Homeಅಂತರಾಷ್ಟ್ರೀಯಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಅಘ್ಘನ್ ಅನ್ನು ವಶಪಡಿಸಿಕೊಂಡಿರುವ ತಾಲಿಬಾನ್ ಆಡಳಿತಕ್ಕೆ ಮುಂದಾಗಿದೆ. ಅದರ ಮುಖಂಡರ ಪರಿಚಯ ಇಲ್ಲಿದೆ

- Advertisement -
- Advertisement -

ಭಯೋತ್ಪಾದಕರನ್ನು ಮಟ್ಟ ಹಾಕುತ್ತೇನೆ ಎಂದು ಅಫ್ಘಾನ್‌ಗೆ ತನ್ನ ಪಡೆಯನ್ನು ಇಳಿಸಿದ್ದ ಅಮೆರಿಕಾ, ಬರೋಬ್ಬರಿ 20 ವರ್ಷಗಳ ನಂತರ ಮತ್ತೆ ತಾಲಿಬಾನ್‌ ಕೈಯಲ್ಲಿ ಅಧಿಕಾರ ಕೊಟ್ಟು ಹೊರಟು ಹೋಗಿದೆ. 20 ವರ್ಷಗಳ ಹಿಂದೆ ಯಾರ ಕೈಯ್ಯಲ್ಲಿ ಅಫ್ಘಾನ್‌ ಇತ್ತೋ ಅದೇ ತಾಲಿಬಾನ್‌ ಕೈಯ್ಯಲ್ಲಿ ಇವತ್ತು ಅಫ್ಘಾನ್‌ ಇದೆ. ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿದರೆ ಏನಾಗುತ್ತದೆ ಎಂದು ತಾಲಿಬಾನ್‌ ಇಪ್ಪತ್ತು ವರ್ಷಗಳ ಹಿಂದೆ ಜಗತ್ತಿಗೆ ತೋರಿಸಿದೆ.

ಪ್ರಸ್ತುತ ತಾಲಿಬಾನ್‌ ತಾವು ಶತ್ರಗಳಿಗೆ ಕ್ಷಮೆ ನೀಡಿದ್ದೇವೆ, ವಿವಿಧ ಜನಾಂಗಗಳನ್ನು ಒಳಗೊಂಡ ಸರ್ಕಾರವನ್ನು ರಚಿಸುತ್ತೇವೆ, ಅಫ್ಘಾನ್ ನೆಲದಿಂದ ಭಯೋತ್ಪಾದಕ ಗುಂಪುಗಳನ್ನು ದೂರವಿಡುತ್ತೇವೆ ಮತ್ತು ಮಹಿಳೆಯರಿಗೆ ಶರಿಯಾ ಕಾನೂನಿನ ಮಿತಿಯಲ್ಲಿ ಕೆಲಸ ಮಾಡಲು ಅವಕಾಶ ನೀಡುತ್ತೇವೆ ಎಂದು ಹೇಳುತ್ತಿದೆ. ಇದೇ ಸಂದರ್ಭದಲ್ಲಿ ಅಫ್ಘಾನ್ ಸ್ವಾತಂತ್ರ್ಯ ದಿನ ಮೆರವಣಿಗೆ ಹೊರಟವರ ಮೇಲೆ ತಾಲಿಬಾನ್ ಗುಂಡಿನ ದಾಳಿ ಮಾಡಿದೆ ಎಂಬ ವರದಿಗಳು ಬರುತ್ತಿವೆ. ಇನ್ನು ಅಮೆರಿಕಾ ಮತ್ತು ಅದರ ಮಿತ್ರರಾಷ್ಟ್ರಗಳು ತಾಲಿಬಾನ್‌ ಅನ್ನು ಅಫ್ಘಾನಿಸ್ತಾನದ ಕಾನೂನುಬದ್ಧ ಹೊಸ ಆಡಳಿತಗಾರರು ಎಂದು ಗುಂಪನ್ನು ಗುರುತಿಸಲು ಹಲವು ಷರತ್ತುಗಳನ್ನು ವಿಧಿಸಿದೆ.

