Homeಕರ್ನಾಟಕಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ, ಪ್ರತಿ ಜಿಲ್ಲೆಯಲ್ಲೂ ‘ಲಂಚಮುಕ್ತ ಕರ್ನಾಟಕ’ ಜಾಗೃತಿ ಅಭಿಯಾನವನ್ನು ಪಕ್ಷ ನಡೆಸುತ್ತಿದೆ.

- Advertisement -
- Advertisement -

ರಾಜ್ಯದ ಪ್ರಮುಖ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿರುವ ‘ಕರ್ನಾಟಕ ರಾಷ್ಟ್ರ ಸಮಿತಿ’(KRS) ಪಕ್ಷವು, ‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು ನಡೆಸುತ್ತಿದೆ. ಆಗಸ್ಟ್ 8 ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ, 32 ದಿನಗಳ ಕಾಲ, 3500 ಕಿಲೋಮೀಟರ್‌ ಪ್ರವಾಸ ಮತ್ತು ಜನಜಾಗೃತಿ ಅಭಿಯಾನದ ಮೂಲಕ ನಡೆಯಲಿದೆ.

ಈಗಾಗಲೆ 12 ದಿನವನ್ನು ಪೂರೈಸಿರುವ ಅಭಿಯಾನವು ಪ್ರಸ್ತುತ ಲಿಂಗಸುಗೂರು ಮತ್ತು ಮಸ್ಕಿಯಲ್ಲಿದ್ದು, ಇಂದು ಅಲ್ಲಿನ ತಾಲೂಕು ಕಚೇರಿಗಳಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಅಭಿಯಾನದ ಅಂಗವಾಗಿ ಪ್ರತಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿ, “ಲಂಚಮುಕ್ತ ಕರ್ನಾಟಕ” ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇಷ್ಟೇ ಅಲ್ಲದೆ, ಸ್ಥಳೀಯ ಭ್ರಷ್ಟಾಚಾರಿಗಳ ವಿರುದ್ದ ಜನಜಾಗೃತಿ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಾರ್ವಜನಿಕರೊಡನೆ ಮತ್ತು ವೈದ್ಯಾಧಿಕಾರಿಗಳೊಡನೆ ಅಲ್ಲಿಯ ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ, ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಆಗ್ರಹ, ಪರಿಸರ ಕಾರ್ಯಕ್ರಮಗಳು, ಪ್ರಾಮಾಣಿಕ ಹೋರಾಟಗಾರ/ರಾಜಕಾರಣಿಗಳ ಭೇಟಿ, ಭ್ರಷ್ಟರನ್ನು ರಾಜಕೀಯದಿಂದ ಹೊರಗಟ್ಟಲು ಪ್ರಾಮಾಣಿಕರು ಚುನಾವಣಾ ರಾಜಕೀಯವನ್ನು ಪ್ರವೇಶಿಸಲು ಉತ್ತೇಜನ, ಪಕ್ಷ ಸೇರ್ಪಡೆ, ಇತ್ಯಾದಿ ಕಾರ್ಯಕ್ರಮಗಳನ್ನು ಪಕ್ಷವು ಈ ಅಭಿಯಾನದ ಅಂಗವಾಗಿ ನಡೆಸುತ್ತಿದೆ.

