Homeಕರ್ನಾಟಕಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

- Advertisement -
- Advertisement -

ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಿಮ್ಸ್‌ನಲ್ಲಿ ಅಕ್ರಮ ನೇಮಕಾತಿ, ಅವ್ಯವಹಾರ ಎಡೆಬಿಡದೆ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಡಾ. ಗಜಾನನ ನಾಯಕ್ ಡೀನ್ ಕಮ್ ಡೈರೆಕ್ಟರ್ ಆಗಿಬಂದ ನಂತರ ಕಿಮ್ಸ್‌ನಲ್ಲಿ ಆರ್ಥಿಕ ಅನುದಾನ ದುರ್ಬಳಕೆ ಮಿತಿ ಮೀರಿದೆಯೆಂದು ಅದೇ ಸಂಸ್ಥೆಯಲ್ಲಿ ಅಧೀಕ್ಷಕಿಯಾಗಿದ್ದ ವೀಣಾ ಪಾಟೀಲ್ ಜಿಲ್ಲಾಧಿಕಾರಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಬರೋಬ್ಬರಿ ಏಳು ಪುಟಗಳ ದೂರು ಕೊಟ್ಟಿದ್ದೂ ಆಗಿದೆ.

ಅಕ್ರಮ ನೇಮಕಾತಿ ಮನಸೋ ಇಚ್ಚೆ ಡೈರೆಕ್ಟರ್ ಸಾಹೇಬರು ಮಾಡಿಮುಗಿಸಿದ್ದಾರೆಂದು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ. ಸುಮಾರು 100 ತಾಂತ್ರಿಕ ಸಿಬ್ಬಂದಿ ಕಿಮ್ಸ್‌ಗೆ ಅತೀ ಜರೂರ್ ಇರುವಾಗ ಲಾಭದಾಯಕವಾದ ತಾತ್ಕಾಲಿಕ ಸ್ವಚ್ಚತಾಗಾರ, ಕಾವಲುಗಾರ ನೇಮಕಾತಿ ಮಾಡಿಕೊಳ್ಳಲಾಗಿದೆ. 80 ಸ್ವಚ್ಛತಾ ಕರ್ಮಚಾರಿಗಳು ಮತ್ತು 30 ಕಾವಲುಗಾರರು ಇದ್ದರೂ ಸಹ ಸುಮಾರು 90 ಅನಾವಶ್ಯಕ ನೇಮಕಾತಿ ನಡೆದಿದೆ. 2021ರ ಜನವರಿಯಲ್ಲಿ ನೇಮಕವಾಗಿರುವ ಈ ಅನರ್ಹರಿಗೆ 2019ರ ಅಕ್ಟೋಬರ್‌ನಿಂದ ಪೂರ್ವಾನ್ವಯವಾಗುವಂತೆ ಸಂಬಳ ನೀಡಲಾಗಿದೆ. ಈ ಮೂರು ತಿಂಗಳ ವೇತವೇ ಹತ್ತಿರತ್ತಿರ 75 ಲಕ್ಷ. ಇದು ಸರ್ಕಾರಿ ಬೊಕ್ಕಸಕ್ಕೆ ಹೊರೆಯೆಂದು ದೂರಲಾಗಿದೆ.

ಡೀನ್ ಡಾ. ಗಜಾನನ ನಾಯಕ್ ಮಾಡಿರುವ ಹಲವು ನೇಮಕಾತಿಗಳಿಗೆ ಹಣಕಾಸು ಇಲಾಖೆಯಿಂದಾಗಲಿ, ಇನ್ನಿತರ ಸಕ್ಷಮ ಪ್ರಾಧಿಕಾರದ್ದಾಗಲಿ ಅನುಮತಿ ಇಲ್ಲ. ತಾತ್ಕಾಲಿಕ ಮತ್ತು ಖಾಯಂ ಬೊಧಕ ಸಿಬ್ಬಂದಿ ನೇಮಕಾತಿ ಎಲ್ಲ ನೀತಿ-ನಿಯಮ ಉಲ್ಲಂಘಿಸಿ ನಡೆಸಲಾಗುತ್ತಿದೆ. ಸರ್ಕಾರದಿಂದ ಮಂಜೂರಾತಿಯಿಲ್ಲದ ಹುದ್ದೆಗಳನ್ನು ಹುಟ್ಟು ಹಾಕುವುದರಲ್ಲಿ ಈ ಡೈರೆಕ್ಟರ್ ನಿಸ್ಸೀಮನೆನ್ನುವ ಅಧೀಕ್ಷಕಿ ವೀಣಾ ಪಾಟೀಲ್ ತಾನು ಡೀನ್ ಹೇಳಿದಂತೆ ಕೇಳುವುದಿಲ್ಲವೆಂಬ ಕಾರಣಕ್ಕೆ ತನ್ನ ಕೈಲಿದ್ದ ಆರ್ಥಿಕ ವ್ಯವಹಾರ ಮತ್ತು ನಗದು ವಿಭಾಗ ಬೇರೆಯವರಿಗೆ ವಹಿಸಿದ್ದಾರೆ; ಅಷ್ಟೇ ಅಲ್ಲ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿಲ್ಲದ ’ಹಿರಿಯ ಕಚೇರಿ ಅಧೀಕ್ಷಕಿ’ ಎಂಬ ಬಿರುದು ದಯಪಾಲಿಸಿದ್ದಾರೆಂದು ಆರೋಪಿಸಿದ್ದಾರೆ.

