Homeಮುಖಪುಟಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

ಬಣ್ಣದ ಕಾರಣ ರವೀಂದ್ರನಾಥ ಟ್ಯಾಗೋರ್‌ ತಾರತಮ್ಯ ಎದುರಿಸಿದ್ದಾರೆ: ಕೇಂದ್ರ ಸಚಿವರ ವಿವಾದಿತ ಹೇಳಿಕೆ

- Advertisement -
- Advertisement -

ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವ ಸುಭಾಷ್ ಸರ್ಕಾರ್, ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್‌ ಅವರ ಮೈಬಣ್ಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟ್ಯಾಗೋರ್‌ರ ಮೈಬಣ್ಣದ ಕಾರಣದಿಂದ ಅವರ ತಾಯಿ ತಾರತಮ್ಯ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ರವೀಂದ್ರನಾಥ ಟ್ಯಾಗೋರ್‌ ಸ್ಥಾಪಿಸಿದ ವಿಶ್ವ ಭಾರತಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದ ಸಚಿವ ಸುಭಾಷ್ ಸರ್ಕಾರ್, ” ಟ್ಯಾಗೋರ್‌ ಅವರ ಮೈ ಬಣ್ಣ ಮನೆಯಲ್ಲಿದ್ದವರಿಗಿಂತ ಹೆಚ್ಚು ಕಪ್ಪಗಿದ್ದಿದ್ದರಿಂದ ಅವರ ತಾಯಿ  ತಾರತಮ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಟ್ಯಾಗೋರ್‌ ಅವರು ಕಪ್ಪು ಬಣ್ಣದವರಾಗಿದ್ದರು ಎಂದು  ಅವರ ತಾಯಿ ಮತ್ತು ಇತರ ಕೆಲವು ಸಂಬಂಧಿಕರು ಅವರನ್ನು ಎತ್ತಿ ಆಡಿಸಿಲ್ಲ” ಎಂದು ಸಚಿವರು ಹೇಳಿಕೊಂಡಿದ್ದಾರೆ.

“ಚರ್ಮದ ಬಣ್ಣದಲ್ಲಿ ಎರಡು ವಿಧದ ಜನರಿದ್ದಾರೆ. ಹಳದಿ ಮಿಶ್ರಿತವಾದ ಆಕರ್ಷಕ ಬಿಳುಪಿನ ಮೈಬಣ್ಣ ಹೊಂದಿರುವವರು ಮತ್ತು ಎಣ್ಣೆಗೆಂಪು ಛಾಯೆಯನ್ನು ಹೊಂದಿರುವವರು. ಟ್ಯಾಗೋರರು ಎರಡನೇ ವರ್ಗಕ್ಕೆ ಸೇರಿದವರು” ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಟ್ಯಾಗೋರರ ಕವಿತೆ ವೈರಲ್

ಸಚಿವರ ಹೇಳಿಕೆಗೆ ಟ್ಯಾಗೋರ್‌ ಅಭಿಮಾನಿಗಳು, ತಜ್ಞರು ಮತ್ತು ವಿಪಕ್ಷಗಳು ಕಿಡಿ ಕಾರಿವೆ. ಶಿಕ್ಷಣ ಸಚಿವರನ್ನು ಅವಿದ್ಯಾವಂತರು ಎಂದು ಆಕ್ರೋಶ ವ್ಯಕ್ತಪಡಿಸಿವೆ.

“ಮಾನ್ಯ ಸಚಿವರು ಯಾವ ಆಧಾರದ ಮೇಲೆ ಇಂತಹ ಟೀಕೆಗಳನ್ನು ಮಾಡಿದರು. ಅವರು ಟ್ಯಾಗೋರರ ಜೀವನಚರಿತ್ರೆಯನ್ನು ಸಂಪೂರ್ಣವಾಗಿ ಓದಿದ್ದಾರೆಯೇ ಅಥವಾ ಅವರ ಬರಹಗಳನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೋ ಗೊತ್ತಿಲ್ಲ” ಎಂದು ವಿಶ್ವ ಭಾರತಿ ವಿಶ್ವವಿದ್ಯಾನಿಲಯ ಉಪಕುಲಪತಿ ಪಬಿತ್ರಾ ಸರ್ಕಾರ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್  ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಬಂಗಾಳದ  ಅಸ್ಮಿತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. “ಸುಭಾಷ್ ಸರ್ಕಾರ್ ಅವರಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ. ರವೀಂದ್ರನಾಥ ಟ್ಯಾಗೋರ್ ಬಿಳೀ ಮೈಬಣ್ಣ ಹೊಂದಿದ್ದ ಚರ್ಮದವರು ಎಂಬುದು ಎಲ್ಲರಿಗೂ ತಿಳಿದಿದೆ. ಇದು ಜನಾಂಗೀಯ ನಿಂದನೆ. ಸುಭಾಷ್ ಸರ್ಕಾರಕ್ಕೆ ಮತ್ತೊಮ್ಮೆ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಪ್ರವೇಶ  ನೀಡಬಾರದು” ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ (ಎಂ) ಕೇಂದ್ರ ಸಮಿತಿಯ ಸದಸ್ಯ ಸುಜನ್ ಚಕ್ರವರ್ತಿ, “ಇಂತಹ ಟೀಕೆಗಳು ಬಿಜೆಪಿಯ ಜನಾಂಗೀಯ ನಿಂದನೆ ಮತ್ತು ಬಂಗಾಳಿ ವಿರೋಧಿ ಮನಸ್ಥಿತಿಯನ್ನು ಮಾತ್ರ ಪ್ರತಿಬಿಂಬಿಸುತ್ತವೆ” ಎಂದು ಟೀಕಿಸಿದ್ದಾರೆ.

ಆದರೆ, ಸಚಿವರ ಪರ ಬ್ಯಾಟ್ ಬಿಸಿರುವ ಬಂಗಾಳ ಬಿಜೆಪಿ, “ಸುಭಾಷ್ ಸರ್ಕಾರ್ ರವೀಂದ್ರನಾಥ ಟ್ಯಾಗೋರ್ ಅಥವಾ ಅವರ ಕುಟುಂಬದ ವಿರುದ್ಧ ಏನನ್ನೂ ಹೇಳಿಲ್ಲ. ಅವರು ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಮಾತನಾಡಿದ್ದಾರೆ. ಅವರ ಟೀಕೆಗಳು ಯಾರನ್ನೂ ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ. ಟಿಎಂಸಿ ಎಲ್ಲದರಲ್ಲೂ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು” ಎಂದಿದೆ.


ಇದನ್ನೂ ಓದಿ: ಯುವ ಸಂಕಲ್ಪ ಯಾತ್ರೆ:ಬಂಗಾಳದಲ್ಲಿ ಶಾಸಕ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...