ಇದನ್ನೂ ಓದಿ: ಅಫ್ಘಾನ್ ತಾಲಿಬಾನ್ ಗೆಲುವು: ಒಂದು ಎಡಪಂಥೀಯ ನೋಟ

ತಾಲಿಬಾನ್‌ನ ಹಿರಿಯ ನಾಯಕತ್ವವು, 1980 ರಲ್ಲಿ ಸೋವಿಯತ್ ಒಕ್ಕೂಟದ ವಿರುದ್ಧ ಹೋರಾಡಲು ಅಮೆರಿಕಾದಿಂದ ತರಬೇತಿ ಪಡೆದ ಮುಜಾಹಿದ್ದೀನ್ ಬಂಡೂಕೋರರನ್ನು ಒಳಗೊಂಡಿದೆ. ತಾಲಿಬಾನ್‌ನಲ್ಲಿ ಬಹುಪಾಲು ಪಶ್ತೂನ್‌‌ ಜನಾಂದವರೆ ಹೆಚ್ಚಿದ್ದು, ಅಘ್ಘಾನ್‌ನ ದಕ್ಷಿಣ ಭಾಗದಲ್ಲಿ ಹೆಚ್ಚು ಪ್ರಬಲವಾಗಿದೆ.

ತಾಲಿಬಾನ್‌‌ನ ಏಳು ಪ್ರಭಾವಿ ನಾಯಕರ ಪಟ್ಟಿ ಹೀಗಿದೆ

ಹೈಬತುಲ್ಲಾ ಅಖುಂಜದಾ, ಸುಪ್ರೀಂ ಕಮಾಂಡರ್

1961 ರಲ್ಲಿ ಜನಿಸಿದ ಅಖುಂಜದಾ ತಾಲಿಬಾನ್‌ನ ಅತ್ಯುನ್ನತ ನಾಯಕ. 2016 ರಲ್ಲಿ ತಾಲಿಬಾನ್‌‌ನ ಮೂರನೇ ಸುಪ್ರೀಂ ಕಮಾಂಡರ್ ಆದರು. ಅವರ ಪೂರ್ವಾಧಿಕಾರಿಯನ್ನು ಅಮೆರಿಕಾ ಅದೇ ಸಮಯದಲ್ಲಿ ಡ್ರೋನ್‌ ಸ್ಟ್ರೈಕ್‌ ಮೂಲಕ ಕೊಂದು ಹಾಕಿತ್ತು. ಅಖುಂಜದಾ ಮಿಲಿಟರಿ ಕಮಾಂಡರ್‌ಗಿಂತ ಧಾರ್ಮಿಕ ನಾಯಕನಾಗಿ ಹೆಚ್ಚು ಹೆಸರುವಾಸಿಯಾಗಿದ್ದು, ಇವರು ಹೆಚ್ಚಾಗಿ ಪ್ರಚಾರಕ್ಕೆ ಬಂದಿಲ್ಲ.

ಹೈಬತುಲ್ಲಾ ಅಖುಂಜದಾ

ಅಲ್ಲದೆ ತಾಲಿಬಾನ್‌ನ ಅಗ್ರ ನಾಯಕನಾದ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಕೆಲವೇ ಕೆಲವು ಫೋಟೋಗಳು ಲಭ್ಯವಿವೆ. ಅಖುಂಜದಾ ತನ್ನ ಕೊನೆಯ ಸಾರ್ವಜನಿಕ ಹೇಳಿಕೆಯನ್ನು ಮೇ ತಿಂಗಳ ಈದ್ ಅಲ್-ಫಿತರ್ ಹಬ್ಬದ ದಿನ ನೀಡಿದ್ದರು.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