ಡೀನ್ ಡಾ. ಗಜಾನನ ನಾಯಕ್

ಡೀನ್ ಡಾ. ನಾಯಕ್ ತಮ್ಮ ಪರಮಾಪ್ತ ಶಿಷ್ಯೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರನ್ನು ಮೀಸಲಾತಿ ಹಾಗು ನೇಮಕಾತಿ ನಿಯಮಗಳನ್ನೆಲ್ಲ ಧಿಕ್ಕರಿಸಿ ವಿಧಿ ವಿಜ್ಞಾನ ಶಾಸ್ತ್ರ [ಫಾರೆನ್ಸಿಕ್ ಸೈನ್ಸ್] ವಿಭಾಗದ ಸಹಾಯಕ ಅಧ್ಯಾಪಕಿಯಾಗಿ ನೇಮಿಸಿರುವುದು ದೊಡ್ಡ ವಿವಾದ ಹುಟ್ಟು ಹಾಕಿದೆ. ಫೊರೆನ್ಸಿಕ್ ವಿಭಾಗದಲ್ಲಿ ಹುದ್ದೆ ಖಾಲಿಯಿಲ್ಲದಿದ್ದರೂ, ಅವಶ್ಯಕತೆಯಿಲ್ಲದಿದ್ದರೂ ಈ ನೇಮಕಾತಿ ಮಾಡಿಕೊಳ್ಳಲಾಗಿದೆಯೆಂದು ಹೆಸರು ಹೇಳಿಕೊಳ್ಳದ ನೌಕರರು ಹೇಳುತ್ತಾರೆ. ಕೆಲವು ತಿಂಗಳ ಹಿಂದೆ ಆ ಅಧ್ಯಾಪಕಿಗೆ ಯಾವುದೇ ನಿಯಮ ಬದ್ದ ಪ್ರಕಿಯೆಯಿಲ್ಲದೆ ಖಾಯಂ ಮಾಡಿ ಲಕ್ಷಗಟ್ಟಲೆ ಸಂಬಳ ಬರುವಂತೆ ನೋಡಿಕೊಳ್ಳಲಾಗಿದೆ!

ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಖಾಯಂ ಅಧ್ಯಾಪಕರ ನೇಮಿಸುವಾಗ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುಮತಿ, ಅನುಮೋದನೆ ಮತ್ತು ಆದೇಶವಿರಲೇಬೇಕೆಂಬ ಕಟ್ಟುನಿಟ್ಟಿನ ನಿಯಮವಿದೆ. ಆದರೆ ಡಾ.ಮಹಾಲಕ್ಷ್ಮಿ ಕರ್ಲವಾಡ್‌ರ ನೇಮಕಾತಿಯಲ್ಲಿ ಈ ನಿಯಮಗಳ್ಯಾವುದನ್ನು ಪ್ರಜ್ಞಾಪೂರ್ವಕವಾಗೆ ಪಾಲಿಸಿಲ್ಲ ಎನ್ನಲಾಗಿದೆ. ತರಾತುರಿಯಲ್ಲಿ ಈ ನೇಮಕಾತಿ ನಡೆಸಲಾಗಿದ್ದು, ಡಾ.ನಾಯಕ್ ಕಿಮ್ಸ್ ನಿರ್ದೇಶಕರಾಗಿ ಬಂದ ಒಂದೇ ತಿಂಗಳಲ್ಲಿ ಅಂದರೆ 07-02-2020ರಂದು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಫೊರೆನ್ಸಿಕ್ ಸೈನ್ಸ್ ವಿಭಾಗದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಗೆ ಬ್ಯಾಕ್‌ಲಾಗ್‌ನಲ್ಲಿ ಒಂದು ಸಹಾಯಕ ಪ್ರಾಧ್ಯಾಪಕಿ ಹುದ್ದಗೆ ಅರ್ಜಿ ಕರೆಯಲಾಗಿದೆ. ವಾಸ್ತವಿಕವಾಗಿ ಕಿಮ್ಸ್‌ನಲ್ಲಿ ಇಂತದೊಂದು ಹುದ್ದೆ ಖಾಲಿಯಿರುವುದಿಲ್ಲ.

