Homeಅಂತರಾಷ್ಟ್ರೀಯಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

ಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

- Advertisement -
- Advertisement -

ಅಫ್ಘಾನಿಸ್ತಾನದ ಅಸದಾಬಾದ್ ನಗರದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರು ರಾಷ್ಟ್ರಧ್ವಜವನ್ನು ಹಾರಿಸಿದ್ದು ಗುಂಡಿನ ದಾಳಿಗೆ ಕಾರಣ ಎನ್ನಲಾಗಿದೆ. ಬುಧವಾರ ಇದೇ ರೀತಿಯ ಪ್ರತಿಭಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.

ಮಾಧ್ಯಮಗಳ ಪ್ರಕಾರ ಬಿಳಿ ತಾಲಿಬಾನ್ ಧ್ವಜಗಳನ್ನು ಕಿತ್ತುಹಾಕಿದ ಪ್ರತಿಭಟನಾಕಾರರು ಅಫ್ಘಾನ್ ಧ್ವಜವನ್ನು ಹಾರಿಸುತ್ತಿದ್ದರು. ಇದರಿಂದ ಕೋಪಗೊಂಡ ತಾಲಿಬಾನಿಗಳು ಪ್ರತಿಭಟನಾಕಾರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್‌ ಭಾನುವಾರ ವಶಪಡಿಸಿಕೊಂಡ ನಂತರ ಜನ ನಿಧಾನವಾಗಿ ವಿರೋಧಿಸಲು ಆರಂಭಿಸಿದ್ದಾರೆ.

ಅಸಾದಾಬಾದ್‌ನಲ್ಲಿನ ಸಾವುಗಳು ಗುಂಡಿನ ದಾಳಿಯಿಂದ ಉಂಟಾಗಿದೆಯೇ ಅಥವಾ ಗುಂಡಿನಿಂದ ತಪ್ಪಿಸಿಕೊಳ್ಳುವಾಗ ಉಂಟಾದ ಕಾಲ್ತುಳಿತದಿಂದ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಪ್ರತ್ಯಕ್ಷದರ್ಶಿ ಕುಹಾರ್ ಪ್ರಾಂತ್ಯದ ಮೊಹಮ್ಮದ್ ಸಲೀಂ ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

“ನೂರಾರು ಜನರು ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ಬೀದಿಗೆ ಬಂದರು. ಮೊದಲಿಗೆ ನಾನು ಹೆದರುತ್ತಿದ್ದೆ. ಆದರೆ ನನ್ನ ನೆರೆಹೊರೆಯವರೊಬ್ಬರು ರ್‍ಯಾಲಿಯಲ್ಲಿ ಸೇರಿಕೊಂಡಿದ್ದನ್ನು ನೋಡಿದಾಗ ನಾನು ಮನೆಯಲ್ಲಿರುವ ಧ್ವಜವನ್ನು ಹೊರತೆಗೆದೆ. ತಾಲಿಬಾನ್‌ಗಳ ಕಾಲ್ತುಳಿತ ಮತ್ತು ಗುಂಡಿನ ದಾಳಿಯಲ್ಲಿ ಹಲವಾರು ಜನರು ಸಾವನ್ನಪ್ಪಿದರು ಮತ್ತು ಗಾಯಗೊಂಡಿದ್ದಾರೆ” ಎಂದು ಮೊಹಮ್ಮದ್ ಸಲೀಂ ವಿವರಿಸಿದ್ದಾರೆ.

ಬುಧವಾರ, ಕೂಡ ಜಲಾಲಾಬಾದ್‌ನಲ್ಲಿ ಕಪ್ಪು, ಕೆಂಪು ಮತ್ತು ಹಸಿರು ಬಣ್ಣದ ರಾಷ್ಟ್ರೀಯ ಧ್ವಜವನ್ನು ಹಾರಿಸಿದ್ದ ಪ್ರತಿಭಟನಾಕಾರರ ಮೇಲೆ ತಾಲಿಬಾನಿಗಳು ಗುಂಡು ಹಾರಿಸಿದರು. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸಾಕ್ಷಿಗಳು ಮತ್ತು ಮಾಧ್ಯಮಗಳು ವರದಿ ಮಾಡಿವೆ.

Three dead after anti-Taliban protests in Jalalabad - World - Aaj.tv

ತಾಲಿಬಾನ್ ವಿರುದ್ಧ ಜನರನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿರುವ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಪ್ರತಿಭಟನೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ರಾಷ್ಟ್ರಧ್ವಜವನ್ನು ಹೊತ್ತುಕೊಂಡು ರಾಷ್ಟ್ರದ ಘನತೆಗಾಗಿ ನಿಂತವರಿಗೆ ಸೆಲ್ಯೂಟ್ ಮಾಡಿ” ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದರು.

ಅಫ್ಘಾನಿಸ್ತಾನವು 1919 ರ ಆಗಸ್ಟ್ 19 ರಂದು ಬ್ರಿಟಿಷ್ ನಿಯಂತ್ರಣದಿಂದ ಸ್ವಾತಂತ್ರ್ಯ ಪಡೆಯಿತು. ಹೀಗಾಗಿ ಆಗಸ್ಟ್ 19 ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ.


ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...