ಅಬ್ದುಲ್ ಘನಿ ಬರದಾರ್, ಉಪ ನಾಯಕ

ಅಬ್ದುಲ್ ಘನಿ ಬರದಾರ್‌ ತಾಲಿಬಾನ್‌ನ ಉಪ ನಾಯಕರಾಗಿದ್ದಾರೆ. ಜೊತೆಗೆ ತಾಲಿಬಾನ್‌ನ ಮುಖ್ಯ ಸಾರ್ವಜನಿಕ ಮುಖ ಕೂಡಾ ಆಗಿದ್ದು, ಅಫ್ಘಾನ್‌ನ ಮುಂದಿನ ಸರ್ಕಾರದ ಮುಖ್ಯಸ್ಥರಾಗಿರುತ್ತಾರೆ. ಒಸಾಮಾ ಬಿನ್ ಲಾಡೆನ್ ಜೊತೆ ನಿಕಟ ಸಂಬಂಧ ಹೊಂದಿದ್ದವರಲ್ಲಿ ಇವರು ಕೂಡಾ ಒಬ್ಬರು. ತಾಲಿಬಾನ್‌ನ ಮೊದಲ ಸುಪ್ರೀಂ ಕಮಾಂಡರ್‌ ಆಗಿದ್ದ ಮುಲ್ಲಾ ಮೊಹಮ್ಮದ್ ಒಮರ್ ಜೊತೆಗೆ ತಾಲಿಬಾನ್ ಅನ್ನು ಸ್ಥಾಪಿಸಿದವರು.

2010 ರಲ್ಲಿ ಪಾಕಿಸ್ತಾನದ ಬಂದರು ನಗರವಾದ ಕರಾಚಿಯಲ್ಲಿ ಅಮೆರಿಕದ ಗುಪ್ತಚರ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಬರದಾರನ್ನು ಸೆರೆಹಿಡಿಯಲಾಯಿತು. ಅಫ್ಘಾನಿಸ್ತಾನದ ಅಮೆರಿಕಾ ವಿಶೇಷ ಪ್ರತಿನಿಧಿ ಟ್ರಂಪ್ ಆಡಳಿತದೊಂದಿಗೆ ಶಾಂತಿ ಮಾತುಕತೆಗೆ ಮುಂಚಿತವಾಗಿ 2018 ರಲ್ಲಿ ಆತನ ಬಿಡುಗಡೆಗೆ ಸಹಾಯ ಮಾಡಿದರು ಎಂದು ವರದಿಯಾಗಿದೆ.

ಅಬ್ದುಲ್ ಘನಿ ಬರದಾರ್

ಅವರು ಮಂಗಳವಾರ ತಾಲಿಬಾನ್‌‌ನ ಜನ್ಮಸ್ಥಳವಾದ ಕಂದಹಾರ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಅಲ್ಲಿವರೆಗೂ ತಾಲಿಬಾನ್‌ಗಳ ರಾಜಕೀಯ ಕಚೇರಿಯಿರುವ ಕತಾರ್‌ನ ದೋಹಾದಲ್ಲಿ ಅವರು ವಾಸುತ್ತಿದ್ದರು. ತಾಲಿಬಾನ್‌ನ ರಾಜತಾಂತ್ರಿಕ ನಾಯಕನಾಗಿರುವ ಅವರು, 2020ರ ಫೆಬ್ರವರಿಯಲ್ಲಿ ಟ್ರಂಪ್ ಆಡಳಿತದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದರು. ಈ ಒಪ್ಪಂದವೆ ಅಫ್ಘಾನಿಸ್ತಾನದಿಂದ ಅಮೆರಿಕಾ ಮತ್ತು ನ್ಯಾಟೋ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಮಾಡಿತು. ಅಬ್ದುಲ್ ಘನಿ ಬರದಾರ್ ಈ ತಿಂಗಳ ಆರಂಭದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿಯನ್ನು ಟಿಯಾಂಜಿನ್‌ನಲ್ಲಿ ಭೇಟಿಯಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ: ಕಾಬೂಲ್‌: ಗುರುದ್ವಾರಕ್ಕೆ ಭೇಟಿ ನೀಡಿ ಸಿಖ್ಖರು, ಹಿಂದೂಗಳೊಂದಿಗೆ ಮಾತನಾಡಿದ ತಾಲಿಬಾನಿಗಳು