ಹಿಂದಿನ ನೇಮಕಾತಿ ಪ್ರಕಟಣೆಯಲ್ಲಿ ಸೂಚಿಸಿದ್ದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹುದ್ದೆಗಳು ಭರ್ತಿಯಾಗದಿದ್ದರಷ್ಟೇ ಅದನ್ನು ಮುಂದಿನ ಅಧಿಸೂಚನೆಯಲ್ಲಿ ಬ್ಯಾಕ್‌ಲಾಗ್ ಎಂದು ಪರಿಗಣಿಸಲಾಗುತ್ತದೆ. ಆದರೆ 8-8-2019 ಮತ್ತು 12-12-2019ರ ನೇಮಕಾತಿ ಪ್ರಕಟಣೆಯಲ್ಲಿ ಸದ್ರಿ ಹುದ್ದೆಯ ಪ್ರಸ್ತಾಪವೇ ಇಲ್ಲ. ಆದರೂ ಫೊರೆನ್ಸಿಕ್ ಸೈನ್ಸ್ -ಅಸಿಸ್ಟೆಂಟ್ ಪ್ರೊಫೆಸರ್ ಎಸ್‌ಟಿ ಲೇಡಿ ಬ್ಯಾಕ್ ಲಾಗ್ ಎಂದು ಸುಳ್ಳು ನಮೂದಿಸಲಾಗಿದೆ! ಕಿಮ್ಸ್‌ನಲ್ಲಿ ಒಟ್ಟೂ 49 ಸಹಾಯಕ ಅಧ್ಯಾಪಕ ಹುದ್ದೆಗಳಿವೆ. ಮೀಸಲಾತಿ ಅನುಪಾತದಂತೆ ಇದರಲ್ಲಿ ಎಸ್‌ಟಿ ವರ್ಗಕ್ಕೆ ಎರಡು ಹುದ್ದೆ ಮೀಸಲಿರಬೇಕು. ಡಾ.ಆಂಜನೇಯ ಎಸ್‌ಟಿ ಪುರುಷ ಮತ್ತು ಭಾಗ್ಯ ಶ್ರೀ ಬೋಯರ್ ಎಸ್‌ಟಿ ಮಹಿಳೆ ಕೋಟಾದಲ್ಲಿ ಆಯ್ಕೆಯಾಗಿದ್ದಾರೆ. ಹೀಗಾಗಿ ಸಧ್ಯ ಎಸ್‌ಟಿ ಪ್ರವರ್ಗದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅವಕಾಶವಿಲ್ಲ. ವಿಧಿವಿಜ್ಞಾನ ವಿಭಾಗಕ್ಕೆ ಮಂಜೂರಾಗಿರುವುದು ಒಂದೇ ಒಂದು ಸಹಾಯಕ ಪ್ರಾಧ್ಯಾಪಕ ಸ್ಥಾನ. ಇದೂ ಕೂಡ ಭರ್ತಿಯಾಗಿದೆ. ಆದ್ದರಿಂದ ಮತ್ತೊಂದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆ ನಡೆಸುವಂತಿಲ್ಲ.

