Homeಮುಖಪುಟಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳು, ಬಿಜೆಪಿಗರಿಗೆ ಏಕಿಲ್ಲ?

- Advertisement -
- Advertisement -

ರಾಜ್ಯದ ಸಾವಿರಾರು ಜನರು ಕೋವಿಡ್‌ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೇ ಅವಿತು ಕುಳಿತು ಈಗ ದಿಢೀರ್‌ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಬದಲು ಹೆಣಾಶೀರ್ವಾದ ಯಾತ್ರೆ ಮಾಡುವುದು ಸೂಕ್ತ ಎಂದು ಆಪ್ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೋವಿಡ್‌ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್‌, ಆಕ್ಸಿಜನ್‌ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತು. ಪರಿಣಾಮವಾಗಿ, ಸಮೀಕ್ಷೆ ನಡೆಸಿದಾಗ ಹಾಗೂ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಜನಾಶೀರ್ವಾದ ಹೆಸರಿನಲ್ಲಿ ಸುಳ್ಳುಗಳನ್ನು ಪ್ರಚಾರ ಮಾಡುವ ಬದಲು ಹೆಣಾಶೀರ್ವಾದ ಹೆಸರಿನಲ್ಲಿ ಸ್ಮಶಾನಕ್ಕೆ ಹೋಗಿ, ನಿಜಕ್ಕೂ ಕೋವಿಡ್‌ನಿಂದ ಮೃತಪಟ್ಟ ಎಷ್ಟು ಶವಗಳು ಅಲ್ಲಿಗೆ ಬಂದಿವೆ ಎಂದು ವಿಚಾರಿಸಲಿ” ಎಂದು ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್‌, ಡೀಸೆಲ್‌ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‌ಪಿಜಿ) ಸಿಲೆಂಡರ್‌ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‌ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ದೇಶಪ್ರೇಮ, ಹಿಂದುತ್ವ ಕೇವಲ ಭಾಷಣಕ್ಕೆ ಹಾಗೂ ಗಲಭೆ ಸೃಷ್ಟಿಸುವುದಕ್ಕೆ ಸೀಮಿತ. “ಹಿಂದೂ ರಾಷ್ಟ್ರ” ಮಾಡುತ್ತೇವೆ ಎಂದು ಹೇಳಿದವರು “ಹಿಂದುಳಿದ ರಾಷ್ಟ್ರ” ಮಾಡುತ್ತಿದ್ದಾರೆ. ಕೃಷಿ ಕಾಯಿದೆ, ಸಿಎಎ, ಎನ್‌ಆರ್‌ಸಿ ಮುಂತಾದವುಗಳಿಗೆ ತಿದ್ದುಪಡಿ ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದೇ ಕೇಂದ್ರ ಸರ್ಕಾರದ ಸಾಧನೆ ಎಂದು ಜಗದೀಶ್ ಸದಂ ವ್ಯಂಗ್ಯವಾಡಿದ್ದಾರೆ.

ಆಪ್ ಕಚೇರಿ ಕಾರ್ಯದರ್ಶಿ ವೀಣಾ ಸೆರ್ರಾವ್‌ರವರು ಮಾತನಾಡಿ, “ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳನ್ನು ಜಾರಿಗೆ ತಂದು, ಸಚಿವರು ಮಾತ್ರ ಸ್ವೇಚ್ಛಾಚಾರದಿಂದ ಸಾವಿರಾರು ಬೆಂಬಲಿಗರನ್ನು ಸೇರಿಸುವುದು ಎಷ್ಟು ಸರಿ? ರಾಜ್ಯದಲ್ಲಿ ಬಿಜೆಪಿ ಸಚಿವರಿಗೇ ಒಂದು ಕಾನೂನು, ಸಾಮಾನ್ಯ ಜನರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದರೂ ಸಚಿವರುಗಳು ತಮ್ಮ ನಡೆಯನ್ನು ಬದಲಿಸಿಕೊಳ್ಳದಿರುವುದು ದುರಂತ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರು ಸಂಭ್ರಮಿಸಿದಂತೆ ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ಅಭಿಮಾನಿಗಳು ಬಂದೂಕಿನಿಂದ ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ಕೂಡ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಖಂಡಿಸಿದೆ. ರಾಜ್ಯದಲ್ಲಿ ಕರೋನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ? ಇದು ಕರೋನಾಶಿರ್ವಾದಯಾತ್ರೆ ಎಂದು ಕಿಡಿಕಾರಿದೆ.


ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...