ಸಿರಾಜುದ್ದೀನ್ ಹಕ್ಕಾನಿ, ಅಮೆರಿಕಾ ಗುರುತಿಸಿದ ಭಯೋತ್ಪಾದಕ ಗುಂಪಿನ ನಾಯಕ

ಸಿರಾಜುದ್ದೀನ್ ಹಕ್ಕಾನಿ ‘ಹಕ್ಕಾನಿ ನೆಟ್‌ವರ್ಕ್‌’ನ ನಾಯಕ. ಅಮೆರಿಕಾ ಇದನ್ನು ಭಯೋತ್ಪಾದಕ ಸಂಘಟನೆ ಎಂದು ಗುರುತಿಸಿದೆ. 2016 ರಲ್ಲಿ ಈ ಗುಂಪುಗಳು ತಾಲಿಬಾನ್‌ ಜೊತೆ ವಿಲೀನಗೊಂಡಿತು. ಇದರ ನಂತರ ಹಕ್ಕಾನಿ ತಾಲಿಬಾನ್‌ನ ಎರಡನೆ ಉಪ ನಾಯಕನಾದರು. ಇವರು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಓಡಾಡಿಕೊಂಡು ಎರಡು ದೇಶಗಳಾದ್ಯಂತ ಮಿಲಿಟರಿ ಮತ್ತು ಸೈನ್ಯವನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಲಾಗಿದೆ.

ಸಿರಾಜುದ್ದೀನ್ ಹಕ್ಕಾನಿ

ತಾಲಿಬಾನ್ ಜೊತೆ ನಡೆಯುತ್ತಿರುವ ಮಾತುಕತೆಯ ಭಾಗವಾಗಿ ಹಕ್ಕಾನಿ ನೆಟ್ವರ್ಕ್ ಅನ್ನು ಅಮೆರಿಕಾ ಹೇಗೆ ಪರಿಗಣಿಸುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ಅವರ ಸಹೋದರ, ಪ್ರಮುಖ ತಾಲಿಬಾನ್ ನಾಯಕನೂ ಆಗಿದ್ದು, 2014 ರಲ್ಲಿ ಬಹರೈನ್‌ನಲ್ಲಿ ಅಮೆರಿಕಾ ಪಡೆಗಳಿಂದ ಸೆರೆಹಿಡಿಯಲ್ಪಟ್ಟರು. ನಾಲ್ಕು ವರ್ಷಗಳ ನಂತರ ಬಿಡುಗಡೆಯಾದರು.

ಮೊಹಮ್ಮದ್ ಯಾಕೂಬ್, ತಾಲಿಬಾನ್‌ ಸಂಸ್ಥಾಪಕನ ಮಗ

ಮೊಹಮ್ಮದ್ ಯಾಕೂಬ್

ಯಾಕೂಬ್ ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್‌ ಪುತ್ರ. ತನ್ನ ತಂದೆಯ ಕಾರಣಕ್ಕೆ ಒಮ್ಮೆ ತಾಲಿಬಾನ್‌ನ ಉನ್ನತ ಹುದ್ದೆಗೆ ಸ್ಪರ್ಧಿಯಾಗಿದ್ದರು. ಯಾಕೂಬ್‌ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲ. ನೆರೆಯ ಪಾಕಿಸ್ತಾನದಲ್ಲಿನ ಸೆಮಿನರಿಯಲ್ಲಿ ಶಿಕ್ಷಣ ಪಡೆದಿದ್ದ ಯಾಕೂಬ್‌, ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದಾರೆ ಎಂದು ಸುದ್ದಿಗಳು ಸೂಚಿಸುತ್ತವೆ. ಸಿರಾಜುದ್ದೀನ್ ಹಕ್ಕಾನಿಯೊಂದಿಗೆ ತಾಲಿಬಾನ್‌ನ ಸೇನಾ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದೂ ನಂಬಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ‘ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಏನು ಮಾಡಿದ್ದೀರಿ?’ – ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಅಬ್ದುಲ್ ಹಕೀಂ ಹಕ್ಕಾನಿ, ಪ್ರಮುಖ ಸಂಧಾನಕಾರ

ಅಬ್ದುಲ್ ಹಕೀಂ ಹಕ್ಕಾನಿ

ಸುಪ್ರೀಂ ಕಮಾಂಡರ್ ಅಖುಂಜದಾ ಆಪ್ತನೆಂದು ನಂಬಲಾಗಿರುವ ಹಕೀಂ ಹಕ್ಕಾನಿ, ತಾಲಿಬಾನ್‌ನ ಸಂಧಾನ ತಂಡದ ಮುಖ್ಯಸ್ಥರಾಗಿದ್ದಾರೆ. ಅಫ್ಘಾನ್‌ನ ಹಿಂದಿನ ಅಮೆರಿಕಾ ಬೆಂಬಲಿತ ಸರ್ಕಾರದೊಂದಿಗೆ ಶಾಂತಿ ಮಾತುಕತೆಯ ಉಸ್ತುವಾರಿ ವಹಿಸಿದ್ದರು. ಜೊತೆಗೆ ಧಾರ್ಮಿಕ ವಿದ್ವಾಂಸರ ಹಿರಿಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನಿಕ್‌ಜಾಯ್, ಪ್ರಮುಖ ರಾಜತಾಂತ್ರಿಕ

