Homeಅಂತರಾಷ್ಟ್ರೀಯಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

’ಕಾಬೂಲ್‌ನಲ್ಲಿ ಕಳೆದ 1, 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರು ಕಾಣಿಸುತ್ತಿರಲಿಲ್ಲ’

- Advertisement -
- Advertisement -

ತಾಲಿಬಾನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅಲ್ಲಿನ ನಾಗರಿಕರು ಪಾಕಿಸ್ತಾನಕ್ಕಿಂತ ಭಾರತದ ಬಗ್ಗೆ ಹೆಚ್ಚು ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದಾರೆ ಎಂದು ಕಾಬೂಲ್‌ನಿಂದ ದೇಶಕ್ಕೆ ಹಿಂದಿರುಗಿರುವ ಪತ್ರಕರ್ತೆ ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಿಶೇಷ ವಿಮಾನದಲ್ಲಿ ಕಾಬೂಲ್‌ನಿಂದ ಹಿಂದಿರುಗಿದ ಪತ್ರಕರ್ತೆಯಾದ ಕನಿಕಾ ಗುಪ್ತಾ, ಅಘ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ NDTV ಜೊತೆ ಮಾತನಾಡಿದ್ದಾರೆ. ಕನಿಕಾ ಗುಪ್ತಾ, ಭಾರತೀಯ ರಾಯಭಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆ ತಂದ ವಿಮಾನದಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ.

“ತಾಲಿಬಾನಿಗಳು ನನ್ನನ್ನು ಮತ್ತು ನನ್ನ ಇನ್ನೊಬ್ಬ ಸಹೋದ್ಯೋಗಿಯನ್ನು ಹುಡುಕುತ್ತಿದ್ದಾಗ ನಾನು ಅಲ್ಲಿಂದ ಹೊರಡಲು ನಿರ್ಧರಿಸಿದೆ. ತಾಲಿಬಾನಿಗಳು ನಗರವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ, ನಾನು ಭಾರತದ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ಹೇಗಾದರೂ ರಾಯಭಾರಿ ಕಚೇರಿ ತಲುಪಬೇಕಿದ್ದ ನಮ್ಮನ್ನು ತಾಲಿಬಾನಿಗಳು ಚೆಕ್‌ಪಾಯಿಂಟ್‌ನಲ್ಲಿ ತಡೆದು ನಿಲ್ಲಿಸಿದ್ದರು. ನಾನು ಮಹಿಳೆಯಾಗಿದ್ದರಿಂದ ಅವರು ನನ್ನೊಂದಿಗೆ ಮಾತನಾಡುವುದನ್ನು ತಪ್ಪಿಸುತ್ತಿದ್ದರು. ನನ್ನ ಡ್ರೈವರ್‌ನೊಂದಿಗೆ ಮಾತನಾಡುತ್ತಿದ್ದರು. ನಾವು ವಾಪಸ್ ಹೋಗಬೇಕೆಂದು ಅವರು ಒತ್ತಾಯಿಸುತ್ತಿದ್ದರು, ಸುಮಾರು 2 ಗಂಟೆಗಳ ನಂತರ ಅವರು ನಮ್ಮನ್ನು ರಾಯಭಾರ ಕಚೇರಿಗೆ ಕರೆದೊಯ್ದರು” ಎಂದು ಕನಿಕಾ ಗುಪ್ತಾ ಹೇಳಿದ್ದಾರೆ.

“ನಾವು ನಿನ್ನೆ ರಾತ್ರಿ 10 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದೆವು. ಆದರೆ, ವಿಮಾನ ನಿಲ್ದಾಣದ ಗೇಟ್‌ಗಳ ಹೊರಗೆ ಸಾವಿರಾರು ಜನರು ಒಳಗೆ ಹೋಗಲು ಪ್ರಯತ್ನಿಸುತ್ತಿದ್ದರು. ಅವರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಪ್ರಯತ್ನಿಸಿದರು”  ಎಂದಿದ್ದಾರೆ.

