Homeಅಂತರಾಷ್ಟ್ರೀಯಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

’ಕಾಬೂಲ್‌ನಲ್ಲಿ ಕಳೆದ 1, 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರು ಕಾಣಿಸುತ್ತಿರಲಿಲ್ಲ’

- Advertisement -
- Advertisement -

ತಾಲಿಬಾನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅಲ್ಲಿನ ನಾಗರಿಕರು ಪಾಕಿಸ್ತಾನಕ್ಕಿಂತ ಭಾರತದ ಬಗ್ಗೆ ಹೆಚ್ಚು ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದಾರೆ ಎಂದು ಕಾಬೂಲ್‌ನಿಂದ ದೇಶಕ್ಕೆ ಹಿಂದಿರುಗಿರುವ ಪತ್ರಕರ್ತೆ ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಿಶೇಷ ವಿಮಾನದಲ್ಲಿ ಕಾಬೂಲ್‌ನಿಂದ ಹಿಂದಿರುಗಿದ ಪತ್ರಕರ್ತೆಯಾದ ಕನಿಕಾ ಗುಪ್ತಾ, ಅಘ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ NDTV ಜೊತೆ ಮಾತನಾಡಿದ್ದಾರೆ. ಕನಿಕಾ ಗುಪ್ತಾ, ಭಾರತೀಯ ರಾಯಭಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆ ತಂದ ವಿಮಾನದಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ.

“ತಾಲಿಬಾನಿಗಳು ನನ್ನನ್ನು ಮತ್ತು ನನ್ನ ಇನ್ನೊಬ್ಬ ಸಹೋದ್ಯೋಗಿಯನ್ನು ಹುಡುಕುತ್ತಿದ್ದಾಗ ನಾನು ಅಲ್ಲಿಂದ ಹೊರಡಲು ನಿರ್ಧರಿಸಿದೆ. ತಾಲಿಬಾನಿಗಳು ನಗರವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ, ನಾನು ಭಾರತದ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ಹೇಗಾದರೂ ರಾಯಭಾರಿ ಕಚೇರಿ ತಲುಪಬೇಕಿದ್ದ ನಮ್ಮನ್ನು ತಾಲಿಬಾನಿಗಳು ಚೆಕ್‌ಪಾಯಿಂಟ್‌ನಲ್ಲಿ ತಡೆದು ನಿಲ್ಲಿಸಿದ್ದರು. ನಾನು ಮಹಿಳೆಯಾಗಿದ್ದರಿಂದ ಅವರು ನನ್ನೊಂದಿಗೆ ಮಾತನಾಡುವುದನ್ನು ತಪ್ಪಿಸುತ್ತಿದ್ದರು. ನನ್ನ ಡ್ರೈವರ್‌ನೊಂದಿಗೆ ಮಾತನಾಡುತ್ತಿದ್ದರು. ನಾವು ವಾಪಸ್ ಹೋಗಬೇಕೆಂದು ಅವರು ಒತ್ತಾಯಿಸುತ್ತಿದ್ದರು, ಸುಮಾರು 2 ಗಂಟೆಗಳ ನಂತರ ಅವರು ನಮ್ಮನ್ನು ರಾಯಭಾರ ಕಚೇರಿಗೆ ಕರೆದೊಯ್ದರು” ಎಂದು ಕನಿಕಾ ಗುಪ್ತಾ ಹೇಳಿದ್ದಾರೆ.

“ನಾವು ನಿನ್ನೆ ರಾತ್ರಿ 10 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದೆವು. ಆದರೆ, ವಿಮಾನ ನಿಲ್ದಾಣದ ಗೇಟ್‌ಗಳ ಹೊರಗೆ ಸಾವಿರಾರು ಜನರು ಒಳಗೆ ಹೋಗಲು ಪ್ರಯತ್ನಿಸುತ್ತಿದ್ದರು. ಅವರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಪ್ರಯತ್ನಿಸಿದರು”  ಎಂದಿದ್ದಾರೆ.