“ತನ್ನ ನ್ಯಾಯಬದ್ದ ಕೆಲಸಕ್ಕಾಗಿ ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ಕೊಡುವ ಜನಸಾಮಾನ್ಯನಿಗೆ ಇಂದು ಅಲ್ಲಿ ಗೌರವ ಸಿಗುತ್ತಿಲ್ಲ. ರೈತರೂ ಸೇರಿದಂತೆ ಅತಿ ಹೆಚ್ಚು ಜನರು ಭೇಟಿ ಕೊಡುವ ಕಂದಾಯ ಇಲಾಖೆಯಲ್ಲಿಯಂತೂ ಲಂಚ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಂದು ಸುಲಿಗೆಯ, ವಂಚನೆಯ, ದೌರ್ಜನ್ಯದ ಕೇಂದ್ರಗಳಾಗಿವೆ ಹಾಗೂ ಅಪರಾಧಗಳನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿವೆ. ಇದರ ವಿರುದ್ಧ ಕೆಆರ್‌ಎಸ್‌ ಪಕ್ಷವು ಅಭಿಯಾನವನ್ನು ನಡೆಸುತ್ತಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಈ ಮಧ್ಯೆ, ದಾವಣಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆಯು ನಡೆದಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿ ಅವರು ಹೇಳುವಂತೆ, “ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ KRS ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಹರಿಹಾಯ್ದಿದ್ದಾರೆ. ಅವರ ಫೋನ್ ಕಿತ್ತುಕೊಂಡು, ಅದರಿಂದ ವಿಡಿಯೋ ಡಿಲೀಟ್ ಮಾಡಿ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿ, ನಂತರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಠಾಣೆಗೂ ಎಳೆದುಕೊಂಡು ಹೋಗಿ, ಅಲ್ಲಿಯೂ ಹೆದರಿಸಿ ಬೆದರಿಸಿ ಬಲಾತ್ಕಾರದಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೀಸರ ಈ ನಡೆಯ ಬಗ್ಗೆ ಪ್ರಕರಣ ದಾಖಲಿಸಲು ಠಾಣೆಗೆ ತೆರಳಿದಾಗ ಪಕ್ಷದ ಯುವ ಮುಖಂಡನ್ನು, ‘ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿದರು’ ಎಂದು ಸುಳ್ಳು ಆರೋಪ ಹೊರಿಸಿ ಠಾಣೆಯಲ್ಲಿಯೇ ಬಂಧಿಸಿ ಏಳು ಜೈಲಿನಲ್ಲಿಡಲಾಗಿತ್ತು. ಇದೀಗ ಅವರು ಜಾಮೀನಿನ ಅಡಿಯಲ್ಲಿ ಬಿಡುಗಡೆಯಾಗಿದ್ದು, ಇಂದಲ್ಲ ನಾಳೆ ದೂರುದಾರ ಪೊಲೀಸನಿಗೆ ಮಂಪರು ಪರೀಕ್ಷೆ ಮಾಡಿಸಿ ಅಮಾಯಕರ ಪ್ರಾಣ ಹಿಂಡುವ ಕಾನೂನು ಭಂಜಕ ಅಪರಾಧಿ ಮನೋಭಾವದ ಪೊಲೀಸರಿಗೆ ಪಕ್ಷವು ಪಾಠ ಕಲಿಸದೆ ಬಿಡುವುದಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪ್ರಕರಣದಲ್ಲಿ ಪೊಲೀಸರು ಅವರನ್ನು ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವಿಕೃಷ್ಣ ರೆಡ್ಡಿ ತಾನು ಆಗಸ್ಟ್‌ 24 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದು, “ಪೊಲೀಸರು ಅಂದು ಬಂಧಿಸಿದರೂ ಬಂಧಿಸಬಹುದೇನೋ! ಯಾರಿಗೆ ಗೊತ್ತು? ನಾನೂ ದಾವಣಗೆರೆ ಜೈಲು ನೋಡಿಲ್ಲ. ಈ ರಾಜ್ಯದಲ್ಲಿ ಅದೆಷ್ಟು ಸಾವಿರ, ಲಕ್ಷ ಅಮಾಯಕರು ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೋ! ಎಷ್ಟೆಲ್ಲಾ ನಿರಪರಾಧಿಗಳು ಸುಳ್ಳು ಕೇಸುಗಳಲ್ಲಿ ಜೈಲು ಪಾಲಾಗಿದ್ದಾರೋ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಭಿಯಾನ ಪ್ರಾರಂಭವಾಗಿ 12 ದಿನಗಳಷ್ಟೇ ಆಗಿದ್ದು ಈಗಾಗಲೆ ಪಕ್ಷದ ಅಭಿಯಾನವು ಸರ್ಕಾರಿ ಕಚೇರಿಗಳಲ್ಲಿನ ಹಲವು ಸಮಸ್ಯೆಗಳನ್ನು ಬಯಲಿಗೆ ಎಳೆದಿದೆ. ಅಭಿಯಾನದ ಎಲ್ಲಾ ದೃಶ್ಯಗಳನ್ನು ಪಕ್ಷವು ಫೇಸ್‌ಬುಕ್ ಮೂಲಕ ರಾಜ್ಯದ ಜನತೆಗೆ ತಲುಪಿಸುತ್ತಿದೆ. ಅಭಿಯಾನದ ತಂಡವು ಇನ್ನೂ ಇಪ್ಪತ್ತು ದಿನಗಳು ರಾಜ್ಯದಾದ್ಯಂತ ಸಂಚರಿಸಲಿದೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...