ಗುಂಪಿನ ಇತರ ನಾಯಕರಂತಲ್ಲದೆ, ಸ್ಟಾನಿಕ್‌ಜಾಯ್ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಕಳೆದ ಬಾರಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ಹಿಡಿದಿದ್ದಾಗ ಉಪ ವಿದೇಶಾಂಗ ಮಂತ್ರಿಯಾಗಿ ಪ್ರಪಂಚದಾದ್ಯಂತ ವ್ಯಾಪಕವಾಗಿ ಪ್ರಯಾಣಿಸಿದ್ದರು. 1996 ರಲ್ಲಿ, ತಾಲಿಬಾನ್ ಸರ್ಕಾರವನ್ನು ಒಪ್ಪಿಕೊಳ್ಳುವಂತೆ ಕ್ಲಿಂಟನ್ ಆಡಳಿತವನ್ನು ಮನವೊಲಿಸಲು ನಡೆಸಿದ ವಿಫಲವಾದ ಕಾರ್ಯಾಚರಣೆಯಲ್ಲಿ ಸ್ಟಾನಿಕ್‌ಜಾಯ್‌ ವಾಷಿಂಗ್ಟನ್‌ಗೆ ಭೇಟಿ ನೀಡಿದ್ದರು.

ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನಿಕ್‌ಜಾಯ್

ರಾಯಿಟರ್ಸ್ ವರದಿಯ ಪ್ರಕಾರ, ಸ್ಟಾನಿಕ್‌ಜಾಯ್‌ ತನ್ನ ನಿಯೋಗಗಳನ್ನು ಚೀನಾದ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲು ಕರೆದೊಯ್ದಿದ್ದಾರೆ. ಅಫ್ಘಾನ್‌ನ ಸರ್ಕಾರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವ ಅಬ್ದುಲ್ ಹಕೀಮ್ ಹಕ್ಕಾನಿ ಅವರ ಉಪ ಸಮಾಲೋಚಕರಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಜಬಿಹುಲ್ಲಾ ಮುಜಾಹಿದ್, ಮುಖ್ಯ ವಕ್ತಾರ

ಜಬಿಹುಲ್ಲಾ ಮುಜಾಹಿದ್ ಈ ವಾರದ ಆರಂಭದಲ್ಲಿ ಕಾಬೂಲ್‌ನಲ್ಲಿ ನಡೆದ ತಾಲಿಬಾನ್‌ನ ಮೊದಲ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅಂತರಾಷ್ಟ್ರೀಯ ಸಮುದಾಯಕ್ಕೆ ತಾಲಿಬಾನ್‌ನ ಸಂದೇಶವನ್ನು ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ.

ಜಬಿಹುಲ್ಲಾ ಮುಜಾಹಿದ್

20 ವರ್ಷಗಳ ಯುದ್ಧದ ಸಮಯದಲ್ಲಿ, ಅವರು ಪತ್ರಕರ್ತರೊಂದಿಗೆ ದೂರವಾಣಿ ಮೂಲಕ ಅಥವಾ ಪಠ್ಯ ಸಂದೇಶಗಳ ಮೂಲಕ ಮಾತ್ರ ಸಂವಹನ ನಡೆಸಿದ್ದರು. ಆಗಸ್ಟ್ 17 ರಂದು ಪತ್ರಿಕಾಗೋಷ್ಠಿಯ ಸಂವಹನದಲ್ಲಿ ಅವರು ಸಾರ್ವಜನಿಕವಾಗಿ ಮೊದಲ ಬಾರಿಗೆ ಕಾಣಿಸಿಕೊಂಡರು.

ಇದನ್ನೂ ಓದಿ: ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...