Homeಅಂತರಾಷ್ಟ್ರೀಯಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

’ಕಾಬೂಲ್‌ನಲ್ಲಿ ಕಳೆದ 1, 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರು ಕಾಣಿಸುತ್ತಿರಲಿಲ್ಲ’

- Advertisement -
- Advertisement -

ತಾಲಿಬಾನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅಲ್ಲಿನ ನಾಗರಿಕರು ಪಾಕಿಸ್ತಾನಕ್ಕಿಂತ ಭಾರತದ ಬಗ್ಗೆ ಹೆಚ್ಚು ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದಾರೆ ಎಂದು ಕಾಬೂಲ್‌ನಿಂದ ದೇಶಕ್ಕೆ ಹಿಂದಿರುಗಿರುವ ಪತ್ರಕರ್ತೆ ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಿಶೇಷ ವಿಮಾನದಲ್ಲಿ ಕಾಬೂಲ್‌ನಿಂದ ಹಿಂದಿರುಗಿದ ಪತ್ರಕರ್ತೆಯಾದ ಕನಿಕಾ ಗುಪ್ತಾ, ಅಘ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ NDTV ಜೊತೆ ಮಾತನಾಡಿದ್ದಾರೆ. ಕನಿಕಾ ಗುಪ್ತಾ, ಭಾರತೀಯ ರಾಯಭಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆ ತಂದ ವಿಮಾನದಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ.

“ತಾಲಿಬಾನಿಗಳು ನನ್ನನ್ನು ಮತ್ತು ನನ್ನ ಇನ್ನೊಬ್ಬ ಸಹೋದ್ಯೋಗಿಯನ್ನು ಹುಡುಕುತ್ತಿದ್ದಾಗ ನಾನು ಅಲ್ಲಿಂದ ಹೊರಡಲು ನಿರ್ಧರಿಸಿದೆ. ತಾಲಿಬಾನಿಗಳು ನಗರವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ, ನಾನು ಭಾರತದ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ಹೇಗಾದರೂ ರಾಯಭಾರಿ ಕಚೇರಿ ತಲುಪಬೇಕಿದ್ದ ನಮ್ಮನ್ನು ತಾಲಿಬಾನಿಗಳು ಚೆಕ್‌ಪಾಯಿಂಟ್‌ನಲ್ಲಿ ತಡೆದು ನಿಲ್ಲಿಸಿದ್ದರು. ನಾನು ಮಹಿಳೆಯಾಗಿದ್ದರಿಂದ ಅವರು ನನ್ನೊಂದಿಗೆ ಮಾತನಾಡುವುದನ್ನು ತಪ್ಪಿಸುತ್ತಿದ್ದರು. ನನ್ನ ಡ್ರೈವರ್‌ನೊಂದಿಗೆ ಮಾತನಾಡುತ್ತಿದ್ದರು. ನಾವು ವಾಪಸ್ ಹೋಗಬೇಕೆಂದು ಅವರು ಒತ್ತಾಯಿಸುತ್ತಿದ್ದರು, ಸುಮಾರು 2 ಗಂಟೆಗಳ ನಂತರ ಅವರು ನಮ್ಮನ್ನು ರಾಯಭಾರ ಕಚೇರಿಗೆ ಕರೆದೊಯ್ದರು” ಎಂದು ಕನಿಕಾ ಗುಪ್ತಾ ಹೇಳಿದ್ದಾರೆ.

“ನಾವು ನಿನ್ನೆ ರಾತ್ರಿ 10 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದೆವು. ಆದರೆ, ವಿಮಾನ ನಿಲ್ದಾಣದ ಗೇಟ್‌ಗಳ ಹೊರಗೆ ಸಾವಿರಾರು ಜನರು ಒಳಗೆ ಹೋಗಲು ಪ್ರಯತ್ನಿಸುತ್ತಿದ್ದರು. ಅವರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಪ್ರಯತ್ನಿಸಿದರು”  ಎಂದಿದ್ದಾರೆ.

