Homeಕರ್ನಾಟಕ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌....

‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು  ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ

- Advertisement -
- Advertisement -

ವಾರ್ತಾ ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರಮುಖ ಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ಜಾಹೀರಾತು ನೀಡದೆ ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ರಮೇಶ್‌ ಬಾಬು ಅವರು ಬರೆದಿರುವ ಪತ್ರದಲ್ಲಿ, “ವಾರ್ತಾ ಇಲಾಖೆಯು ನಿಯಮಾನುಸಾರ 9 ಕನ್ನಡ ದಿನಪತ್ರಿಕೆಗಳನ್ನು ರಾಜ್ಯ ಮಟ್ಟದ ದಿನಪತ್ರಿಕೆಗಳೆಂದು ಅಧಿಕೃತವಾಗಿ ಪಟ್ಟಿ ಮಾಡಿರುತ್ತದೆ. ಈ ಪತ್ರಿಕೆಗಳಿಗೆ ದರಪಟ್ಟಿಗೆ ಅನುಗುಣವಾಗಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತುಗಳನ್ನು ಯಾವುದೇ ರಾಜಕೀಯ ಒತ್ತಡ ಅಥವಾ ಅಪೇಕ್ಷಿತ ಲಾಭ ಇಲ್ಲದೆ ಬಿಡುಗಡೆ ಮಾಡಬೇಕು. ಜಾಹೀರಾತು ಹಂಚಿಕೆಯಲ್ಲಿ ವಾರ್ತಾ ಇಲಾಖೆ ಪಕ್ಷಪಾತ ಎಸಗಿದರೆ, ಸರ್ಕಾರ ಇದನ್ನು ಸರಿಪಡಿಸುವ ಹೊಣೆಗಾರಿಕೆ ಹೊರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

“ಪಕ್ಷ ರಾಜಕಾರಣಕ್ಕೆ ಅನುಕೂಲ ಆಗುವ ರೀತಿಯಲ್ಲಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ. ವಾರ್ತಾ ಇಲಾಖೆಯ ಅಧಿಕಾರಿಗಳು ಪಕ್ಷ ರಾಜಕಾರಣದಿಂದ ಹೊರತಾಗಿ ಸರ್ಕಾರಿ ಕರ್ತವ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರಿ ಅಧಿಕಾರಿ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ರಾಜಕೀಯ ಪ್ರೇರಿತವಾಗಿ ವರ್ತಿಸಿದರೆ, ಅಂತವರ ವಿರುದ್ಧ ನಾಗರೀಕ ಸೇವಾನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ನೆನಪಿಸಿದ್ದಾರೆ.

“ಸೋಮವಾರ ರಾಜ್ಯ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕನ್ನಡ ದಿನಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಜಾಹೀರಾತನ್ನು ಕನ್ನಡದ ಪ್ರಮುಖ ದಿನಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ನೀಡಿಲ್ಲ. ಇದರ ಹಿಂದೆ ವಾರ್ತಾ ಇಲಾಖೆಯ ಅಧಿಕಾರಿಗಳ ದುರುದ್ದೇಶವಿದ್ದು, ಒಂದು ಪತ್ರಿಕೆಯನ್ನು ಜಾಹೀರಾತಿನಿಂದ ಹೊರತುಪಡೆಸುವ ಕ್ರಮ ಕಾನೂನುಬಾಹಿರವಾಗಿದೆ, ಈ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಒಂದು ಪತ್ರಿಕೆಗೆ ಜಾಹೀರಾತು ತಡೆಯುವ ಮೂಲಕ ವಾರ್ತಾ ಇಲಾಖೆಯ ಅಧಿಕಾರಿಗಳು ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ವಾರ್ತಾಭಾರತಿಗೆ ಜಾಹಿರಾತು ನೀಡದೆ ಇರುವುದು ಇದೇ ಮೊದಲಲ್ಲ!

