Homeಮುಖಪುಟರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

ರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

- Advertisement -
- Advertisement -

ನ್ಯಾಯಾಧೀಶರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಕೊಳ್ಳುವಂತೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೋರ್ಟ್‌ ಮಂಗಳವಾರ ಕೇಳಿದ್ದು, ಈ ವಿಷಯವನ್ನು ಕೇವಲ ರಾಜ್ಯಗಳಿಗೆ ಬಿಡಬಾರದು ಎಂದು ಹೇಳಿದೆ. ಕಳೆದ ತಿಂಗಳು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶರ ಕೊಲೆ ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು.

ಸುಪ್ರೀಂಕೋರ್ಟ್‌‌ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನ್ಯಾಯಾಧೀಶರ ಭದ್ರತಾ ಕ್ರಮಗಳ ಸ್ಥಿತಿಗತಿಯ ಕುರಿತು ವರದಿ ಸಲ್ಲಿಸದ ರಾಜ್ಯಗಳಿಗೆ ಎಚ್ಚರಿಕೆಯನ್ನೂ ಅದು ನೀಡಿದೆ.

ಇದನ್ನೂ ಓದಿ: ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

“ತೆಗೆದುಕೊಳ್ಳುತ್ತಿರುವ ಕ್ರಮಗಳು ಎಲ್ಲವೂ ಚೆನ್ನಾಗಿದೆ ಎಂಬಂತಹ ಚಿತ್ರಣಗಳನ್ನು ರಾಜ್ಯಗಳು ನೀಡುತ್ತಿವೆ . ಆದರೆ, ಅದರ ಹೊರತಾಗಿಯೂ, ನ್ಯಾಯಾಂಗದ ಅಧಿಕಾರಿಗಳ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿವೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

“ರಾಜ್ಯಗಳು ಸಿಸಿಟಿವಿ ನಿಧಿಯ ಕೊರತೆಯನ್ನು ಉಲ್ಲೇಖಿಸುತ್ತಿವೆ. ಆದರೆ ಸಿಸಿಟಿವಿಗಳು ಅಪರಾಧದ ದಾಖಲೆ ಮಾತ್ರ ಮಾಡುತ್ತದೆ. ಅಪರಾಧಿಗಳು ಆಕ್ರಮಣ ಮಾಡುವುದನ್ನು ತಡೆಯುವುದಾಗಲಿ, ಬೆದರಿಕೆಗಳನ್ನು ತಡೆಯುವುದಕ್ಕಾಗಲಿ ಅವುಗಳಿಗೆ ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ನ್ಯಾಯಾಲಯವು ರಾಜ್ಯಗಳಿಗೆ ಒಂದು ವಾರದ ಕಾಲಾವಕಾಶವನ್ನು ನೀಡಿದ್ದು, ಒಂದು ವಾರದಲ್ಲಿ ಪರಿಸ್ಥಿತಿಯ ಕುರಿತು ವರದಿಯನ್ನು ಸಲ್ಲಿಸದಿದ್ದಲ್ಲಿ 1 ಲಕ್ಷ ರೂ. ದಂಡದ ಎಚ್ಚರಿಕೆಯನ್ನು ನೀಡಿದೆ. ಒಂದು ವಾರದಲ್ಲಿ ರಾಜ್ಯಗಳು ತಮ್ಮ ವರದಿಗಳನ್ನು ಸಲ್ಲಿಸದಿದ್ದರೆ ಮುಖ್ಯ ಕಾರ್ಯದರ್ಶಿಗಳು ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ಜುಲೈ 28 ರಂದು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ (49) ಅವರು ಬೆಳಗಿನ ಜಾವ ಜಾಗಿಂಗ್‌ ಮಾಡುತ್ತಿದ್ದಾಗ ಆಟೋ ಡಿಕ್ಕಿ ಹೊಡೆದು ಕೊಲ್ಲಲ್ಪಟ್ಟರು.

ಪ್ರಕರಣವು ಮೊದಲಿಗೆ ಹಿಟ್ ಅಂಡ್ ರನ್ ಎಂದು ಹೇಳಲಾಗಿತ್ತು, ಆದರೆ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ವೈರಲ್ ಆದ ನಂತರ ಪ್ರಕರಣವು ಇನ್ನೊಂದು ಮಗ್ಗುಲಿಗೆ ಹೊರಳಿತು.

ಉತ್ತಮ್ ಆನಂದ್‌ ಅವರು ಧನ್ಬಾದ್‌ನ ಅನೇಕ ಮಾಫಿಯಾ ಹತ್ಯಾ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದ್ದರು, ಅದರಲ್ಲಿ ಅವರು ಇಬ್ಬರು ದರೋಡೆಕೋರರ ಜಾಮೀನು ಕೋರಿಕೆಯನ್ನು ತಿರಸ್ಕರಿಸಿದ್ದರು. ಜೊತೆಗೆ ಶಾಸಕರ ಆಪ್ತರೊಬ್ಬರನ್ನು ಒಳಗೊಂಡ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದರು.

ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...