“ನಾವು ವಿಮಾನ ನಿಲ್ದಾಣದ ಹೊರಗೆ ಐದು ಗಂಟೆಗಳ ಕಾಲ ಕಾದಿದ್ದೇವೆ. ಅಂತಿಮವಾಗಿ, ನಾವು ಯುಎಸ್ ಮತ್ತು ಟರ್ಕಿಶ್ ಪಡೆಗಳಿಂದ ನಿಯೋಜಿಸಲ್ಪಟ್ಟ ಇನ್ನೊಂದು ಗೇಟ್‌ ಬಳಸಿ ಒಳಗೆ ಹೋಗಬೇಕಾಯಿತು. ಬೆಳಿಗ್ಗೆ 6 ಗಂಟೆಗೆ ನಾವು ಭಾರತಕ್ಕೆ ಹೊರಟೆವು. 11 ಕ್ಕೆ ಇಲ್ಲಿಗೆ ಬಂದೆವು. ಏರ್ ಫೋರ್ಸ್ ನಮ್ಮನ್ನು ಬಹಳ ಕಾಳಜಿ ವಹಿಸಿ ಕರೆ ತಂದಿತು. ಅವರಿಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಪತ್ರಕರ್ತೆ ಹೇಳಿದ್ದಾರೆ.

“ಕಾಬೂಲ್ ವಿಮಾನ ನಿಲ್ದಾಣದಲ್ಲಿ, ನಾನು ಚಪ್ಪಲಿ, ಮಕ್ಕಳ ಪಾದರಕ್ಷೆಗಳು, ಮಹಿಳೆಯರ ದುಪಟ್ಟಾಗಳನ್ನು ನೋಡಿದೆ. ಅದು ಹಿಂದಿನ ರಾತ್ರಿ ನಡೆದ ಭಯಾನಕತೆಗೆ ಸಾಕ್ಷಿಯಾಗಿದೆ. ಅಲ್ಲಿನ ಮಹಿಳೆಯರಲ್ಲಿ ಅತಿ ಹೆಚ್ಚು ಭಯವಿದೆ. ಅವರು ತಮ್ಮನ್ನು ತಾವು ಬಟ್ಟೆಯಿಂದ ಸರಿಯಾಗಿ ಮುಚ್ಚಿಕೊಳ್ಳದಿದ್ದರೆ ಆಸಿಡ್ ದಾಳಿಯಂತಹ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ತಾಲಿಬಾನಿಗಳು ಇಂದು ಯಾವುದೇ ತಾರತಮ್ಯ ಇಲ್ಲ ಎಂದು ಮಾತಾಡುವಾಗ ಅದರ ಬಗ್ಗೆ ವಿಶ್ವಾಸ ಮೂಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

“ನಾನು ಕಾಬೂಲ್‌ನಲ್ಲಿ ಕಳೆದ 1 ಅಥವಾ 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರಿರಲಿಲ್ಲ. ಕಾಬೂಲ್ ಕ್ರಿಯಾತ್ಮಕ, ಬುದ್ಧಿವಂತ ಮತ್ತು ಫ್ಯಾಶನ್ ಮಹಿಳೆಯರನ್ನು ಹೊಂದಿದೆ” ಎಂದು ಕನಿಕಾ ಹೇಳಿದ್ದಾರೆ.

“ಅವರೆಲ್ಲರೂ ಭಾರತವನ್ನು ಪ್ರೀತಿಸುತ್ತಾರೆ. ನೀವು ಅಲ್ಲಿ 10 ಜನರೊಂದಿಗೆ ಮಾತನಾಡಿ, ಅದರಲ್ಲಿ ಭಾರತದ ಮೇಲೆ ಪ್ರೀತಿ ಮತ್ತು ಪಾಕಿಸ್ತಾನದ ಬಗ್ಗೆ ದ್ವೇಷವಿರುವುದು ನಿಮಗೆ ತಿಳಿಯುತ್ತದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರು ಭಾರತದಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಪತ್ರಕರ್ತೆ ಕನಿಕಾ ಗುಪ್ತಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತ, ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್, ’ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...