“ನಾವು ವಿಮಾನ ನಿಲ್ದಾಣದ ಹೊರಗೆ ಐದು ಗಂಟೆಗಳ ಕಾಲ ಕಾದಿದ್ದೇವೆ. ಅಂತಿಮವಾಗಿ, ನಾವು ಯುಎಸ್ ಮತ್ತು ಟರ್ಕಿಶ್ ಪಡೆಗಳಿಂದ ನಿಯೋಜಿಸಲ್ಪಟ್ಟ ಇನ್ನೊಂದು ಗೇಟ್‌ ಬಳಸಿ ಒಳಗೆ ಹೋಗಬೇಕಾಯಿತು. ಬೆಳಿಗ್ಗೆ 6 ಗಂಟೆಗೆ ನಾವು ಭಾರತಕ್ಕೆ ಹೊರಟೆವು. 11 ಕ್ಕೆ ಇಲ್ಲಿಗೆ ಬಂದೆವು. ಏರ್ ಫೋರ್ಸ್ ನಮ್ಮನ್ನು ಬಹಳ ಕಾಳಜಿ ವಹಿಸಿ ಕರೆ ತಂದಿತು. ಅವರಿಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಪತ್ರಕರ್ತೆ ಹೇಳಿದ್ದಾರೆ.

“ಕಾಬೂಲ್ ವಿಮಾನ ನಿಲ್ದಾಣದಲ್ಲಿ, ನಾನು ಚಪ್ಪಲಿ, ಮಕ್ಕಳ ಪಾದರಕ್ಷೆಗಳು, ಮಹಿಳೆಯರ ದುಪಟ್ಟಾಗಳನ್ನು ನೋಡಿದೆ. ಅದು ಹಿಂದಿನ ರಾತ್ರಿ ನಡೆದ ಭಯಾನಕತೆಗೆ ಸಾಕ್ಷಿಯಾಗಿದೆ. ಅಲ್ಲಿನ ಮಹಿಳೆಯರಲ್ಲಿ ಅತಿ ಹೆಚ್ಚು ಭಯವಿದೆ. ಅವರು ತಮ್ಮನ್ನು ತಾವು ಬಟ್ಟೆಯಿಂದ ಸರಿಯಾಗಿ ಮುಚ್ಚಿಕೊಳ್ಳದಿದ್ದರೆ ಆಸಿಡ್ ದಾಳಿಯಂತಹ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ತಾಲಿಬಾನಿಗಳು ಇಂದು ಯಾವುದೇ ತಾರತಮ್ಯ ಇಲ್ಲ ಎಂದು ಮಾತಾಡುವಾಗ ಅದರ ಬಗ್ಗೆ ವಿಶ್ವಾಸ ಮೂಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

“ನಾನು ಕಾಬೂಲ್‌ನಲ್ಲಿ ಕಳೆದ 1 ಅಥವಾ 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರಿರಲಿಲ್ಲ. ಕಾಬೂಲ್ ಕ್ರಿಯಾತ್ಮಕ, ಬುದ್ಧಿವಂತ ಮತ್ತು ಫ್ಯಾಶನ್ ಮಹಿಳೆಯರನ್ನು ಹೊಂದಿದೆ” ಎಂದು ಕನಿಕಾ ಹೇಳಿದ್ದಾರೆ.

“ಅವರೆಲ್ಲರೂ ಭಾರತವನ್ನು ಪ್ರೀತಿಸುತ್ತಾರೆ. ನೀವು ಅಲ್ಲಿ 10 ಜನರೊಂದಿಗೆ ಮಾತನಾಡಿ, ಅದರಲ್ಲಿ ಭಾರತದ ಮೇಲೆ ಪ್ರೀತಿ ಮತ್ತು ಪಾಕಿಸ್ತಾನದ ಬಗ್ಗೆ ದ್ವೇಷವಿರುವುದು ನಿಮಗೆ ತಿಳಿಯುತ್ತದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರು ಭಾರತದಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಪತ್ರಕರ್ತೆ ಕನಿಕಾ ಗುಪ್ತಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತ, ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್, ’ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...