Homeಕರ್ನಾಟಕ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌....

‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು  ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ

- Advertisement -
- Advertisement -

ವಾರ್ತಾ ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರಮುಖ ಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ಜಾಹೀರಾತು ನೀಡದೆ ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ರಮೇಶ್‌ ಬಾಬು ಅವರು ಬರೆದಿರುವ ಪತ್ರದಲ್ಲಿ, “ವಾರ್ತಾ ಇಲಾಖೆಯು ನಿಯಮಾನುಸಾರ 9 ಕನ್ನಡ ದಿನಪತ್ರಿಕೆಗಳನ್ನು ರಾಜ್ಯ ಮಟ್ಟದ ದಿನಪತ್ರಿಕೆಗಳೆಂದು ಅಧಿಕೃತವಾಗಿ ಪಟ್ಟಿ ಮಾಡಿರುತ್ತದೆ. ಈ ಪತ್ರಿಕೆಗಳಿಗೆ ದರಪಟ್ಟಿಗೆ ಅನುಗುಣವಾಗಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತುಗಳನ್ನು ಯಾವುದೇ ರಾಜಕೀಯ ಒತ್ತಡ ಅಥವಾ ಅಪೇಕ್ಷಿತ ಲಾಭ ಇಲ್ಲದೆ ಬಿಡುಗಡೆ ಮಾಡಬೇಕು. ಜಾಹೀರಾತು ಹಂಚಿಕೆಯಲ್ಲಿ ವಾರ್ತಾ ಇಲಾಖೆ ಪಕ್ಷಪಾತ ಎಸಗಿದರೆ, ಸರ್ಕಾರ ಇದನ್ನು ಸರಿಪಡಿಸುವ ಹೊಣೆಗಾರಿಕೆ ಹೊರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

“ಪಕ್ಷ ರಾಜಕಾರಣಕ್ಕೆ ಅನುಕೂಲ ಆಗುವ ರೀತಿಯಲ್ಲಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ. ವಾರ್ತಾ ಇಲಾಖೆಯ ಅಧಿಕಾರಿಗಳು ಪಕ್ಷ ರಾಜಕಾರಣದಿಂದ ಹೊರತಾಗಿ ಸರ್ಕಾರಿ ಕರ್ತವ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರಿ ಅಧಿಕಾರಿ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ರಾಜಕೀಯ ಪ್ರೇರಿತವಾಗಿ ವರ್ತಿಸಿದರೆ, ಅಂತವರ ವಿರುದ್ಧ ನಾಗರೀಕ ಸೇವಾನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ನೆನಪಿಸಿದ್ದಾರೆ.

“ಸೋಮವಾರ ರಾಜ್ಯ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕನ್ನಡ ದಿನಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಜಾಹೀರಾತನ್ನು ಕನ್ನಡದ ಪ್ರಮುಖ ದಿನಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ನೀಡಿಲ್ಲ. ಇದರ ಹಿಂದೆ ವಾರ್ತಾ ಇಲಾಖೆಯ ಅಧಿಕಾರಿಗಳ ದುರುದ್ದೇಶವಿದ್ದು, ಒಂದು ಪತ್ರಿಕೆಯನ್ನು ಜಾಹೀರಾತಿನಿಂದ ಹೊರತುಪಡೆಸುವ ಕ್ರಮ ಕಾನೂನುಬಾಹಿರವಾಗಿದೆ, ಈ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಒಂದು ಪತ್ರಿಕೆಗೆ ಜಾಹೀರಾತು ತಡೆಯುವ ಮೂಲಕ ವಾರ್ತಾ ಇಲಾಖೆಯ ಅಧಿಕಾರಿಗಳು ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ವಾರ್ತಾಭಾರತಿಗೆ ಜಾಹಿರಾತು ನೀಡದೆ ಇರುವುದು ಇದೇ ಮೊದಲಲ್ಲ!