ಕರ್ನಾಟಕದ ವಾರ್ತಾ ಇಲಾಖೆಯ ಪಟ್ಟಿಯ ಪ್ರಕಾರ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ವಿಜಯವಾಣಿ, ವಿಶ್ವವಾಣಿ, ಉದಯವಾಣಿ, ಹೊಸ ದಿಗಂತ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ವಾರ್ತಾಭಾರತಿ ಪತ್ರಿಕೆಗಳು ರಾಜ್ಯ ಮಟ್ಟದ ಪತ್ರಿಕೆಗಳು ಎಂದು ಗುರುತಿಸಲ್ಪಟ್ಟಿವೆ. ಇದರ ಅರ್ಥ ರಾಜ್ಯ ಸರಕಾರ ಬಿಡುಗಡೆ ಮಾಡುವ ಎಲ್ಲ ಪ್ರಮುಖ ಜಾಹೀರಾತುಗಳನ್ನು ಪಡೆಯಲು ಈ ಪತ್ರಿಕೆಗಳು ಅರ್ಹವಾಗಿದೆ. ಆದರೆ ಸೋಮವಾರ (16 ಆಗಸ್ಟ್ 2021)ದಂದು ವಾರ್ತಾ ಇಲಾಖೆಯು ವಾರ್ತಾಭಾರತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

ವಾರ್ತಾ ಇಲಾಖೆಯು ವಾರ್ತಾಭಾರತಿ ಪತ್ರಿಕೆಯೊಂದಿಗೆ ಈ ಹಿಂದೆ ಕೂಡಾ ಇದೇ ರೀತಿಯಲ್ಲಿ ನಡೆದುಕೊಂಡಿತ್ತು. ಜುಲೈ 26 ರಂದು ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ತಿಯಾದಾಗ ರಾಜ್ಯ ಮಟ್ಟದ ಎಲ್ಲಾ ಪತ್ರಿಕೆಗೆ ಜಾಹೀರಾತು ನೀಡಲಾಗಿತ್ತು. ಆದರೆ ವಾರ್ತಾಭಾರತಿ ದಿನಪತ್ರಿಕೆಗೆ ಮಾತ್ರ ಜಾಹೀರಾತು ನೀಡಿರಲಿಲ್ಲ.

ವಾರ್ತಾ ಇಲಾಖೆ ಯಾಕೆ ಹೀಗೆ ನಡೆದುಕೊಳ್ಳುತ್ತಿದೆ?

ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಡಾ. ಪಿ.ಎಸ್‌. ಹರ್ಷ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದಾರೆ. ಸಿಎಎ ಹೋರಾಟದ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಅವರ ಕೈವಾಡವಿದೆ ಎಂಬ ಆರೋಪ ಸಾರ್ವಜನಿಕವಾಗಿ ಕೇಳಿ ಬಂದಿತ್ತು. ಇದರ ನಂತರ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು.

ಅವರು ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿದ ನಂತರ ವಾರ್ತಾಭಾರತಿಗೆ ಸರ್ಕಾರಿ ಜಾಹೀರಾತುಗಳು ನೀಡುವುದು ಕಡಿಮೆಗೊಳ್ಳುತ್ತಲೆ ಬಂದಿದೆ ಎನ್ನಲಾಗಿದೆ. ಆದರೆ ಇದೀಗ ವಾರ್ತಾ ಇಲಾಖೆಯು ಶೂನ್ಯ ಜಾಹೀರಾತು ವಾರ್ತಾಭಾರತಿಗೆ ನೀಡಿ ಪತ್ರಿಕಾ ಸ್ವಾತಂತ್ಯ್ರ ಹರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಕರಾವಳಿ ಮೂಲದ ವಾರ್ತಾಭಾರತಿ ಪತ್ರಿಕೆಯು ಮಂಗಳೂರು ಗೋಲಿಬಾರ್‌ ವಿವಾದದ ಬಗ್ಗೆ ದಿಟ್ಟವಾಗಿ ವರದಿ ಮಾಡಿತ್ತು. ಈ ದ್ವೇಷವನ್ನು ಪ್ರಸ್ತುತ ವಾರ್ತಾ ಇಲಾಖೆಯ ಆಯುಕ್ತರಾಗಿರುವ ಹರ್ಷ ಅವರು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಾರ್ತಾಭಾರತಿಗೆ ಜಾಹೀರಾತು ನೀಡದಂತೆ ಅವರ ಪ್ರಭಾವ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಡಾ.ಪಿಎಸ್‌ ಹರ್ಷ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕು ಪ್ರತಿಕ್ರಿಯೆ ನೀಡಿದ ಕೂಡಲೆ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್ ಅವರಿಗೂ ನಾನುಗೌರಿ.ಕಾಂ ಕರೆ ಮಾಡಿದ್ದು, ಅವರು ಕೂಡಾ ಕರೆಯನ್ನು ಸ್ವೀಕರಿಸಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೆ ಅವರ ಪ್ರತಿಕ್ರಿಯೆಯನ್ನು ಇಲ್ಲಿ ನೀಡಲಾಗುವುದು.

ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...