Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...