Homeಅಂತರಾಷ್ಟ್ರೀಯಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ - ತಾಲಿಬಾನ್‌

ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

- Advertisement -
- Advertisement -

ವಿದೇಶಿ ರಾಯಭಾರ ಕಚೇರಿಗಳ ಭದ್ರತೆಯು ತಾಲಿಬಾನ್‌ಗೆ ಮುಖ್ಯವಾಗಿದ್ದು, ಅವರು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತಾರೆ ಎಂದು ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್ ಹೇಳಿದ್ದಾರೆ. ತಾಲಿಬಾನ್‌‌ ಅಫಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಎರಡು ದಿನಗಳ ನಂತರ ಮಂಗಳವಾರದಂದು ಕಾಬೂಲ್‌ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ ಎಂದು ಟೊಲೊನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ ಎಂದು ಮುಜಾಹಿದ್ ಹೇಳಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಮುಂಜಾನೆ, ತಾಲಿಬಾನ್ ಸರ್ಕಾರಿ ಅಧಿಕಾರಿಗಳಿಗೆ ‘ಸಾಮಾನ್ಯ ಕ್ಷಮಾದಾನ’ ಘೋಷಿಸಿದ್ದು, ಅವರನ್ನು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪಲಾಯನ ಮಾಡಿದ ನಂತರ, ಬಂಡುಕೋರರು 20 ವರ್ಷಗಳ ಯುದ್ಧವನ್ನು ಗೆದ್ದಿದ್ದಾರೆ ಎಂದು ಘೋಷಿಸಿದ್ದಾರೆ. ಪ್ರಸ್ತುತ ದೇಶವು ತಾಲಿಬಾನ್‌ ನಿಯಂತ್ರಣದಲ್ಲಿದೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ಭಾರತವು ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ ಎಂಬ ಹೊಸ ವರ್ಗದ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಿದ್ದು, ಇದು ದೇಶಕ್ಕೆ ಪ್ರವೇಶಿಸುವ ವೀಸಾ ಅರ್ಜಿಗಳನ್ನು ತ್ವರಿತಗತಿಯಲ್ಲಿ ಪರಿಣಿಸಲಿದೆ.

ಅಫ್ಘಾನಿಸ್ತಾನದಲ್ಲಿ ಅಮೆರಿಕವು ಅಶಾಂತಿ, ವಿಭಜನೆ ಮತ್ತು ಒಡೆದ ಕುಟುಂಬಗಳ ಭೀಕರ ಅವ್ಯವಸ್ಥೆಯನ್ನು ಬಿಟ್ಟಿದೆ ಎಂದು ಚೀನಾ ಹೇಳಿದೆ.

ಭಾನುವಾರವಷ್ಟೇ, ತಾಲಿಬಾನ್ ಕಮಾಂಡರ್‌ಗಳು ತಾವು ಅಫ್ಘಾನ್ ಅಧ್ಯಕ್ಷರ ಅರಮನೆಯ ನಿಯಂತ್ರಣವನ್ನು ಪಡೆದುಕೊಂಡಿದ್ದೇವೆ ಎಂದು ಘೋಷಿಸಿದ್ದರು. ಮೇ 1 ರಂದು ಬಹುಪಾಲು ಅಮೆರಿಕಾ ಸೈನ್ಯವನ್ನು ಹಿಂತೆಗೆದುಕೊಂಡ ನಂತರ, ತಾಲಿಬಾನ್ ಅಫ್ಘಾನ್‌ ಅನ್ನು ಶೀಘ್ರವಾಗಿ ಆವರಿಸಿ, ರಾಜಧಾನಿಯನ್ನು ವಶಪಡಿಸಿಕೊಂಡಿತು.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...