ಇದೆಲ್ಲ ಮರೆಮಾಚಿ ನೇಮಕಾತಿಗೆ ರಹಸ್ಯ ಅಧಿಸೂಚನೆ ಹೊರಡಿಸಲಾಗಿದೆ. ಇದೊಂದು ರಾಜ್ಯ ಮಟ್ಟದ ಆಯ್ಕೆಯಾದ್ದರಿಂದ ರಾಜ್ಯ ಮಟ್ಟದ ಎರಡು ದಿನ ಪತ್ರಿಕೆ [ಒಂದು ಕನ್ನಡ ಮತ್ತೊಂದು ಇಂಗ್ಲಿಷ್] ಎಲ್ಲಾ ಆವೃತ್ತಿಯಲ್ಲಿ ಜಾಹೀರಾತು ನೀಡಬೇಕು. ಆದರೆ ಸ್ಥಳೀಯ ಪತ್ರಿಕೆಯಲ್ಲಷ್ಟೇ ಪ್ರಕಟಣೆ ಬರುವಂತೆ ನೋಡಿಕೊಳ್ಳಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದವರಿಗೆ ನೀಡಬೇಕಾದ 371 [ಜೆ]ದಂತೆ ಶೇ.8 ಮೀಸಲಾತಿಗೂ ಆಸ್ಪದ ಕೊಡದೆ ಸರ್ಕಾರಿ ಆದೇಶ ಧಿಕ್ಕರಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಆಕ್ಷೇಪಗಳಿಗೆ ಕನಿಷ್ಟ 15 ದಿನ ಕಾಲಾವಕಾಶ ಕೊಡಬೇಕು. ಅಂತಿಮ ಆಯ್ಕೆ ಪಟ್ಟಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆ ಪಡೆದು ನೇಮಕಾತಿ ಆದೇಶ ಕೊಡಬೇಕು. ಆದರೆ ಕಿಮ್ಸ್‌ನ ಫೊರೆನ್ಸಿಕ್ ಪ್ರಾಧ್ಯಾಪಕಿ ನೇಮಕಾತಿ ಪ್ರಹಸನದಲ್ಲಿ 17-02-2020ರಂದು ಸಂದರ್ಶನ ನಡೆಸಿದಂತೆ ದಾಖಲೆ ಸೃಷ್ಟಿಸಲಾಗಿದೆ. 20-07-2020ರಂದು ಡಾ.ಮಹಾಲಕ್ಷ್ಮಿ ಕರ್ಲವಾಡ್‌ಗೆ ನೇಮಕಾತಿ ಆದೇಶ ಸಿಕ್ಕಿಬಿಟ್ಟಿದೆ! ತಾತ್ಕಾಲಿಕ ಪಟ್ಟಿ ಪ್ರಕಟವಾದಂದೇ ನೇಮಕಾತಿಯೂ ನಡೆದುಹೋಗಿದೆ!! ಆಕ್ಷೇಪಣೆಗೆ ಯಾವ ಅವಕಾಶವು ಕೊಟ್ಟಿಲ್ಲ. ಈ ಆದೇಶಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅನುಮೋದನೆಯೂ ಇಲ್ಲ. ಹಾಗಾಗಿ ಈ ನೇಮಕಾತಿಗೆ ಯಾವುದೆ ಸಿಂಧುತ್ವವಿಲ್ಲ. ಇಡೀ ಖೋಟಾ ಪ್ರಕ್ರಿಯೆಯಲ್ಲಿ ಕಿಮ್ಸ್ ನಿರ್ದೇಶಕ ಡಾ.ನಾಯಕ್ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ರನ್ನು ಯಾಮಾರಿಸಿದರೋ? ಅಥವಾ ಅನಿಲ್‌ಕುಮಾರ್ ಗೊತ್ತಿದ್ದೂ ಸುಮ್ಮನಿದ್ದಾರೋ ಅರ್ಥವಾಗುವುದಿಲ್ಲವೆಂದು ಕಿಮ್ಸ್‌ನಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಮಂತ್ರಿ ಡಾ.ಸುಧಾಕರ್‌ಗೆ ಕಿಮ್ಸ್‌ನ ಅಕ್ರಮ ನೇಮಕಾತಿ ಬಗ್ಗೆ ತಿಳಿದಿದೆಯೇ? ಇನ್ನಾದರು ಸಂಬಂಧಿಸಿದವರು ಎಚ್ಚೆತ್ತು ಪರಿಶಿಷ್ಟ ಪಂಗಡ ಅರ್ಹರಿಗಾದ ಅನ್ಯಾಯ ಸರಿಪಡಿಸುವರಾ? ಅನುದಾನಗಳು ಪೋಲಾಗುತ್ತಿರುವುದು, ಆಗುತ್ತಿರುವ ಆಧ್ವಾನಗಳ ತನಿಖೆ ನಡೆಸುವರಾ? ಕಾದು ನೋಡಬೇಕು.


ಇದನ್ನೂ ಓದಿ: ಕಾರವಾರ: ಕಾಂಗ್ರೆಸ್ ಕಾರ್ಯಕರ್ತನಿಗೆ PSIನಿಂದ ಥಳಿತ ಆರೋಪ – ಠಾಣೆಗೆ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...