ಕರ್ನಾಟಕದ ವಾರ್ತಾ ಇಲಾಖೆಯ ಪಟ್ಟಿಯ ಪ್ರಕಾರ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ವಿಜಯವಾಣಿ, ವಿಶ್ವವಾಣಿ, ಉದಯವಾಣಿ, ಹೊಸ ದಿಗಂತ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ವಾರ್ತಾಭಾರತಿ ಪತ್ರಿಕೆಗಳು ರಾಜ್ಯ ಮಟ್ಟದ ಪತ್ರಿಕೆಗಳು ಎಂದು ಗುರುತಿಸಲ್ಪಟ್ಟಿವೆ. ಇದರ ಅರ್ಥ ರಾಜ್ಯ ಸರಕಾರ ಬಿಡುಗಡೆ ಮಾಡುವ ಎಲ್ಲ ಪ್ರಮುಖ ಜಾಹೀರಾತುಗಳನ್ನು ಪಡೆಯಲು ಈ ಪತ್ರಿಕೆಗಳು ಅರ್ಹವಾಗಿದೆ. ಆದರೆ ಸೋಮವಾರ (16 ಆಗಸ್ಟ್ 2021)ದಂದು ವಾರ್ತಾ ಇಲಾಖೆಯು ವಾರ್ತಾಭಾರತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

ವಾರ್ತಾ ಇಲಾಖೆಯು ವಾರ್ತಾಭಾರತಿ ಪತ್ರಿಕೆಯೊಂದಿಗೆ ಈ ಹಿಂದೆ ಕೂಡಾ ಇದೇ ರೀತಿಯಲ್ಲಿ ನಡೆದುಕೊಂಡಿತ್ತು. ಜುಲೈ 26 ರಂದು ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ತಿಯಾದಾಗ ರಾಜ್ಯ ಮಟ್ಟದ ಎಲ್ಲಾ ಪತ್ರಿಕೆಗೆ ಜಾಹೀರಾತು ನೀಡಲಾಗಿತ್ತು. ಆದರೆ ವಾರ್ತಾಭಾರತಿ ದಿನಪತ್ರಿಕೆಗೆ ಮಾತ್ರ ಜಾಹೀರಾತು ನೀಡಿರಲಿಲ್ಲ.

ವಾರ್ತಾ ಇಲಾಖೆ ಯಾಕೆ ಹೀಗೆ ನಡೆದುಕೊಳ್ಳುತ್ತಿದೆ?

ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಡಾ. ಪಿ.ಎಸ್‌. ಹರ್ಷ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದಾರೆ. ಸಿಎಎ ಹೋರಾಟದ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಅವರ ಕೈವಾಡವಿದೆ ಎಂಬ ಆರೋಪ ಸಾರ್ವಜನಿಕವಾಗಿ ಕೇಳಿ ಬಂದಿತ್ತು. ಇದರ ನಂತರ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು.

ಅವರು ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿದ ನಂತರ ವಾರ್ತಾಭಾರತಿಗೆ ಸರ್ಕಾರಿ ಜಾಹೀರಾತುಗಳು ನೀಡುವುದು ಕಡಿಮೆಗೊಳ್ಳುತ್ತಲೆ ಬಂದಿದೆ ಎನ್ನಲಾಗಿದೆ. ಆದರೆ ಇದೀಗ ವಾರ್ತಾ ಇಲಾಖೆಯು ಶೂನ್ಯ ಜಾಹೀರಾತು ವಾರ್ತಾಭಾರತಿಗೆ ನೀಡಿ ಪತ್ರಿಕಾ ಸ್ವಾತಂತ್ಯ್ರ ಹರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಕರಾವಳಿ ಮೂಲದ ವಾರ್ತಾಭಾರತಿ ಪತ್ರಿಕೆಯು ಮಂಗಳೂರು ಗೋಲಿಬಾರ್‌ ವಿವಾದದ ಬಗ್ಗೆ ದಿಟ್ಟವಾಗಿ ವರದಿ ಮಾಡಿತ್ತು. ಈ ದ್ವೇಷವನ್ನು ಪ್ರಸ್ತುತ ವಾರ್ತಾ ಇಲಾಖೆಯ ಆಯುಕ್ತರಾಗಿರುವ ಹರ್ಷ ಅವರು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಾರ್ತಾಭಾರತಿಗೆ ಜಾಹೀರಾತು ನೀಡದಂತೆ ಅವರ ಪ್ರಭಾವ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಡಾ.ಪಿಎಸ್‌ ಹರ್ಷ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕು ಪ್ರತಿಕ್ರಿಯೆ ನೀಡಿದ ಕೂಡಲೆ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್ ಅವರಿಗೂ ನಾನುಗೌರಿ.ಕಾಂ ಕರೆ ಮಾಡಿದ್ದು, ಅವರು ಕೂಡಾ ಕರೆಯನ್ನು ಸ್ವೀಕರಿಸಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೆ ಅವರ ಪ್ರತಿಕ್ರಿಯೆಯನ್ನು ಇಲ್ಲಿ ನೀಡಲಾಗುವುದು.

ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...