“ನಾವು ವಿಮಾನ ನಿಲ್ದಾಣದ ಹೊರಗೆ ಐದು ಗಂಟೆಗಳ ಕಾಲ ಕಾದಿದ್ದೇವೆ. ಅಂತಿಮವಾಗಿ, ನಾವು ಯುಎಸ್ ಮತ್ತು ಟರ್ಕಿಶ್ ಪಡೆಗಳಿಂದ ನಿಯೋಜಿಸಲ್ಪಟ್ಟ ಇನ್ನೊಂದು ಗೇಟ್‌ ಬಳಸಿ ಒಳಗೆ ಹೋಗಬೇಕಾಯಿತು. ಬೆಳಿಗ್ಗೆ 6 ಗಂಟೆಗೆ ನಾವು ಭಾರತಕ್ಕೆ ಹೊರಟೆವು. 11 ಕ್ಕೆ ಇಲ್ಲಿಗೆ ಬಂದೆವು. ಏರ್ ಫೋರ್ಸ್ ನಮ್ಮನ್ನು ಬಹಳ ಕಾಳಜಿ ವಹಿಸಿ ಕರೆ ತಂದಿತು. ಅವರಿಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಪತ್ರಕರ್ತೆ ಹೇಳಿದ್ದಾರೆ.

“ಕಾಬೂಲ್ ವಿಮಾನ ನಿಲ್ದಾಣದಲ್ಲಿ, ನಾನು ಚಪ್ಪಲಿ, ಮಕ್ಕಳ ಪಾದರಕ್ಷೆಗಳು, ಮಹಿಳೆಯರ ದುಪಟ್ಟಾಗಳನ್ನು ನೋಡಿದೆ. ಅದು ಹಿಂದಿನ ರಾತ್ರಿ ನಡೆದ ಭಯಾನಕತೆಗೆ ಸಾಕ್ಷಿಯಾಗಿದೆ. ಅಲ್ಲಿನ ಮಹಿಳೆಯರಲ್ಲಿ ಅತಿ ಹೆಚ್ಚು ಭಯವಿದೆ. ಅವರು ತಮ್ಮನ್ನು ತಾವು ಬಟ್ಟೆಯಿಂದ ಸರಿಯಾಗಿ ಮುಚ್ಚಿಕೊಳ್ಳದಿದ್ದರೆ ಆಸಿಡ್ ದಾಳಿಯಂತಹ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ತಾಲಿಬಾನಿಗಳು ಇಂದು ಯಾವುದೇ ತಾರತಮ್ಯ ಇಲ್ಲ ಎಂದು ಮಾತಾಡುವಾಗ ಅದರ ಬಗ್ಗೆ ವಿಶ್ವಾಸ ಮೂಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

“ನಾನು ಕಾಬೂಲ್‌ನಲ್ಲಿ ಕಳೆದ 1 ಅಥವಾ 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರಿರಲಿಲ್ಲ. ಕಾಬೂಲ್ ಕ್ರಿಯಾತ್ಮಕ, ಬುದ್ಧಿವಂತ ಮತ್ತು ಫ್ಯಾಶನ್ ಮಹಿಳೆಯರನ್ನು ಹೊಂದಿದೆ” ಎಂದು ಕನಿಕಾ ಹೇಳಿದ್ದಾರೆ.

“ಅವರೆಲ್ಲರೂ ಭಾರತವನ್ನು ಪ್ರೀತಿಸುತ್ತಾರೆ. ನೀವು ಅಲ್ಲಿ 10 ಜನರೊಂದಿಗೆ ಮಾತನಾಡಿ, ಅದರಲ್ಲಿ ಭಾರತದ ಮೇಲೆ ಪ್ರೀತಿ ಮತ್ತು ಪಾಕಿಸ್ತಾನದ ಬಗ್ಗೆ ದ್ವೇಷವಿರುವುದು ನಿಮಗೆ ತಿಳಿಯುತ್ತದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರು ಭಾರತದಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಪತ್ರಕರ್ತೆ ಕನಿಕಾ ಗುಪ್ತಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತ, ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್, ’ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...