿ ಆಗಸ್ಟ್ 16, 1904 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನ ನಿಹಾಲ್ಪುರ್ ಹಳ್ಳಿಯ ರಾಜಪುರ ಕುಟುಂಬದಲ್ಲಿ ಜನಿಸಿದರು. ಆಕೆ ಆರಂಭದಲ್ಲಿ ಪ್ರಯಾಗರಾಜ್‌ನ ಕ್ರೋಸ್ಟ್‌ವೈಟ್ ಬಾಲಕಿಯರ ಶಾಲೆಯಲ್ಲಿ ಅಧ್ಯಯನ ನಡೆಸಿದರು. 1919 ರಲ್ಲಿ ತಮ್ಮ 16 ನೇ ವಯಸ್ಸಿನಲ್ಲಿ ಖಾಂಡ್ವಾದ ಠಾಕೂರ್ ಲಕ್ಷ್ಮಣ್ ಸಿಂಗ್ ಚೌಹಾಣ್ ಅವರನ್ನು ವಿವಾಹವಾದರು.

ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಮತ್ತು ಅವರ ಪತಿ 1921 ರಲ್ಲಿ ಮಹಾತ್ಮಾ ಗಾಂಧಿಯವರ ಅಸಹಕಾರ ಚಳುವಳಿಗೆ ಸೇರಿದರು. ನಾಗ್ಪುರದಲ್ಲಿ ಬಂಧನಕ್ಕೊಳಗಾದ ಮೊದಲ ಮಹಿಳಾ ಸತ್ಯಾಗ್ರಹಿಯಾದರು.

1940 ರ ದಶಕದವರೆಗೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಕ್ರಾಂತಿಕಾರಿ ಕವಿತೆಗಳು, ಹೇಳಿಕೆಗಳನ್ನು ಬರೆಯುವುದನ್ನು ಮುಂದುವರೆಸಿದರು. 1923 ಮತ್ತು 1942 ರಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಎರಡು ಬಾರಿ ಜೈಲುವಾಸ ಅನುಭವಿಸಿದರು.  ಒಟ್ಟು 88 ಕವಿತೆಗಳು ಮತ್ತು 46 ಸಣ್ಣ ಕಥೆಗಳನ್ನು ಪ್ರಕಟಿಸಿದ್ದರು. ಫೆಬ್ರವರಿ 15, 1948ರಲ್ಲಿ ಕಾರು ಅಪಘಾತದಲ್ಲಿ ನಿಧನರಾದರು.


ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...